3:18 PM Saturday23 - August 2025
ಬ್ರೇಕಿಂಗ್ ನ್ಯೂಸ್
ಬ್ರ್ಯಾಂಡ್ ಕರಾವಳಿ ಹೆಸರಲ್ಲಿ ಅಭಿವೃದ್ಧಿಗೆ ಒತ್ತು ನೀಡಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ನೇಹಿತನ ಆಟೋ ತರಲು ಹೋಗಿದ್ದ ಚಾಲಕ ಅಪಘಾತದಲ್ಲಿ ದುರ್ಮರಣ: ಕಾರು ಡಿಕ್ಕಿ ಹೊಡೆದು… ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆ ಪ್ರಕರಣ: ಸುಜಾತ ಭಟ್ ದೂರು ಎಸ್ಐಟಿಗೆ… ಕುಶಾಲನಗರ: ರಾಷ್ಟ್ರ ರಕ್ಷಣಾ ಪಡೆ ಸಂಸ್ಥಾಪಕ ಪುನೀತ್ ಕೆರೇಹಳ್ಳಿ ಪೊಲೀಸ್ ವಶಕ್ಕೆ ದಲಿತ ಸಿಎಂ ಕೂಗು ತಪ್ಪಿಸಲು ಒಳ ಮೀಸಲಾತಿ ಜಾರಿ: ದಿಲ್ಲಿಯಲ್ಲಿ ಮಾಜಿ ಸಿಎಂ… ತೋಟದಲ್ಲಿ ಬಿದ್ದಿದ್ದ ತೆಂಗಿನಕಾಯಿ ಹೆಕ್ಕಿದ್ದಕ್ಕೆ ಮಾಲೀಕನಿಂದ ಅಮಾನುಷ ಹಲ್ಲೆ: ಯುವಕ ಸಾವು ಧರ್ಮಸ್ಥಳ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಬೇಕು: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಟ್ಟು ಗುಳ್ಳ ನಂಟು ಉಡುಪಿ ಮಠಕ್ಕೂ ಉಂಟು: ವಾದಿರಾಜ ತೀರ್ಥರು ಬದನೆಗೆ ಹೆಸರಿಟ್ಟರಂತೆ! Kodagu | ಸೋಮವಾರಪೇಟೆ: ಯುವಕನ ಆತ್ಮಹತ್ಯೆ; 3 ದಿನಗಳ ಹುಡುಕಾಟದ ಬಳಿಕ ಮೃತದೇಹ… ರಾಜ್ಯದ ಮೊದಲ ‘ವಿದೇಶ ಅಧ್ಯಯನ ಎಕ್ಸ್‌ಪೋ’ ಯಶಸ್ವಿ: 10 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು…

ಇತ್ತೀಚಿನ ಸುದ್ದಿ

ಲಂಡನಿನ ಬರ್ಮಿಂಗ್ಹ್ಯಾಮ್ ಕಾಮನ್ವೆಲ್ತ್ ಕರಾಟೆ ಚಾಂಪಿಯನ್ ಶಿಪ್: ಅರುಣ್ ಮಾಚಯ್ಯ ಆಯ್ಕೆ

25/06/2022, 09:13

ಮಡಿಕೇರಿ(reporterkarnataka.com):
ಲಂಡನಿನ ಬರ್ಮಿಂಗ್ಹ್ಯಾಮ್ ನಲ್ಲಿ ಮುಂದಿನ ಸೆಪ್ಟೆಂಬರ್ 26ರಿಂದ ನಡೆಯಲಿರುವ ಕಾಮನ್ವೆಲ್ತ್ ಕರಾಟೆ ಚಾಂಪಿಯನ್ ಶಿಪ್ ಗೆ ಭಾರತ ತಂಡವನ್ನು ಪ್ರತಿನಿಧಿಸಲು ಹಿರಿಯ ಕರಾಟೆಪಟು ಮತ್ತು ಮಾಜಿ ಶಾಸಕ ಸಿ. ಎಸ್. ಅರುಣ್ ಮಾಚಯ್ಯ ಆಯ್ಕೆಗೊಂಡಿದ್ದಾರೆ.

ದಕ್ಷಿಣ ಭಾರತ ಕರಾಟೆ ಫೆಡರೇಷನ್ ಅಧ್ಯಕ್ಷರು, ಕರಾಟೆ ಇಂಡಿಯಾ ಆರ್ಗನೈಜೇಷನ್ ಹಿರಿಯ ಉಪಾಧ್ಯಕ್ಷರು ಹಾಗೂ ಅಖಿಲ ಕರ್ನಾಟಕ ಸ್ಪೋರ್ಟ್ಸ್ ಕರಾಟೆ ಅಸೋಸಿಯೇಷನ್ ಅಧ್ಯಕ್ಷರೂ ಆಗಿರುವ ಸಿ.ಎಸ್. ಅರುಣ್ ಮಾಚಯ್ಯ ಅವರು ಈ ಹಿಂದೆ ವಿಶ್ವದ ಹಲವೆಡೆ ನಡೆದ ಹಲವಾರು ಅಂತರರಾಷ್ಟ್ರೀಯ ಚಾಂಪಿಯನ್ಶಿಪ್ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದಾರೆ.

ಇತ್ತೀಚಿಗೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದ ರಾಷ್ಟ್ರೀಯ ಕರಾಟೆ ಚಾಂಪಿಯನ್ ಶಿಪ್ ಸಮಾರಂಭದಲ್ಲಿ ಕಾಮನ್ವೆಲ್ತ್ ಕರಾಟೆ ಚಾಂಪಿಯನ್ಶಿಪ್ ನಲ್ಲಿ ಪಾಲ್ಗೊಳ್ಳಲು ಆಯ್ಕೆಯಾಗಿರುವ ಅರುಣ್ ಮಾಚಯ್ಯ ಅವರನ್ನು ಅಭಿನಂದಿಸಿ ಬೀಳ್ಕೊಡಲಾಯಿತು.

ಅರುಣ್ ಮಾಚಯ್ಯ ಅವರನ್ನು ಅಭಿನಂದಿಸಿದ ಸಂದರ್ಭದಲ್ಲಿ ಕರಾಟೆ ಇಂಡಿಯಾ ಆರ್ಗನೈಸೇಶನ್ ಅಧ್ಯಕ್ಷರಾದ ಸಂಜೀವ್ ಕುಮಾರ್ ಜಾಗ್ರ, ವಿಶ್ವ ಕರಾಟೆ ಮಂಡಳಿಯ ತಾಂತ್ರಿಕ ಆಯೋಗದ ಸದಸ್ಯ ಭರತ್ ಶರ್ಮ, ಮಹಾರಾಷ್ಟ್ರ ಕರಾಟೆ ಅಸೋಸಿಯೇಷನ್ ಅಧ್ಯಕ್ಷ ಸಲಾಹುದ್ದೀನ್ ಅನ್ಸಾರಿ, ಮಹಾರಾಷ್ಟ್ರ ಕರಾಟೆ ಅಸೋಸಿಯೇಷನ್ ಕಾರ್ಯದರ್ಶಿ ಸಂದೀಪ್ ಘಾಡೆ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು