1:20 PM Sunday22 - March 2026
ಬ್ರೇಕಿಂಗ್ ನ್ಯೂಸ್
ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ

ಇತ್ತೀಚಿನ ಸುದ್ದಿ

ಕಾಡಾನೆ ದಾಳಿಯಿಂದ ಅದೃಷ್ಟವಶಾತ್ ತಂದೆ- ಮಗಳು ಜಸ್ಟ್ ಮಿಸ್: ಕೊಡಗಿನಲ್ಲಿ ತಪ್ಪಿದ ಭಾರಿ ಅನಾಹುತ, ವಿಡಿಯೋ ವೈರಲ್!

30/01/2026, 20:38

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕಾಡಾನೆ ಜೊತೆಗೆ ಶಾಲಾ ವಾಹನ ಚಾಲಕ ಹುಚ್ಚಾಟ ನಡೆಸಿದ್ದಾನೆ. ವಿಡಿಯೋ ಮಾಡುತ್ತಿದ್ದಾಗ ಕಾಡಾನೆ ಶಾಲಾ ಬಸ್ ಅನ್ನು ಅಟ್ಟಾಡಿಸಿದೆ. ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಮಾಲ್ದಾರೆ ಬಳಿ ಈ ಒಂದು ಘಟನೆ ನಡೆದಿದೆ.
ಮಗಳ ಕೈಯಲ್ಲಿ ಚಾಲಕ ಸುನಿಲ್ ವಿಡಿಯೋ ಮಾಡಿಸಿದ್ದಾನೆ.ಆನೆ ಹಿಮ್ಮುಖವಾಗಿ ಶಾಲಾ ವಾಹನ ಚಲಾಯಿಸಿ ಹುಚ್ಚಾಟ ಮೆರೆದಿದ್ದಾನೆ. ಶಾಲಾ ಮಕ್ಕಳನ್ನು ಬಿಟ್ಟು ಬರುವಾಗ ಒಂಟಿ ಸಲಗ ಎದುರಾಗಿತ್ತು. ವಾಹನ ನಿಲ್ಲಿಸಿ ಸುನಿಲ್ ಮಗಳಿಗೆ ವಿಡಿಯೋ ಮಾಡುವಂತೆ ಸೂಚನೆ ನೀಡಿದ್ದಾನೆ. ಸಿದ್ದಾಪುರದ ಬಿಜಿಎಸ್ ಶಿಕ್ಷಣ ಸಂಸ್ಥೆಗೆ ಸೇರಿದ ಶಾಲಾ ಬಸ್ ಇದಾಗಿದ್ದು ಚಾಲಕನ ಹುಚ್ಚಾಟಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಕಾಡಾನೆ ರಸ್ತೆ ಬದಿಯಲ್ಲಿ ಕಂಡು ಬಂದಿರುವ ಹಿನ್ನಲೆಯಲ್ಲಿ ನಿಧಾನಕ್ಕೆ ತೆರಳಿ ವಿಡಿಯೋ ಮಾಡಿದ್ದ ಚಾಲಕನ ನಿರ್ಲಕ್ಷ್ಯಕ್ಕೆ ಬಿಜಿಎಸ್ ಶಾಲೆ ಚಾಲಕ ಸೇರಿದಂತೆ ಮುಕ್ಯೋಪಾಧ್ಯಾಯರಿಗೆ ವಲಯ ಅರಣ್ಯ ಅಧಿಕಾರಿ ಗಂಗಾಧರ್ ನೋಟೀಸ್ ಜಾರಿ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು