9:21 PM Tuesday10 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌… ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು

ಇತ್ತೀಚಿನ ಸುದ್ದಿ

ಲಕ್ಕೀ ಲೇಡಿ: ಟ್ರಾಫಿಕ್ ನಲ್ಲಿ 10 ನಿಮಿಷ ಸಿಲುಕಿದ ಮಹಿಳೆಗೆ ಫ್ಲೈಟ್ ಮಿಸ್; ಮೃತ್ಯು ದವಡೆಯಿಂದ ಪಾಸ್!

12/06/2025, 23:29

ಅಹಮದಾಬಾದ್(reporterkarnataka.com):ಅಹಮದಾಬಾದ್ ಮಹಿಳೆಯೊಬ್ಬರು ಟ್ರಾಫಿಕ್‌ನಲ್ಲಿ ಸಿಲುಕಿಕೊಂಡಿದ್ದರಿಂದ ಏರ್‌ ಇಂಡಿಯಾ ವಿಮಾನ ಅಪಘಾತದಿಂದ ಪಾರಾಗಿದ್ದಾರೆ.
ಅಹಮದಾಬಾದ್‌ನ ಭೂಮಿ ಚೌಹಾಣ್ ಲಂಡನ್‌ಗೆ ಹೊರಟಿದ್ದರು. ಆದರೆ, ಟ್ರಾಫಿಕ್‌ನಲ್ಲಿ ಸಿಲುಕಿಕೊಂಡಿದ್ದರಿಂದ ಅಹಮದಾಬಾದ್ ವಿಮಾನ ನಿಲ್ದಾಣವನ್ನು 10 ನಿಮಿಷ ತಡವಾಗಿ ತಲುಪಿದ್ದರು. ಇದರಿಂದ ಅವರಿಗೆ ವಿಮಾನ ಏರಲು ಅನುಮತಿ ನಿರಾಕರಿಸಲಾಗಿತ್ತು. ಇದಾದ ಕೆಲವೇ ನಿಮಿಷಗಳಲ್ಲಿ ವಿಮಾನ ಅಪಘಾತದ ಸುದ್ದಿ ಬಂದಿದ್ದು, ಮಹಿಳೆ, ಮಾಧ್ಯಮಗಳ ಮುಂದೆ ಗದ್ಗದಿತರಾಗಿದ್ದಾರೆ.
ಈ ವಿಚಾರ ಕೇಳಿ ನನಗೆ ಭಯವಾಗಿ ಕೈಕಾಲುಗಳು ನಡುಗಲು ಪ್ರಾರಂಭಿಸಿದವು. ನಾನು ತುಂಬಾ ಹೊತ್ತು ಅದೇ ಆಘಾತದಲ್ಲಿದ್ದೆ. ಕೇವಲ 10 ನಿಮಿಷ ತಡವಾಗಿ ಬಂದಿದ್ದರಿಂದ ವಿಮಾನ ತಪ್ಪಿಸಿಕೊಂಡು ಬದುಕುಳಿದೆ. ನನ್ನ ನೆಚ್ಚಿನ ದೇವರಾದ ಗಣಪತಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ನನ್ನ ಗಣಪತಿ ಬಪ್ಪಾ ನನ್ನನ್ನು ಉಳಿಸಿದ ಎಂದು ಹೇಳಿಕೊಂಡಿದ್ದಾರೆ.
ಭೂಮಿ ತಮ್ಮ ಪತಿಯೊಂದಿಗೆ ಲಂಡನ್‌ನಲ್ಲಿ ವಾಸವಾಗಿದ್ದರು. ರಜೆ ಇದ್ದ ಕಾರಣ ಭಾರತಕ್ಕೆ ಬಂದಿದ್ದರು. ಅವರ ಪತಿ ಈಗ ಬ್ರಿಟನ್‌ನಲ್ಲಿದ್ದಾರೆ. ಭೂಮಿ ಎರಡು ವರ್ಷಗಳ ಹಿಂದೆ ಲಂಡನ್‌ಗೆ ತೆರಳಿದ್ದರು. ಇದಾದ ಬಳಿಕ ಮೊದಲ ಬಾರಿಗೆ ಅವರು ಭಾರತಕ್ಕೆ ಬಂದಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು