2:12 PM Saturday7 - March 2026
ಬ್ರೇಕಿಂಗ್ ನ್ಯೂಸ್
Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ

ಇತ್ತೀಚಿನ ಸುದ್ದಿ

ಲಕ್ಕೀ ಲೇಡಿ: ಟ್ರಾಫಿಕ್ ನಲ್ಲಿ 10 ನಿಮಿಷ ಸಿಲುಕಿದ ಮಹಿಳೆಗೆ ಫ್ಲೈಟ್ ಮಿಸ್; ಮೃತ್ಯು ದವಡೆಯಿಂದ ಪಾಸ್!

12/06/2025, 23:29

ಅಹಮದಾಬಾದ್(reporterkarnataka.com):ಅಹಮದಾಬಾದ್ ಮಹಿಳೆಯೊಬ್ಬರು ಟ್ರಾಫಿಕ್‌ನಲ್ಲಿ ಸಿಲುಕಿಕೊಂಡಿದ್ದರಿಂದ ಏರ್‌ ಇಂಡಿಯಾ ವಿಮಾನ ಅಪಘಾತದಿಂದ ಪಾರಾಗಿದ್ದಾರೆ.
ಅಹಮದಾಬಾದ್‌ನ ಭೂಮಿ ಚೌಹಾಣ್ ಲಂಡನ್‌ಗೆ ಹೊರಟಿದ್ದರು. ಆದರೆ, ಟ್ರಾಫಿಕ್‌ನಲ್ಲಿ ಸಿಲುಕಿಕೊಂಡಿದ್ದರಿಂದ ಅಹಮದಾಬಾದ್ ವಿಮಾನ ನಿಲ್ದಾಣವನ್ನು 10 ನಿಮಿಷ ತಡವಾಗಿ ತಲುಪಿದ್ದರು. ಇದರಿಂದ ಅವರಿಗೆ ವಿಮಾನ ಏರಲು ಅನುಮತಿ ನಿರಾಕರಿಸಲಾಗಿತ್ತು. ಇದಾದ ಕೆಲವೇ ನಿಮಿಷಗಳಲ್ಲಿ ವಿಮಾನ ಅಪಘಾತದ ಸುದ್ದಿ ಬಂದಿದ್ದು, ಮಹಿಳೆ, ಮಾಧ್ಯಮಗಳ ಮುಂದೆ ಗದ್ಗದಿತರಾಗಿದ್ದಾರೆ.
ಈ ವಿಚಾರ ಕೇಳಿ ನನಗೆ ಭಯವಾಗಿ ಕೈಕಾಲುಗಳು ನಡುಗಲು ಪ್ರಾರಂಭಿಸಿದವು. ನಾನು ತುಂಬಾ ಹೊತ್ತು ಅದೇ ಆಘಾತದಲ್ಲಿದ್ದೆ. ಕೇವಲ 10 ನಿಮಿಷ ತಡವಾಗಿ ಬಂದಿದ್ದರಿಂದ ವಿಮಾನ ತಪ್ಪಿಸಿಕೊಂಡು ಬದುಕುಳಿದೆ. ನನ್ನ ನೆಚ್ಚಿನ ದೇವರಾದ ಗಣಪತಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ನನ್ನ ಗಣಪತಿ ಬಪ್ಪಾ ನನ್ನನ್ನು ಉಳಿಸಿದ ಎಂದು ಹೇಳಿಕೊಂಡಿದ್ದಾರೆ.
ಭೂಮಿ ತಮ್ಮ ಪತಿಯೊಂದಿಗೆ ಲಂಡನ್‌ನಲ್ಲಿ ವಾಸವಾಗಿದ್ದರು. ರಜೆ ಇದ್ದ ಕಾರಣ ಭಾರತಕ್ಕೆ ಬಂದಿದ್ದರು. ಅವರ ಪತಿ ಈಗ ಬ್ರಿಟನ್‌ನಲ್ಲಿದ್ದಾರೆ. ಭೂಮಿ ಎರಡು ವರ್ಷಗಳ ಹಿಂದೆ ಲಂಡನ್‌ಗೆ ತೆರಳಿದ್ದರು. ಇದಾದ ಬಳಿಕ ಮೊದಲ ಬಾರಿಗೆ ಅವರು ಭಾರತಕ್ಕೆ ಬಂದಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು