5:07 PM Sunday30 - November 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಲಕ್ನೋ ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಧರಣಿ: ಪೊಲೀಸ್ ವಾಹನದಲ್ಲಿ ತೆರಳಲು ನೀಡಿದ ಆದೇಶ ವಿರುದ್ಧ ಪ್ರತಿಭಟನೆ

06/10/2021, 22:02

ಲಕ್ನೋ(reporterkarnataka.com): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಲಕ್ನೋದ ಚೌಧುರಿ ಚರಣ್ ಸಿಂಗ್ ವಿಮಾನ ನಿಲ್ದಾಣದಲ್ಲಿ ಧರಣಿ ಆರಂಭಿಸಿದ್ದಾರೆ. ಭದ್ರತಾ ಪಡೆ ಅವರನ್ನು ಸ್ವಂತ ವಾಹನದಲ್ಲಿ ಪ್ರಯಾಣಿಸಲು ಅವಕಾಶ ನೀಡದನ್ನು ಪ್ರತಿಭಟಿಸಿ ಧರಣಿ ನಡೆಸುತ್ತಿದ್ದಾರೆ.

ಹಿಂಸಾಚಾರ ನಡೆದ ಲಖೀಮ್ ಪುರಕ್ಕೆ ತೆರಳಲು ಲಕ್ನೊಗೆ ಆಗಮಿಸಿದ ರಾಹುಲ್ ಗಾಂಧಿ ಅವರಿಗೆ ಪೊಲೀಸ್ ವಾಹನದಲ್ಲಿ ತೆರಳುವಂತೆ ಆಡಳಿತ ಸೂಚನೆ ನೀಡಿದೆ. ಆದರೆ ರಾಹುಲ್ ಅದನ್ನು ನಿರಾಕರಿಸಿದ್ದಾರೆ. ಭದ್ರತಾ ಪಡೆಯ ಸಿಬ್ಬಂದಿಗಳು ಮಾನವಕೋಟೆ ನಿರ್ಮಿಸಿ ರಾಹುಲ್ ತೆರಳದಂತೆ ತಡೆದಿದ್ದಾರೆ. ಇನ್ನೊಂದು ಕಡೆ ವಿಮಾನ ನಿಲ್ದಾಣದ ಹೊರಭಾಗದಲ್ಲಿ ರಾಜ್ಯ ಸರಕಾರದ ಕ್ರಮವನ್ನು ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.


ಲಖೀಮ್ ಪುರಕ್ಕೆ ತೆರಳಿದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರನ್ನು ಉತ್ತರ ಪ್ರದೇಶ ಸರಕಾರ ಈಗಾಗಲೇ ಬಂಧಿಸಿ ಸೀತಾಪುರ ಅತಿಥಿಗೃಹದಲ್ಲಿ ಬಂಧನದಲ್ಲಿಡಲಾಗಿದೆ. ಅತಿಥಿ ಗೃಹದ ಸುತ್ತಲು ಡ್ರೋಣ್ ಮೂಲಕ ಕಣ್ಗಾವಲು ಇರಿಸಲಾಗಿದೆ. ಪ್ರಿಯಾಂಕಾ ಗಾಂಧಿ ಅವರು 48 ರಾಶಿಗಳಿಂದ ಬಂಧನದಲ್ಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು