5:18 AM Thursday6 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಲವ್ ಕಹಾನಿ: ಮಹಾರಾಷ್ಟ್ರದಲ್ಲಿ ತಂದೆಯಿಂದಲೇ  ದೂಧ್ ಗಂಗಾ ನದಿಗೆ ತಳ್ಳಲ್ಪಟ್ಟ ಟೀನೇಜ್ ಪುತ್ರಿ: ಶವ ಕರ್ನಾಟಕದಲ್ಲಿ ಪತ್ತೆ !

19/08/2021, 15:39

ಕೊಲ್ಹಾಪುರ(reporterkarnataka.com): ನೆರೆಯ ಮಹಾರಾಷ್ಟ್ರದಲ್ಲಿ ಜೀವಂತವಾಗಿ ನದಿಗೆ ತಳ್ಳಲ್ಪಟ್ಟ ಆ ಅಪ್ರಾಪ್ತ ವಯಸ್ಸಿನ ಹೆಣ್ಣು ಮಗಳ ಮೃತದೇಹ ತೇಲಿಕೊಂಡು ಕರ್ನಾಟಕಕ್ಕೆ ಬಂದಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ಶವ ಪತ್ತೆಯಾಗಿದೆ. ಆಕೆಯನ್ನು ನದಿಗೆ ತಳ್ಳಿದ್ದು ಬೇರೆ ಯಾರೂ ಅಲ್ಲ, ಬದಲಿಗೆ ಜನ್ಮಕೊಟ್ಟ ತಂದೆಯೇ ಈ ಕೃತ್ಯ ಎಸಗಿದ್ದ.

ಅದೊಂದು ಟೀನೇಜ್ ಲವ್ ಕಹಾನಿಗೆ ಸಂಬಂಧಿಸಿದ ಮರ್ಯಾದಾ ಹತ್ಯೆಯಾಗಿದೆ.

ಮಹಾರಾಷ್ಟ್ರ ಕೊಲ್ಹಾಪುರದ ಶಿರೋಲ್ ತಾಲೂಕಿನ ದತ್ತವಾಡ ನಿವಾಸಿಯಾದ ದಶರಥ್ ಕಾಟ್ಕರ್ ಎಂಬಾತ ತನ್ನ ಪುತ್ರಿ 17ರ ಹರೆಯದ ಸಾಕ್ಷಿ ಕಾಣೆಯಾಗಿದ್ದಾಳೆ ಎಂದು ಆಗಸ್ಟ್ 14ರಂದು ಕುರುಂದ್ವಾಡ್ ಪೊಲೀಸರಿಗೆ ದೂರು ನೀಡಿದ್ದ.

ಪೊಲೀಸರು ತನಿಖೆ ನಡೆಸಿದಾಗ ಯಾರೂ ಆಕೆಯನ್ನು ಅಪಹರಣ ಮಾಡಿದ ಬಗ್ಗೆ ಸುಳಿವು ದೊರಕಲಿಲ್ಲ. ಇದರಿಂದ ಸಂಶಯಗೊಂಡ ಪೊಲೀಸರು ತಂದೆಯನ್ನೇ ವಿಚಾರಣೆಗೆ ಗುರಿಪಡಿಸಿದರು. ಆ ವೇಳೆಗೆ ತಂದೆಯೇ ಮಗಳನ್ನು ನದಿಗೆ ತಳ್ಳಿ ಕೊಂದಿರುವ ವಿಚಾರ ಬೆಳಕಿಗೆ ಬಂತು.

ಮಗಳ ಪ್ರೇಮ ಪ್ರಕರಣದಿಂದ ಸಿಟ್ಟುಗೊಂಡು ತಾನೇ ಆಕೆಯನ್ನು ದೂಧಗಂಗಾ ನದಿಯ ದನ್ವಾಡ್ ಸೇತುವೆಯಿಂದ ತಳ್ಳಿದ್ದಾಗಿ ತಪ್ಪೊಪ್ಪಿಕೊಂಡಿದ್ದಾನೆ. ಸಾಕ್ಷಿಯ ಶವ ಬೆಳಗಾವಿಯ ಚಿಕ್ಕೋಡಿ ತಾಲೂಕಿನ ಕಲ್ಲೋಳ ಬಳಿ ಪತ್ತೆಯಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು