7:27 PM Tuesday8 - July 2025
ಬ್ರೇಕಿಂಗ್ ನ್ಯೂಸ್
ತುಂಗಾ ಕಮಾನು ಸೇತುವೆ ಮೇಲೆ ಹರಿಯುತ್ತಿದೆ ನೀರು!: ಹೆದ್ದಾರಿ ಇಂಜಿನಿಯರ್ ಗಳ ಅದ್ಬುತ… ಶೈಕ್ಷಣಿಕ ಧನ ಸಹಾಯ ಪಾವತಿಸಲು ಆಗ್ರಹಿಸಿ ಜುಲೈ 9ರಂದು ಕಟ್ಟಡ ಕಾರ್ಮಿಕರ ರಾಜ್ಯವ್ಯಾಪಿ… Kodagu | 19 ವರ್ಷದಲ್ಲಿ ದಾಖಲೆ ಸೃಷ್ಟಿಸಿದ ಹಾರಂಗಿ ಡ್ಯಾಮ್: ಜಲಾಶಯಕ್ಕೆ ಹರಿದು… Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ…

ಇತ್ತೀಚಿನ ಸುದ್ದಿ

ಲಕ್ಕೀ ಲೇಡಿ: ಟ್ರಾಫಿಕ್ ನಲ್ಲಿ 10 ನಿಮಿಷ ಸಿಲುಕಿದ ಮಹಿಳೆಗೆ ಫ್ಲೈಟ್ ಮಿಸ್; ಮೃತ್ಯು ದವಡೆಯಿಂದ ಪಾಸ್!

12/06/2025, 23:29

ಅಹಮದಾಬಾದ್(reporterkarnataka.com):ಅಹಮದಾಬಾದ್ ಮಹಿಳೆಯೊಬ್ಬರು ಟ್ರಾಫಿಕ್‌ನಲ್ಲಿ ಸಿಲುಕಿಕೊಂಡಿದ್ದರಿಂದ ಏರ್‌ ಇಂಡಿಯಾ ವಿಮಾನ ಅಪಘಾತದಿಂದ ಪಾರಾಗಿದ್ದಾರೆ.
ಅಹಮದಾಬಾದ್‌ನ ಭೂಮಿ ಚೌಹಾಣ್ ಲಂಡನ್‌ಗೆ ಹೊರಟಿದ್ದರು. ಆದರೆ, ಟ್ರಾಫಿಕ್‌ನಲ್ಲಿ ಸಿಲುಕಿಕೊಂಡಿದ್ದರಿಂದ ಅಹಮದಾಬಾದ್ ವಿಮಾನ ನಿಲ್ದಾಣವನ್ನು 10 ನಿಮಿಷ ತಡವಾಗಿ ತಲುಪಿದ್ದರು. ಇದರಿಂದ ಅವರಿಗೆ ವಿಮಾನ ಏರಲು ಅನುಮತಿ ನಿರಾಕರಿಸಲಾಗಿತ್ತು. ಇದಾದ ಕೆಲವೇ ನಿಮಿಷಗಳಲ್ಲಿ ವಿಮಾನ ಅಪಘಾತದ ಸುದ್ದಿ ಬಂದಿದ್ದು, ಮಹಿಳೆ, ಮಾಧ್ಯಮಗಳ ಮುಂದೆ ಗದ್ಗದಿತರಾಗಿದ್ದಾರೆ.
ಈ ವಿಚಾರ ಕೇಳಿ ನನಗೆ ಭಯವಾಗಿ ಕೈಕಾಲುಗಳು ನಡುಗಲು ಪ್ರಾರಂಭಿಸಿದವು. ನಾನು ತುಂಬಾ ಹೊತ್ತು ಅದೇ ಆಘಾತದಲ್ಲಿದ್ದೆ. ಕೇವಲ 10 ನಿಮಿಷ ತಡವಾಗಿ ಬಂದಿದ್ದರಿಂದ ವಿಮಾನ ತಪ್ಪಿಸಿಕೊಂಡು ಬದುಕುಳಿದೆ. ನನ್ನ ನೆಚ್ಚಿನ ದೇವರಾದ ಗಣಪತಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ನನ್ನ ಗಣಪತಿ ಬಪ್ಪಾ ನನ್ನನ್ನು ಉಳಿಸಿದ ಎಂದು ಹೇಳಿಕೊಂಡಿದ್ದಾರೆ.
ಭೂಮಿ ತಮ್ಮ ಪತಿಯೊಂದಿಗೆ ಲಂಡನ್‌ನಲ್ಲಿ ವಾಸವಾಗಿದ್ದರು. ರಜೆ ಇದ್ದ ಕಾರಣ ಭಾರತಕ್ಕೆ ಬಂದಿದ್ದರು. ಅವರ ಪತಿ ಈಗ ಬ್ರಿಟನ್‌ನಲ್ಲಿದ್ದಾರೆ. ಭೂಮಿ ಎರಡು ವರ್ಷಗಳ ಹಿಂದೆ ಲಂಡನ್‌ಗೆ ತೆರಳಿದ್ದರು. ಇದಾದ ಬಳಿಕ ಮೊದಲ ಬಾರಿಗೆ ಅವರು ಭಾರತಕ್ಕೆ ಬಂದಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು