4:34 AM Tuesday16 - December 2025
ಬ್ರೇಕಿಂಗ್ ನ್ಯೂಸ್
1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ಮಾಜಿ ಸಿಎಂ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ಆರೋಪಿ ಸಂಪತ್ ಯಾರೆಂದು ನಂಗೆ ಗೊತ್ತಿಲ್ಲ: ಜೀವಿಜಯ

22/08/2022, 12:04

ಮಡಿಕೇರಿ(reporterkarnataka.com):
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರಿಗೆ ಮೊಟ್ಟೆ ಎಸೆದ ಆರೋಪಿ ಸಂಪತ್ ಯಾರೆಂದು ನನಗೆ ಗೊತ್ತಿಲ್ಲ. ನನ್ನ ಬೆಂಬಲಿಗ ಎಂದು ಹೇಳುವ ಮೂಲಕ ಸಂಪತ್ ನಿಂದ ನನ್ನ ಹೆಸರಿಗೆ ಕಪ್ಪುಚುಕ್ಕೆ ತರುವ ಷಡ್ಯಂತ್ರ ನಡೆಯುತ್ತಿದೆ. ಸಂಪತ್ ಕಾಂಗ್ರೆಸ್ ಕಾಯ೯ಕತ೯ ಎಂದು ಬಿಜೆಪಿಯವರು ನಿರೂಪಿಸಲಿ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಬಿ.ಎ.ಜೀವಿಜಯ ಸವಾಲ್ ಹಾಕಿದ್ದಾರೆ.

ಸಿದ್ದರಾಮಯ್ಯ ಅವರ ಕಾರಿಗೆ ಮೊಟ್ಟೆ ಎಸೆದಿರುವ ಸಂಪತ್ ಕಾಂಗ್ರೆಸ್ಸಿಗ ಅಲ್ಲವೇ ಅಲ್ಲ. ಜೀವಿಜಯ ಬೆಂಬಲಿಗ ಎಂದು ಹೇಳಿಕೊಂಡಿರುವ ಸಂಪತ್ ಒಂದೇ ಒಂದು ಉದಾಹರಣೆಯೊಂದಿಗೆ ಅದನ್ನು ನಿರೂಪಿಸಲಿ. ಮುಂದಿನ ಚುನಾವಣೆಯನ್ನು ದೖಷ್ಟಿಯಲ್ಲಿರಿಸಿಕೊಂಡು ಬಿಜೆಪಿಯಿಂದ 

ಷಡ್ಯಂತ್ರ ನಡೆದಿದೆ. ಬಿಜೆಪಿಯ ಎಂದಿನ ಷಡ್ಯಂತ್ರವನ್ನು ತಿಳಿಯದ ಜನತೆ ಕೊಡಗಿನಲ್ಲಿಲ್ಲ.

ಸಂಪತ್ ತಂದೆ 2004 ರಲ್ಲಿ ಸೋಮವಾರಪೇಟೆ ಪಂಚಾಯತ್ ಗೆ ಬಿಜೆಪಿಯಿಂದ ನಾಮನಿದೇ೯ಶಿತ ಸದಸ್ಯರಾಗಿದ್ದರು. ಸಂಪತ್ ಹಿನ್ನಲೆಯಲ್ಲಿ ಬಿಜೆಪಿ ಇತಿಹಾಸವಿದೆ. ಸಂಪತ್ ಯಾರಿಂದ ಕಾಮಗಾರಿ ಗುತ್ತಿಗೆ ಪಡೆಯುತ್ತಿದ್ದಾನೆ ಎಂಬುದು ಸೋಮವಾರಪೇಟೆ ಜನರಿಗೆ ತಿಳಿದಿದೆ.

ಕಾಂಗ್ರೆಸ್ ಅಧಿಕಾರಕ್ಕೇರುವ ತವಕದಲ್ಲಿ ಬಿಜೆಪಿಯಿಂದ ಇಂಥ ಷಡ್ಯಂತ್ರ ಎಂದು ಜೀವಿಜಯ ಆರೋಪ ಆರೋಪ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು