1:34 PM Friday30 - January 2026
ಬ್ರೇಕಿಂಗ್ ನ್ಯೂಸ್
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಕನ್ನಡ ಭಾಷೆ ಎಂದರೆ ಹಲವು ಆಯಾಮಗಳ ಸಾಧ್ಯತೆ: ಪುರುಷೋತ್ತಮ ಬಿಳಿಮಲೆ 600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ…

ಇತ್ತೀಚಿನ ಸುದ್ದಿ

ಲಂಡನಿನ ಬರ್ಮಿಂಗ್ಹ್ಯಾಮ್ ಕಾಮನ್ವೆಲ್ತ್ ಕರಾಟೆ ಚಾಂಪಿಯನ್ ಶಿಪ್: ಅರುಣ್ ಮಾಚಯ್ಯ ಆಯ್ಕೆ

25/06/2022, 09:13

ಮಡಿಕೇರಿ(reporterkarnataka.com):
ಲಂಡನಿನ ಬರ್ಮಿಂಗ್ಹ್ಯಾಮ್ ನಲ್ಲಿ ಮುಂದಿನ ಸೆಪ್ಟೆಂಬರ್ 26ರಿಂದ ನಡೆಯಲಿರುವ ಕಾಮನ್ವೆಲ್ತ್ ಕರಾಟೆ ಚಾಂಪಿಯನ್ ಶಿಪ್ ಗೆ ಭಾರತ ತಂಡವನ್ನು ಪ್ರತಿನಿಧಿಸಲು ಹಿರಿಯ ಕರಾಟೆಪಟು ಮತ್ತು ಮಾಜಿ ಶಾಸಕ ಸಿ. ಎಸ್. ಅರುಣ್ ಮಾಚಯ್ಯ ಆಯ್ಕೆಗೊಂಡಿದ್ದಾರೆ.

ದಕ್ಷಿಣ ಭಾರತ ಕರಾಟೆ ಫೆಡರೇಷನ್ ಅಧ್ಯಕ್ಷರು, ಕರಾಟೆ ಇಂಡಿಯಾ ಆರ್ಗನೈಜೇಷನ್ ಹಿರಿಯ ಉಪಾಧ್ಯಕ್ಷರು ಹಾಗೂ ಅಖಿಲ ಕರ್ನಾಟಕ ಸ್ಪೋರ್ಟ್ಸ್ ಕರಾಟೆ ಅಸೋಸಿಯೇಷನ್ ಅಧ್ಯಕ್ಷರೂ ಆಗಿರುವ ಸಿ.ಎಸ್. ಅರುಣ್ ಮಾಚಯ್ಯ ಅವರು ಈ ಹಿಂದೆ ವಿಶ್ವದ ಹಲವೆಡೆ ನಡೆದ ಹಲವಾರು ಅಂತರರಾಷ್ಟ್ರೀಯ ಚಾಂಪಿಯನ್ಶಿಪ್ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದಾರೆ.

ಇತ್ತೀಚಿಗೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದ ರಾಷ್ಟ್ರೀಯ ಕರಾಟೆ ಚಾಂಪಿಯನ್ ಶಿಪ್ ಸಮಾರಂಭದಲ್ಲಿ ಕಾಮನ್ವೆಲ್ತ್ ಕರಾಟೆ ಚಾಂಪಿಯನ್ಶಿಪ್ ನಲ್ಲಿ ಪಾಲ್ಗೊಳ್ಳಲು ಆಯ್ಕೆಯಾಗಿರುವ ಅರುಣ್ ಮಾಚಯ್ಯ ಅವರನ್ನು ಅಭಿನಂದಿಸಿ ಬೀಳ್ಕೊಡಲಾಯಿತು.

ಅರುಣ್ ಮಾಚಯ್ಯ ಅವರನ್ನು ಅಭಿನಂದಿಸಿದ ಸಂದರ್ಭದಲ್ಲಿ ಕರಾಟೆ ಇಂಡಿಯಾ ಆರ್ಗನೈಸೇಶನ್ ಅಧ್ಯಕ್ಷರಾದ ಸಂಜೀವ್ ಕುಮಾರ್ ಜಾಗ್ರ, ವಿಶ್ವ ಕರಾಟೆ ಮಂಡಳಿಯ ತಾಂತ್ರಿಕ ಆಯೋಗದ ಸದಸ್ಯ ಭರತ್ ಶರ್ಮ, ಮಹಾರಾಷ್ಟ್ರ ಕರಾಟೆ ಅಸೋಸಿಯೇಷನ್ ಅಧ್ಯಕ್ಷ ಸಲಾಹುದ್ದೀನ್ ಅನ್ಸಾರಿ, ಮಹಾರಾಷ್ಟ್ರ ಕರಾಟೆ ಅಸೋಸಿಯೇಷನ್ ಕಾರ್ಯದರ್ಶಿ ಸಂದೀಪ್ ಘಾಡೆ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು