9:42 AM Friday19 - December 2025
ಬ್ರೇಕಿಂಗ್ ನ್ಯೂಸ್
ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.… Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ

ಇತ್ತೀಚಿನ ಸುದ್ದಿ

ಮಾಜಿ ಸಿಎಂ ಸದಾನಂದ ಗೌಡ ಅವರಿಗೆ ಬಿಜೆಪಿ ಹೈಕಮಾಂಡ್ ಬುಲಾವ್: ದೆಹಲಿಗೆ ಬರುವಂತೆ ನಡ್ಡಾ ಸೂಚನೆ?

21/10/2023, 14:21

ಮೃದುಲಾ ನಾಯರ್ ಬೆಂಗಳೂರು

info.reporterkarnataka@gmail.com

ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಅವರಿಗೆ ಬಿಜೆಪಿ ಹೈಕಮಾಂಡ್ ಬುಲಾವ್ ನೀಡಿದೆ. ಅಕ್ಟೋಬರ್ 25ರಂದು ದೆಹಲಿಗೆ ಆಗಮಿಸುವಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸೂಚನೆ ನೀಡಿದ್ದಾರೆ ಎಂದು ಅಧಿಕೃತ ಮೂಲಗಳಿಂದ ತಿಳಿದು ಬಂದಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ, ಪ್ರತಿಪಕ್ಷದ ನಾಯಕನ ಹುದ್ದೆ ಹಾಗೂ ಜೆಡಿಎಸ್ ಜತೆ ಮೈತ್ರಿ ವಿಷಯಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಆಗಿರುವ ಸದಾನಂದ ಗೌಡರು ಅಸಮಾಧಾನ ವ್ಯಕ್ತಪಡಿಸಿದ್ದರು. ಹಾಗೆಂತ ಸದಾನಂದ ಗೌಡ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಮಾಡುವ ಸಾಧ್ಯತೆ ತೀರಾ ಕಡಿಮೆ. ಆದರೆ ಲೋಕಸಭೆ ಚುನಾವಣೆಯ ಸಮಯದಲ್ಲಿ ಪಕ್ಷಕ್ಕೆ ಡ್ಯಾಮೇಜ್ ಆಗಬಾರದು ಎನ್ನುವ ದೃಷ್ಟಿಯಿಂದ ಸದಾನಂದ ಗೌಡ ಅವರನ್ನು ದೆಹಲಿಗೆ ಕರೆಸಿರಬಹುದು ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಡುತ್ತಾರೆ.
ಕೆಲ ದಿನಗಳ ಹಿಂದೆ ಜೆಡಿಎಸ್ ಜೊತೆಗಿನ ಮೈತ್ರಿ ಬಗ್ಗೆ ಸದಾನಂದ ಗೌಡರು ಅಸಮಾಧಾನ ಹೊರ ಹಾಕಿದ್ದರು. ಹೈಕಮಾಂಡ್ ನಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ ಎಂದು ಬಹಿರಂಗವಾಗಿಯೇ ಬೇಸರ ಹೊರ ಹಾಕಿದ್ದರು. ಈ ನಡುವೆ ಡಿವಿಎಸ್ ಕಾಂಗ್ರೆಸ್ ಸೇರುತ್ತಾರೆ ಅನ್ನೋ ಚರ್ಚೆಗಳು ರಾಜ್ಯ ರಾಜಕಾರಣದಲ್ಲಿ ಶುರುವಾಗಿವೆ. ಮಾಜಿ ಸಿಎಂ ಜಗದೀಶ ಶೆಟ್ಟರ್ ಹಾದಿಯನ್ನು ಸದಾನಂದ ಗೌಡರು ತುಳಿದರೆ ಪಕ್ಷದ ಇಮೇಜಿಗೆ ದಕ್ಕೆ ಬರಬಹುದು.
ಈ ಎಲ್ಲ ಬೆಳವಣಿಗೆಗಳನ್ನು ಗಮನದಲ್ಲಿ ಇಟ್ಟುಕೊಂಡು ಹೈಕಮಾಂಡ್ ಮಾತುಕತೆಗೆ ಕರೆದಿದೆ ಎನ್ನಲಾಗಿದೆ.
ಕರಾವಳಿ ಜಿಲ್ಲೆಯ ಸುಳ್ಯ ಸಮೀಪದ ದೇವರಗುಂಡದ ಸದಾನಂದ ಗೌಡ ಅವರು ಬಿಜೆಪಿ ಪಕ್ಷದ ದೊಡ್ಡ ಫಲಾನುಭವಿ ನಾಯಕ. ಶಾಸಕ, ಸಂಸದ, ರಾಜ್ಯಾಧ್ಯಕ್ಷ, ಮುಖ್ಯಮಂತ್ರಿ, ಕೇಂದ್ರ ಸಚಿವ ಸ್ಥಾನ ಸೇರಿದಂತೆ ಎಲ್ಲ ಸ್ಥಾನಮಾನಗಳನ್ನು ಪಕ್ಷ ಅವರಿಗೆ ನೀಡಿದೆ. ಇದನ್ನು ಸ್ವತಃ ಸದಾನಂದ ಗೌಡ ಅವರೇ ಒಪ್ಪಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು