3:42 AM Wednesday29 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಲಕ್ನೋ ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಧರಣಿ: ಪೊಲೀಸ್ ವಾಹನದಲ್ಲಿ ತೆರಳಲು ನೀಡಿದ ಆದೇಶ ವಿರುದ್ಧ ಪ್ರತಿಭಟನೆ

06/10/2021, 22:02

ಲಕ್ನೋ(reporterkarnataka.com): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಲಕ್ನೋದ ಚೌಧುರಿ ಚರಣ್ ಸಿಂಗ್ ವಿಮಾನ ನಿಲ್ದಾಣದಲ್ಲಿ ಧರಣಿ ಆರಂಭಿಸಿದ್ದಾರೆ. ಭದ್ರತಾ ಪಡೆ ಅವರನ್ನು ಸ್ವಂತ ವಾಹನದಲ್ಲಿ ಪ್ರಯಾಣಿಸಲು ಅವಕಾಶ ನೀಡದನ್ನು ಪ್ರತಿಭಟಿಸಿ ಧರಣಿ ನಡೆಸುತ್ತಿದ್ದಾರೆ.

ಹಿಂಸಾಚಾರ ನಡೆದ ಲಖೀಮ್ ಪುರಕ್ಕೆ ತೆರಳಲು ಲಕ್ನೊಗೆ ಆಗಮಿಸಿದ ರಾಹುಲ್ ಗಾಂಧಿ ಅವರಿಗೆ ಪೊಲೀಸ್ ವಾಹನದಲ್ಲಿ ತೆರಳುವಂತೆ ಆಡಳಿತ ಸೂಚನೆ ನೀಡಿದೆ. ಆದರೆ ರಾಹುಲ್ ಅದನ್ನು ನಿರಾಕರಿಸಿದ್ದಾರೆ. ಭದ್ರತಾ ಪಡೆಯ ಸಿಬ್ಬಂದಿಗಳು ಮಾನವಕೋಟೆ ನಿರ್ಮಿಸಿ ರಾಹುಲ್ ತೆರಳದಂತೆ ತಡೆದಿದ್ದಾರೆ. ಇನ್ನೊಂದು ಕಡೆ ವಿಮಾನ ನಿಲ್ದಾಣದ ಹೊರಭಾಗದಲ್ಲಿ ರಾಜ್ಯ ಸರಕಾರದ ಕ್ರಮವನ್ನು ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.


ಲಖೀಮ್ ಪುರಕ್ಕೆ ತೆರಳಿದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರನ್ನು ಉತ್ತರ ಪ್ರದೇಶ ಸರಕಾರ ಈಗಾಗಲೇ ಬಂಧಿಸಿ ಸೀತಾಪುರ ಅತಿಥಿಗೃಹದಲ್ಲಿ ಬಂಧನದಲ್ಲಿಡಲಾಗಿದೆ. ಅತಿಥಿ ಗೃಹದ ಸುತ್ತಲು ಡ್ರೋಣ್ ಮೂಲಕ ಕಣ್ಗಾವಲು ಇರಿಸಲಾಗಿದೆ. ಪ್ರಿಯಾಂಕಾ ಗಾಂಧಿ ಅವರು 48 ರಾಶಿಗಳಿಂದ ಬಂಧನದಲ್ಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು