8:25 AM Tuesday23 - September 2025
ಬ್ರೇಕಿಂಗ್ ನ್ಯೂಸ್
ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಸರ್ಕಾರದಿಂದ 6 ಕೋಟಿ ನಗದು ಬಹುಮಾನ: ಮುಖ್ಯಮಂತ್ರಿ… ಜಿಎಸ್ ಟಿ ಜಾರಿ ಮಾಡಿದ್ದೂ ಮೋದಿ, ಜಿಎಸ್ ಟಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ,… ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ: ಸಿಎಂ… ವಿರಾಜಪೇಟೆ ಆರೆಂಜ್ ಸ್ಪಾ -ಬ್ಯೂಟಿ ಪಾರ್ಲರ್ ದಾಳಿ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ… Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್…

ಇತ್ತೀಚಿನ ಸುದ್ದಿ

ಮಾಜಿ ಸಿಎಂ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ಆರೋಪಿ ಸಂಪತ್ ಯಾರೆಂದು ನಂಗೆ ಗೊತ್ತಿಲ್ಲ: ಜೀವಿಜಯ

22/08/2022, 12:04

ಮಡಿಕೇರಿ(reporterkarnataka.com):
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರಿಗೆ ಮೊಟ್ಟೆ ಎಸೆದ ಆರೋಪಿ ಸಂಪತ್ ಯಾರೆಂದು ನನಗೆ ಗೊತ್ತಿಲ್ಲ. ನನ್ನ ಬೆಂಬಲಿಗ ಎಂದು ಹೇಳುವ ಮೂಲಕ ಸಂಪತ್ ನಿಂದ ನನ್ನ ಹೆಸರಿಗೆ ಕಪ್ಪುಚುಕ್ಕೆ ತರುವ ಷಡ್ಯಂತ್ರ ನಡೆಯುತ್ತಿದೆ. ಸಂಪತ್ ಕಾಂಗ್ರೆಸ್ ಕಾಯ೯ಕತ೯ ಎಂದು ಬಿಜೆಪಿಯವರು ನಿರೂಪಿಸಲಿ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಬಿ.ಎ.ಜೀವಿಜಯ ಸವಾಲ್ ಹಾಕಿದ್ದಾರೆ.

ಸಿದ್ದರಾಮಯ್ಯ ಅವರ ಕಾರಿಗೆ ಮೊಟ್ಟೆ ಎಸೆದಿರುವ ಸಂಪತ್ ಕಾಂಗ್ರೆಸ್ಸಿಗ ಅಲ್ಲವೇ ಅಲ್ಲ. ಜೀವಿಜಯ ಬೆಂಬಲಿಗ ಎಂದು ಹೇಳಿಕೊಂಡಿರುವ ಸಂಪತ್ ಒಂದೇ ಒಂದು ಉದಾಹರಣೆಯೊಂದಿಗೆ ಅದನ್ನು ನಿರೂಪಿಸಲಿ. ಮುಂದಿನ ಚುನಾವಣೆಯನ್ನು ದೖಷ್ಟಿಯಲ್ಲಿರಿಸಿಕೊಂಡು ಬಿಜೆಪಿಯಿಂದ 

ಷಡ್ಯಂತ್ರ ನಡೆದಿದೆ. ಬಿಜೆಪಿಯ ಎಂದಿನ ಷಡ್ಯಂತ್ರವನ್ನು ತಿಳಿಯದ ಜನತೆ ಕೊಡಗಿನಲ್ಲಿಲ್ಲ.

ಸಂಪತ್ ತಂದೆ 2004 ರಲ್ಲಿ ಸೋಮವಾರಪೇಟೆ ಪಂಚಾಯತ್ ಗೆ ಬಿಜೆಪಿಯಿಂದ ನಾಮನಿದೇ೯ಶಿತ ಸದಸ್ಯರಾಗಿದ್ದರು. ಸಂಪತ್ ಹಿನ್ನಲೆಯಲ್ಲಿ ಬಿಜೆಪಿ ಇತಿಹಾಸವಿದೆ. ಸಂಪತ್ ಯಾರಿಂದ ಕಾಮಗಾರಿ ಗುತ್ತಿಗೆ ಪಡೆಯುತ್ತಿದ್ದಾನೆ ಎಂಬುದು ಸೋಮವಾರಪೇಟೆ ಜನರಿಗೆ ತಿಳಿದಿದೆ.

ಕಾಂಗ್ರೆಸ್ ಅಧಿಕಾರಕ್ಕೇರುವ ತವಕದಲ್ಲಿ ಬಿಜೆಪಿಯಿಂದ ಇಂಥ ಷಡ್ಯಂತ್ರ ಎಂದು ಜೀವಿಜಯ ಆರೋಪ ಆರೋಪ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು