3:09 AM Friday5 - June 2026
ಬ್ರೇಕಿಂಗ್ ನ್ಯೂಸ್
ಮುಲಾಜಿಲ್ಲದೇ ಕ್ರಮ ಎಂದ ರಾಗಾ: ರಾಗವೇ ಬದಲಿಸಿ ‘ಐ ಆಯಮ್ ಹ್ಯಾಪಿ’ ಎಂದ… ಯಾವ ಟ್ರಬಲ್ ಶೂಟರೂ ಇಲ್ಲ; ಅಸ್ಸಾಂಗೆ ಹೋಗಿ ಯಾಕೆ ಟ್ರಬಲ್ ಶೂಟರ್ ಆಗ್ಲಿಲ್ಲ:… ಆರೋಗ್ಯ ಕ್ಷೇತ್ರದಲ್ಲಿ ಸಚಿವ ಯು.ಟಿ. ಖಾದರ್ ಹೊಸ ಮೈಲಿಗಲ್ಲು: ವೈದ್ಯರ ನೇರ ನೇಮಕಾತಿಗೆ… ಹೊಸ ರಾಜಕೀಯ ಹಾದಿಯತ್ತ ಅಣ್ಣಾಮಲೈ: ಕರ್ನಾಟಕದ ಸಿಂಗಂನಿಂದ ಹೊಸ ಪಕ್ಷ ಘೋಷಣೆ ತಿತಿಮತಿ | ಕಾಡಾನೆ ದಾಳಿ: ಕಾಫಿ ತೋಟ ವೀಕ್ಷಿಸಲು ಹೋಗಿದ್ದ ಐಜಿ ಪತ್ನಿ… ಚಿಕ್ಕಮಗಳೂರು: ಕರೆದ ಕೂಡಲೇ ಬರಲಿಲ್ಲವೆಂದು ಕೆಫೆ ಕಾರ್ಮಿಕನ ಮೇಲೆ ಹಲ್ಲೆ ಡಿಕೆಶಿ ಸಂಪುಟದ ಖಾತೆ ಹಂಚಿಕೆ: ಖಾದರ್ ಗೆ ಆರೋಗ್ಯ; ಉಳಿದಂತೆ ಯಾರು ಯಾರಿಗೆ… ನಿಜವಾಯ್ತು ಮಿಥನ್ ರೈ ಭವಿಷ್ಯವಾಣಿ!: ಕೊನೆಗೂ ಡಿಕೆಶಿ ಆದ್ರು ಸಿಎಂ!!; ಇದೀಗ ವೀಡಿಯೊ… ಸಾಮೂಹಿಕ ನಾಯಕತ್ವದಲ್ಲೇ ಮುಂದುವರಿಯಿರಿ: ಸಿಎಂ ಡಿಕೆಶಿಗೆ ಹೈಕಮಾಂಡ್‌ ಕಟ್ಟುನಿಟ್ಟಿನ ಸೂಚನೆ ಲೈವ್‌ ಬಂದು ಅಭಿಮಾನಿಗಳಿಗೆ ಬಹುಮುಖ್ಯ ಮಾಹಿತಿ ನೀಡಿದ ನಟ ದರ್ಶನ್‌

ಇತ್ತೀಚಿನ ಸುದ್ದಿ

ಮಾಣಿ ಸಮೀಪ ನಡುರಸ್ತೆಯಲ್ಲೇ ಯುವತಿಯ ಅಮಾನುಷ ಕೊಲೆ: ಆಟೋದಲ್ಲಿ ಬಂದ ತಂಡದ ಕೃತ್ಯ; ಆರೋಪಿಗಳ ಬಂಧನ

27/06/2022, 22:40

ಮಂಗಳೂರು(reporterkarnataka.com): ಸ್ಕೂಟರ್ ನಲ್ಲಿ ತೆರಳುತ್ತಿದ್ದ ಯುವತಿಯೊಬ್ಬಳ ಮೇಲೆ ಆಟೋದಲ್ಲಿ ಬಂದ ದುಷ್ಕರ್ಮಿಗಳ ತಂಡವೊಂದು ಚೂರಿಯಿಂದ 
ಇರಿದು ಕೊಲೆ ಮಾಡಿದ ಅಮಾನುಷ ಘಟನೆ ಮಾಣಿಯ ನೇರಳಕಟ್ಟೆ ಎಂಬಲ್ಲಿ ನಡೆದಿದ್ದು, ಆರೋಪಿಗಳನ್ನು ಬಂಧಿಸಲಾಗಿದೆ.

ಮಾಣಿಯ ಕಾಪಿಕಾಡು ನಿವಾಸಿ ದಿ. ತ್ಯಾಂಪ ಪೂಜಾರಿ ಅವರ ಪುತ್ರಿ, ಪ್ರಸ್ತುತ ಅನಂತಾಡಿಯ ದೇವಿ ನಗರ ನಿವಾಸಿ ಶಕುಂತಲಾ(35) ಕೊಲೆಗೀಡಾದ ಮಹಿಳೆ ಎಂದು ಗುರುತಿಸಲಾಗಿದೆ.

ಪುತ್ತೂರು ಕಡೆಯಿಂದ ಮಾಣಿ ಕಡೆಗೆ ಆಕ್ಟೀವಾ ವಾಹನದಲ್ಲಿ ತೆರಳುತ್ತಿದ್ದ ವೇಳೆ ಆಟೋ ರಿಕ್ಷಾದಲ್ಲಿ ಬಂದ ತಂಡ ಮಾರಕಾಯುಧಗಳಿಂದ ದಾಳಿ ನಡೆಸಿದೆ. ತಕ್ಷಣವೇ ಆಕೆಯನ್ನು ಆಸ್ಪತ್ರೆಗೆ ಕೊಂಡೊಯ್ದುರಾದರೂ ಅಷ್ಟರೊಳಗಾಗಲೇ ಆಕೆ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಸ್ಥಳಕ್ಕೆ ವಿಟ್ಲ ಠಾಣಾ ಇನ್ಸ್ ಪೆಕ್ಟರ್ ಹೆಚ್.ಇ. ನಾಗರಾಜ್ ರವರ ನೇತೃತ್ವದ ಪೊಲೀಸರ ತಂಡ ಆಗಮಿಸಿ ಮಾಹಿತಿ ಸಂಗ್ರಹಿಸಿದೆ. ಮೃತ ಮಹಿಳೆ ಪುತ್ತೂರಿನಲ್ಲಿ ಹೊಟೇಲ್ ನಡೆಸುತ್ತಿದ್ದರು ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು