9:18 PM Monday19 - January 2026
ಬ್ರೇಕಿಂಗ್ ನ್ಯೂಸ್
ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ

ಇತ್ತೀಚಿನ ಸುದ್ದಿ

ಲೋಕಸಭೆ ಚುನಾವಣೆ: ದ.ಕ.ಜಿಲ್ಲೆಯ ಲೆಕ್ಕ ವೀಕ್ಷಕರಾಗಿ ಮೆರಗು ಸುರೇಶ್ ನೇಮಕ

29/03/2024, 18:39

ಮಂಗಳೂರು(reporterkarnataka.com): 2024ರ ಸಾರ್ವತ್ರಿಕ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗವು 17-ದಕ್ಷಿಣ ಕನ್ನಡ ಜಿಲ್ಲೆಗೆ ಅಭ್ಯರ್ಥಿಗಳ, ರಾಜಕೀಯ ಪಕ್ಷಗಳ ಚುನಾವಣಾ ಖರ್ಚು ವೆಚ್ಚಗಳ ಮೇಲೆ ನಿಗಾ ಇಡಲು ಚುನಾವಣಾ ಲೆಕ್ಕ ವೀಕ್ಷಕರನ್ನಾಗಿ ಐಆರ್ ಎಸ್ ಅಧಿಕಾರಿ ಮೆರಗು ಸುರೇಶ್ ಅವರನ್ನು ನಿಯೋಜಿಸಿದೆ.
ಮೆರಗು ಸುರೇಶ್ ಅವರು ದಕ್ಷಿಣ ಕನ್ನಡ ಜಿಲ್ಲೆಯ ಚುನಾವಣಾ ಲೆಕ್ಕ ವೀಕ್ಷಕರಾಗಿ ಜಿಲ್ಲೆಗೆ ಆಗಮಿಸಿದ್ದಾರೆ.
ಚುನಾವಣೆಯಲ್ಲಿ ರಾಜಕೀಯ ಪಕ್ಷದ ಅಭ್ಯರ್ಥಿಗಳು, ರಾಜಕೀಯ ಪಕ್ಷಗಳ ಚುನಾವಣಾ ಖರ್ಚುಗಳಿಗೆ ಸಂಬಂಧಿಸಿದ ದೂರು, ಅಹವಾಲುಗಳನ್ನು ಸಾರ್ವಜನಿಕರು ಚುನಾವಣಾ ವೀಕ್ಷಕರಿಗೆ ಸಲ್ಲಿಸಲು ಅವಕಾಶ ಕಲ್ಪಿಸಿಕೊಡಲಾಗಿದೆ. ಅವರು ಕೇಂದ್ರ ಸ್ಥಾನದಲ್ಲಿರುವ ಸಂದರ್ಭದಲ್ಲಿ ಪ್ರತಿದಿನ ಬೆಳಿಗ್ಗೆ 9:30 ರಿಂದ 10.30 ರವರೆಗೆ ಮಂಗಳೂರಿನ ಸರ್ಕ್ಯೂಟ್ ಹೌಸ್ (ಪಲ್ಗುಣಿ ಬ್ಲಾಕ್) ನಲ್ಲಿ ಸಾರ್ವಜನಿಕರ ಭೇಟಿಗೆ ಲಭ್ಯವಿರುತ್ತಾರೆ. ಇವರ ಮೊಬೈಲ್ ಸಂಖ್ಯೆ 9482757817 ಹಾಗೂ ದೂರವಾಣಿ ಸಂಖ್ಯೆ 0824-2001596 ಆಗಿದೆ.
ಅವರ ಇ-ಮೆಲ್ ಐಡಿ: expenditureobserverdk17@gmail.com
ಆಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು