2:43 PM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಲಕ್ಕೀ ಲೇಡಿ: ಟ್ರಾಫಿಕ್ ನಲ್ಲಿ 10 ನಿಮಿಷ ಸಿಲುಕಿದ ಮಹಿಳೆಗೆ ಫ್ಲೈಟ್ ಮಿಸ್; ಮೃತ್ಯು ದವಡೆಯಿಂದ ಪಾಸ್!

12/06/2025, 23:29

ಅಹಮದಾಬಾದ್(reporterkarnataka.com):ಅಹಮದಾಬಾದ್ ಮಹಿಳೆಯೊಬ್ಬರು ಟ್ರಾಫಿಕ್‌ನಲ್ಲಿ ಸಿಲುಕಿಕೊಂಡಿದ್ದರಿಂದ ಏರ್‌ ಇಂಡಿಯಾ ವಿಮಾನ ಅಪಘಾತದಿಂದ ಪಾರಾಗಿದ್ದಾರೆ.
ಅಹಮದಾಬಾದ್‌ನ ಭೂಮಿ ಚೌಹಾಣ್ ಲಂಡನ್‌ಗೆ ಹೊರಟಿದ್ದರು. ಆದರೆ, ಟ್ರಾಫಿಕ್‌ನಲ್ಲಿ ಸಿಲುಕಿಕೊಂಡಿದ್ದರಿಂದ ಅಹಮದಾಬಾದ್ ವಿಮಾನ ನಿಲ್ದಾಣವನ್ನು 10 ನಿಮಿಷ ತಡವಾಗಿ ತಲುಪಿದ್ದರು. ಇದರಿಂದ ಅವರಿಗೆ ವಿಮಾನ ಏರಲು ಅನುಮತಿ ನಿರಾಕರಿಸಲಾಗಿತ್ತು. ಇದಾದ ಕೆಲವೇ ನಿಮಿಷಗಳಲ್ಲಿ ವಿಮಾನ ಅಪಘಾತದ ಸುದ್ದಿ ಬಂದಿದ್ದು, ಮಹಿಳೆ, ಮಾಧ್ಯಮಗಳ ಮುಂದೆ ಗದ್ಗದಿತರಾಗಿದ್ದಾರೆ.
ಈ ವಿಚಾರ ಕೇಳಿ ನನಗೆ ಭಯವಾಗಿ ಕೈಕಾಲುಗಳು ನಡುಗಲು ಪ್ರಾರಂಭಿಸಿದವು. ನಾನು ತುಂಬಾ ಹೊತ್ತು ಅದೇ ಆಘಾತದಲ್ಲಿದ್ದೆ. ಕೇವಲ 10 ನಿಮಿಷ ತಡವಾಗಿ ಬಂದಿದ್ದರಿಂದ ವಿಮಾನ ತಪ್ಪಿಸಿಕೊಂಡು ಬದುಕುಳಿದೆ. ನನ್ನ ನೆಚ್ಚಿನ ದೇವರಾದ ಗಣಪತಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ನನ್ನ ಗಣಪತಿ ಬಪ್ಪಾ ನನ್ನನ್ನು ಉಳಿಸಿದ ಎಂದು ಹೇಳಿಕೊಂಡಿದ್ದಾರೆ.
ಭೂಮಿ ತಮ್ಮ ಪತಿಯೊಂದಿಗೆ ಲಂಡನ್‌ನಲ್ಲಿ ವಾಸವಾಗಿದ್ದರು. ರಜೆ ಇದ್ದ ಕಾರಣ ಭಾರತಕ್ಕೆ ಬಂದಿದ್ದರು. ಅವರ ಪತಿ ಈಗ ಬ್ರಿಟನ್‌ನಲ್ಲಿದ್ದಾರೆ. ಭೂಮಿ ಎರಡು ವರ್ಷಗಳ ಹಿಂದೆ ಲಂಡನ್‌ಗೆ ತೆರಳಿದ್ದರು. ಇದಾದ ಬಳಿಕ ಮೊದಲ ಬಾರಿಗೆ ಅವರು ಭಾರತಕ್ಕೆ ಬಂದಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು