12:43 PM Tuesday29 - July 2025
ಬ್ರೇಕಿಂಗ್ ನ್ಯೂಸ್
Mandya | ಒಂದೇ ದಿನ 1146 ಕೋಟಿ ವೆಚ್ಚದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ… ಬಾಳೆಬೈಲು – ಕುರುವಳ್ಳಿ ಬೈಪಾಸ್ ರಸ್ತೆಯಲ್ಲಿ ಕುಸಿಯುತ್ತಿರುವ ಗುಡ್ಡ: ಬ್ಯಾರಿಕೆಡ್ ಹಾಕಿರುವ ಪೊಲೀಸರು Shivamogga | ತೀರ್ಥಹಳ್ಳಿ: ಬೆಜ್ಜವಳ್ಳಿ ಸಮೀಪ ಸ್ಕೂಟಿಗೆ ಹಿಂಭಾಗದಿಂದ ಬಸ್ ಡಿಕ್ಕಿ; ಸವಾರ… ಮಡಿಕೇರಿ -ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ತಡರಾತ್ರಿ ಒಂಟಿ ಸಲಗ ಪ್ರತ್ಯಕ್ಷ: ಪ್ರಯಾಣಿಕರಲ್ಲಿ ಭೀತಿ ಗದಗ -ಬಂಕಾಪುರ ರಾಷ್ಟ್ರೀಯ ಹೆದ್ದಾರಿಗೆ ಗಡ್ಕರಿ ಭರವಸೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Koppa | ಬೃಹತ್ ಮರ ರಸ್ತೆಗೆ ಪತನ: ಜಯಪುರ- ಬಸರೀಕಟ್ಟೆ,- ಕಳಸ- ಹೊರನಾಡು… ಕೊಡಗಿನಲ್ಲಿ ಭಾರೀ ಮಳೆ: ತುಂಬಿ ತುಳುಕುತ್ತಿರುವ ಕಾವೇರಿ, ಕನ್ನಿಕೆ, ಸುಜ್ಜ್ಯತಿ ನದಿಗಳು; ತ್ರಿವೇಣಿ… ಕೊಡಗು: ಮಳೆ ಹಾನಿ ಪ್ರದೇಶಗಳಿಗೆ ಕಂದಾಯ ಸಚಿವ ಕೃಷ್ಣಬೈರೇ ಗೌಡ ಭೇಟಿ; ಪರಿಹಾರ… BJP Leader | ಚುನಾವಣಾ ಉದ್ದೇಶದಿಂದ ಬೆಂಗಳೂರು ಒಡೆದ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ… ಗ್ಯಾರಂಟಿಗಳ ಕಾರಣದಿಂದ ಕರ್ನಾಟಕ ತಲಾ ಆದಾಯದಲ್ಲಿ ದೇಶದಲ್ಲೇ ನಂಬರ್ ಒನ್ : ಸಿಎಂ…

ಇತ್ತೀಚಿನ ಸುದ್ದಿ

ಎಂಆರ್ ಪಿಎಲ್ ನಿಂದ ಮಾರಕ ಮಾಲಿನ್ಯ ಆರೋಪ: ಸ್ಥಳೀಯ ನಾಗರಿಕರಿಂದ ಪ್ರತಿಭಟನೆ; ಹಸಿರು ವಲಯ ಸ್ಥಾಪನೆಗೆ ಆಗ್ರಹ

24/01/2023, 17:22

ಸುರತ್ಕಲ್(reporter Karnataka.com): ಇಲ್ಲಿಗೆ ಸಮೀಪದ ಎಂಆರ್ ಪಿಎಲ್ ಕಂಪನಿಯಿಂದ ಮಾರಕ ಮಾಲಿನ್ಯ ಹೊರ ಸೂಸುತ್ತಿದ್ದು, ಸ್ಥಳೀಯ ಜನರ ಬದುಕು ನರಕಯಾತನೆಯಾಗಿದೆ ಎಂದು ಆರೋಪಿಸಿ ಡಿವೈಎಫ್ ಐ ಜಿಲ್ಲಾ ಘಟಕ ವತಿಯಿಂದ ಕಂಪನಿಯ ಕಾರ್ಗೋ ಗೇಟ್ ಎದುರು ಮಂಗಳವಾರ ಬೃಹತ್ ಪ್ರತಿಭಟನೆ ನಡೆಯಿತು.


ಸ್ಥಳೀಯ ನಾಯಕರ ಕೂಡುವಿಕೆ ಮೂಲ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು. ಪ್ರತಿಭಟನಾಕಾರರು ಎಂಆರ್ ಪಿಎಲ್ ಆಡಳಿತ, ಸಂಸದ ನಳಿನ್ ಕುಮಾರ್, ಶಾಸಕ ಉಮಾನಾಥ ಕೋಟ್ಯಾನ್ ವಿರುದ್ಧ ಘೋಷಣೆ ಕೂಗಿದರು. ಎಂಆರ್ ಪಿಎಲ್ ಕಂಪನಿ ಸ್ಥಳೀಯರಿಗೆ ಉದ್ಯೋಗಾವಕಾಶ ನೀಡಿಲ್ಲ ಎಂದು ಆರೋಪಿಸಲಾಯಿತು. ಹಸಿರು ವಲಯ ಸ್ಥಾಪನೆಗೆ ಪ್ರತಿಭಟನಾಕಾರರು ಒತ್ತಾಯಿಸಿದರು. ಡಿವೈಎಫ್ ಐ ರಾಜ್ಯ ಮುಖಂಡ ಮುನೀರ್ ಕಾಟಿಪಳ್ಳ, ಜಿಲ್ಲಾಧ್ಯಕ್ಷ ಬಿ.ಕೆ. ಇಮ್ತಿಯಾಜ್ ಮುಂತಾದವರು ಪ್ರತಿಭಟನೆಯ ನೇತೃತ್ವವ ವಹಿಸಿದ್ದರು ಹಸಿರು ವಲಯ ನಿರ್ಮಿಸದ ಕಂಪೆನಿಯ ಮೇಲೆ ಕಠಿಣ ಕ್ರಮಕ್ಕೆ ಒತ್ತಾಯಿಸಿ ಧರಣಿ ನಡೆಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು