4:23 PM Sunday29 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ಮಾಜಿ ಸಿಎಂ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ಆರೋಪಿ ಸಂಪತ್ ಯಾರೆಂದು ನಂಗೆ ಗೊತ್ತಿಲ್ಲ: ಜೀವಿಜಯ

22/08/2022, 12:04

ಮಡಿಕೇರಿ(reporterkarnataka.com):
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರಿಗೆ ಮೊಟ್ಟೆ ಎಸೆದ ಆರೋಪಿ ಸಂಪತ್ ಯಾರೆಂದು ನನಗೆ ಗೊತ್ತಿಲ್ಲ. ನನ್ನ ಬೆಂಬಲಿಗ ಎಂದು ಹೇಳುವ ಮೂಲಕ ಸಂಪತ್ ನಿಂದ ನನ್ನ ಹೆಸರಿಗೆ ಕಪ್ಪುಚುಕ್ಕೆ ತರುವ ಷಡ್ಯಂತ್ರ ನಡೆಯುತ್ತಿದೆ. ಸಂಪತ್ ಕಾಂಗ್ರೆಸ್ ಕಾಯ೯ಕತ೯ ಎಂದು ಬಿಜೆಪಿಯವರು ನಿರೂಪಿಸಲಿ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಬಿ.ಎ.ಜೀವಿಜಯ ಸವಾಲ್ ಹಾಕಿದ್ದಾರೆ.

ಸಿದ್ದರಾಮಯ್ಯ ಅವರ ಕಾರಿಗೆ ಮೊಟ್ಟೆ ಎಸೆದಿರುವ ಸಂಪತ್ ಕಾಂಗ್ರೆಸ್ಸಿಗ ಅಲ್ಲವೇ ಅಲ್ಲ. ಜೀವಿಜಯ ಬೆಂಬಲಿಗ ಎಂದು ಹೇಳಿಕೊಂಡಿರುವ ಸಂಪತ್ ಒಂದೇ ಒಂದು ಉದಾಹರಣೆಯೊಂದಿಗೆ ಅದನ್ನು ನಿರೂಪಿಸಲಿ. ಮುಂದಿನ ಚುನಾವಣೆಯನ್ನು ದೖಷ್ಟಿಯಲ್ಲಿರಿಸಿಕೊಂಡು ಬಿಜೆಪಿಯಿಂದ 

ಷಡ್ಯಂತ್ರ ನಡೆದಿದೆ. ಬಿಜೆಪಿಯ ಎಂದಿನ ಷಡ್ಯಂತ್ರವನ್ನು ತಿಳಿಯದ ಜನತೆ ಕೊಡಗಿನಲ್ಲಿಲ್ಲ.

ಸಂಪತ್ ತಂದೆ 2004 ರಲ್ಲಿ ಸೋಮವಾರಪೇಟೆ ಪಂಚಾಯತ್ ಗೆ ಬಿಜೆಪಿಯಿಂದ ನಾಮನಿದೇ೯ಶಿತ ಸದಸ್ಯರಾಗಿದ್ದರು. ಸಂಪತ್ ಹಿನ್ನಲೆಯಲ್ಲಿ ಬಿಜೆಪಿ ಇತಿಹಾಸವಿದೆ. ಸಂಪತ್ ಯಾರಿಂದ ಕಾಮಗಾರಿ ಗುತ್ತಿಗೆ ಪಡೆಯುತ್ತಿದ್ದಾನೆ ಎಂಬುದು ಸೋಮವಾರಪೇಟೆ ಜನರಿಗೆ ತಿಳಿದಿದೆ.

ಕಾಂಗ್ರೆಸ್ ಅಧಿಕಾರಕ್ಕೇರುವ ತವಕದಲ್ಲಿ ಬಿಜೆಪಿಯಿಂದ ಇಂಥ ಷಡ್ಯಂತ್ರ ಎಂದು ಜೀವಿಜಯ ಆರೋಪ ಆರೋಪ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು