2:07 PM Sunday13 - July 2025
ಬ್ರೇಕಿಂಗ್ ನ್ಯೂಸ್
Kodagu | ಕಾಡಾನೆಗಳ ಕಾಡಿಗೆ ಅಟ್ಟುವ ಕಾರ್ಯಾಚರಣೆ ಯಶಸ್ವಿ: 18 ಸಲಗಗಳು ಮರಳಿ… ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ… ಚಿಕ್ಕಮಗಳೂರು- ತಿರುಪತಿ ರೈಲಿಗೆ ಚಾಲನೆ: ಕಾಫಿನಾಡಿಗರ ದಶಕಗಳ ಕನಸು ಕೊನೆಗೂ ನನಸು Kodagu | ವಿರಾಜಪೇಟೆ ಕ್ಷೇತ್ರದ 1600 ಆದಿವಾಸಿಗಳಿಗೆ ಜಮೀನು ಹಕ್ಕುಪತ್ರ ವಿತರಣೆಗೆ ಅಸ್ತು:… ಹೆಚ್ಚುತ್ತಿರುವ ಕಾಡಾನೆಗಳ ದಾಂಧಲೆ: ವಿರಾಜಪೇಟೆ ತಿತಿಮತಿ ವ್ಯಾಪ್ತಿಯಲ್ಲಿ ಬಿರುಸುಗೊಂಡ ಕಾಡಿಗಟ್ಟುವ ಕಾರ್ಯಾಚರಣೆ Bangaluru | ನಾಗರಬಾವಿಯ ವಿಟಿಯು ಹಬ್ ಆ್ಯಂಡ್ ಸ್ಪೋಕ್ ಕೇಂದ್ರ ಉದ್ಘಾಟನೆ: ಕೇಂದ್ರ… SCSP-TSP ಯೋಜನೆ | ಅಧಿಕಾರಿಗಳು ಮೈಮರೆತರೆ ಪ್ರಕರಣ ದಾಖಲು ಗ್ಯಾರಂಟಿ: ಸಚಿವ ಡಾ.… New Delhi | ಮಿಸ್ ಯೂನಿವರ್ಸ್ ಕರ್ನಾಟಕ ವಿಜೇತೆ ಚಿಕ್ಕಮಗಳೂರಿನ ವಂಶಿ ಮುಖ್ಯಮಂತ್ರಿ… Kodagu | ಕುಶಾಲನಗರ-ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಡಿಕ್ಕಿ ಹೊಡೆದು ವ್ಯಕ್ತಿ ಸಾವು

ಇತ್ತೀಚಿನ ಸುದ್ದಿ

ಲೋಕಸಭೆ ಚುನಾವಣೆ: ದ.ಕ.ಜಿಲ್ಲೆಯ ಲೆಕ್ಕ ವೀಕ್ಷಕರಾಗಿ ಮೆರಗು ಸುರೇಶ್ ನೇಮಕ

29/03/2024, 18:39

ಮಂಗಳೂರು(reporterkarnataka.com): 2024ರ ಸಾರ್ವತ್ರಿಕ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗವು 17-ದಕ್ಷಿಣ ಕನ್ನಡ ಜಿಲ್ಲೆಗೆ ಅಭ್ಯರ್ಥಿಗಳ, ರಾಜಕೀಯ ಪಕ್ಷಗಳ ಚುನಾವಣಾ ಖರ್ಚು ವೆಚ್ಚಗಳ ಮೇಲೆ ನಿಗಾ ಇಡಲು ಚುನಾವಣಾ ಲೆಕ್ಕ ವೀಕ್ಷಕರನ್ನಾಗಿ ಐಆರ್ ಎಸ್ ಅಧಿಕಾರಿ ಮೆರಗು ಸುರೇಶ್ ಅವರನ್ನು ನಿಯೋಜಿಸಿದೆ.
ಮೆರಗು ಸುರೇಶ್ ಅವರು ದಕ್ಷಿಣ ಕನ್ನಡ ಜಿಲ್ಲೆಯ ಚುನಾವಣಾ ಲೆಕ್ಕ ವೀಕ್ಷಕರಾಗಿ ಜಿಲ್ಲೆಗೆ ಆಗಮಿಸಿದ್ದಾರೆ.
ಚುನಾವಣೆಯಲ್ಲಿ ರಾಜಕೀಯ ಪಕ್ಷದ ಅಭ್ಯರ್ಥಿಗಳು, ರಾಜಕೀಯ ಪಕ್ಷಗಳ ಚುನಾವಣಾ ಖರ್ಚುಗಳಿಗೆ ಸಂಬಂಧಿಸಿದ ದೂರು, ಅಹವಾಲುಗಳನ್ನು ಸಾರ್ವಜನಿಕರು ಚುನಾವಣಾ ವೀಕ್ಷಕರಿಗೆ ಸಲ್ಲಿಸಲು ಅವಕಾಶ ಕಲ್ಪಿಸಿಕೊಡಲಾಗಿದೆ. ಅವರು ಕೇಂದ್ರ ಸ್ಥಾನದಲ್ಲಿರುವ ಸಂದರ್ಭದಲ್ಲಿ ಪ್ರತಿದಿನ ಬೆಳಿಗ್ಗೆ 9:30 ರಿಂದ 10.30 ರವರೆಗೆ ಮಂಗಳೂರಿನ ಸರ್ಕ್ಯೂಟ್ ಹೌಸ್ (ಪಲ್ಗುಣಿ ಬ್ಲಾಕ್) ನಲ್ಲಿ ಸಾರ್ವಜನಿಕರ ಭೇಟಿಗೆ ಲಭ್ಯವಿರುತ್ತಾರೆ. ಇವರ ಮೊಬೈಲ್ ಸಂಖ್ಯೆ 9482757817 ಹಾಗೂ ದೂರವಾಣಿ ಸಂಖ್ಯೆ 0824-2001596 ಆಗಿದೆ.
ಅವರ ಇ-ಮೆಲ್ ಐಡಿ: expenditureobserverdk17@gmail.com
ಆಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು