4:26 AM Friday3 - July 2026
ಬ್ರೇಕಿಂಗ್ ನ್ಯೂಸ್
Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ

ಇತ್ತೀಚಿನ ಸುದ್ದಿ

ಲಕ್ಕೀ ಲೇಡಿ: ಟ್ರಾಫಿಕ್ ನಲ್ಲಿ 10 ನಿಮಿಷ ಸಿಲುಕಿದ ಮಹಿಳೆಗೆ ಫ್ಲೈಟ್ ಮಿಸ್; ಮೃತ್ಯು ದವಡೆಯಿಂದ ಪಾಸ್!

12/06/2025, 23:29

ಅಹಮದಾಬಾದ್(reporterkarnataka.com):ಅಹಮದಾಬಾದ್ ಮಹಿಳೆಯೊಬ್ಬರು ಟ್ರಾಫಿಕ್‌ನಲ್ಲಿ ಸಿಲುಕಿಕೊಂಡಿದ್ದರಿಂದ ಏರ್‌ ಇಂಡಿಯಾ ವಿಮಾನ ಅಪಘಾತದಿಂದ ಪಾರಾಗಿದ್ದಾರೆ.
ಅಹಮದಾಬಾದ್‌ನ ಭೂಮಿ ಚೌಹಾಣ್ ಲಂಡನ್‌ಗೆ ಹೊರಟಿದ್ದರು. ಆದರೆ, ಟ್ರಾಫಿಕ್‌ನಲ್ಲಿ ಸಿಲುಕಿಕೊಂಡಿದ್ದರಿಂದ ಅಹಮದಾಬಾದ್ ವಿಮಾನ ನಿಲ್ದಾಣವನ್ನು 10 ನಿಮಿಷ ತಡವಾಗಿ ತಲುಪಿದ್ದರು. ಇದರಿಂದ ಅವರಿಗೆ ವಿಮಾನ ಏರಲು ಅನುಮತಿ ನಿರಾಕರಿಸಲಾಗಿತ್ತು. ಇದಾದ ಕೆಲವೇ ನಿಮಿಷಗಳಲ್ಲಿ ವಿಮಾನ ಅಪಘಾತದ ಸುದ್ದಿ ಬಂದಿದ್ದು, ಮಹಿಳೆ, ಮಾಧ್ಯಮಗಳ ಮುಂದೆ ಗದ್ಗದಿತರಾಗಿದ್ದಾರೆ.
ಈ ವಿಚಾರ ಕೇಳಿ ನನಗೆ ಭಯವಾಗಿ ಕೈಕಾಲುಗಳು ನಡುಗಲು ಪ್ರಾರಂಭಿಸಿದವು. ನಾನು ತುಂಬಾ ಹೊತ್ತು ಅದೇ ಆಘಾತದಲ್ಲಿದ್ದೆ. ಕೇವಲ 10 ನಿಮಿಷ ತಡವಾಗಿ ಬಂದಿದ್ದರಿಂದ ವಿಮಾನ ತಪ್ಪಿಸಿಕೊಂಡು ಬದುಕುಳಿದೆ. ನನ್ನ ನೆಚ್ಚಿನ ದೇವರಾದ ಗಣಪತಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ನನ್ನ ಗಣಪತಿ ಬಪ್ಪಾ ನನ್ನನ್ನು ಉಳಿಸಿದ ಎಂದು ಹೇಳಿಕೊಂಡಿದ್ದಾರೆ.
ಭೂಮಿ ತಮ್ಮ ಪತಿಯೊಂದಿಗೆ ಲಂಡನ್‌ನಲ್ಲಿ ವಾಸವಾಗಿದ್ದರು. ರಜೆ ಇದ್ದ ಕಾರಣ ಭಾರತಕ್ಕೆ ಬಂದಿದ್ದರು. ಅವರ ಪತಿ ಈಗ ಬ್ರಿಟನ್‌ನಲ್ಲಿದ್ದಾರೆ. ಭೂಮಿ ಎರಡು ವರ್ಷಗಳ ಹಿಂದೆ ಲಂಡನ್‌ಗೆ ತೆರಳಿದ್ದರು. ಇದಾದ ಬಳಿಕ ಮೊದಲ ಬಾರಿಗೆ ಅವರು ಭಾರತಕ್ಕೆ ಬಂದಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು