5:55 AM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಲಾರಿ- ಬೈಕ್ ಡಿಕ್ಕಿ: ಗಾಯಾಳು ಬೈಕ್ ಸವಾರ ಗೋಣಿಕೊಪ್ಪಲು ಲೋಪಮುದ್ರ ಆಸ್ಪತ್ರೆಯಲ್ಲಿ ಸಾವು

05/01/2026, 23:57

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಪೊನ್ನoಪೇಟೆ ತಾಲ್ಲೂಕು ಹಾತೂರು ಸಮೀಪ ಬೈಕ್ ಹಾಗೂ ಲಾರಿ ನಡುವೆ ನಡೆದ ಅಪಘಾತದಲ್ಲಿ ಗಂಭೀರ ಸ್ವರೂಪಗಳ ಗಾಯಗಳು ಉಂಟಾಗಿ ಗೋಣಿಕೊಪ್ಪಲು ಲೋಪಮುದ್ರ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಯುವಕ ಮೃತಪಟ್ಟಿದ್ದಾನೆ.
ಮೃತಪಟ್ಟ ಯುವಕ ಬೆಕ್ಕೆಸುಡ್ಲೂರು ನಿವಾಸಿ ಸುಳ್ಳಿಮಡ ಭಜನ್ ದೇವಯ್ಯ (27) ಎಂದು ಗುರುತಿಸಲಾಗಿದೆ.
ಕೊಡಗಿನಿಂದ ಕೇರಳಕ್ಕೆ ಕೊಡಗು ರೈಡರ್ಸ್ ಕ್ಲಬ್ ವತಿಯಿಂದ ಆಯೋಜಿಸಲಾಗಿದ ಯಾತ್ರೆಯಲ್ಲಿ ಪಾಲ್ಗೊಂಡು ಕೇರಳದಿಂದ ವಾಪಸಾಗುತ್ತಿದ್ದಾಗ ಕಳೆದ ರಾತ್ರಿ 8:20ರ ಸಮಯದಲ್ಲಿ ಹಾತೂರಿನ ವನಭದ್ರಕಾಳಿ ದೇವಸ್ಥಾನದ ಸಮೀಪ ಕಾರು ಒಂದನ್ನು ಓವರ್ಟೇಕ್ ಮಾಡಿ ಮುನ್ನುಗುತ್ತಿದ್ದಾಗ ಮುಂಭಾಗದಲ್ಲಿ ಬಂದ ಲಾರಿಗೆ ಡಿಕ್ಕಿ ಪಡಿಸಿದ್ದಾನೆ ಎಂದು ಹೇಳಲಾಗಿದೆ.
ಮೃತ ಯುವಕನ ತಂದೆ ಕಳೆದ ಮೂರು ವರ್ಷಗಳ ಹಿಂದೆ ಬೆಕ್ಕೆಸುಡ್ಲೂರಿನಲ್ಲಿ ತನ್ನ ಮಗಳ ಮದುವೆಯ ಸಂದರ್ಭದಲ್ಲಿ ಅಪಘಾತಕ್ಕೀಡಾಗಿ ಮೃತಪಟ್ಟಿದ್ದರು. ನಂತರ ಮೃತನ ತಾಯಿ ಕೂಡ ಗೋಣಿಕೊಪ್ಪಲಿನಲ್ಲಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದು ಮೃತಪಟ್ಟಿದ್ದರು.

ಯುವಕ ಅವಿವಿವಾಹಿತಾನಾಗಿದ್ದ ಇದೀಗ ಇವರ ಕುಟುಂಬದಲ್ಲಿ ವಿವಾಹವಾದ ಇಬ್ಬರು ಸಹೋದರಿಯರು ಮಾತ್ರವಿದ್ದಾರೆ. ಮೃತ ಯುವಕ ಬೆಕ್ಕೆ ಸುಡ್ಲೂರಿನಲ್ಲಿ 12 ಎಕರಿಗಿಂತಲೂ ಹೆಚ್ಚು ಕಾಫಿ ತೋಟ ಹಾಗೂ ಗದ್ದೆ ಹೊಂದಿದ್ದು, ಸ್ವತಹ ತಾನೆ ಮುಂದೆ ನಿಂತು ಅಂದಾಜು 60 ಎಕರೆ ಗದ್ದೆಯಲ್ಲಿ ಈ ಬಾರಿ ಬತ್ತವನ್ನು ಬೆಳೆದಿದ್ದನ್ನು ಎಂದು ಹೇಳಲಾಗಿದೆ.
ಗೋಣಿಕೊಪ್ಪಲು ಪೊಲೀಸರು ಪ್ರಕರಣ ದಾಳಿ ದಾಖಲಿಸಿಕೊಂಡು, ಲಾರಿಯನ್ನು ವಶಕ್ಕೆ ಪಡೆದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು