12:17 PM Thursday28 - May 2026
ಬ್ರೇಕಿಂಗ್ ನ್ಯೂಸ್
Kodagu | ಕುಶಾಲನಗರ: 15 ದಿನದೊಳಗೆ ದುಷ್ಕರ್ಮಿಗಳ ಗುಂಡೇಟಿಗೆ 2 ಕಾಡು ಕೋಣಗಳು… ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: ಭಾರತಕ್ಕೆ ಸಿಹಿಸುದ್ದಿ ಕೊಟ್ಟ ಇರಾನ್; 10 ಇಂಡಿಯನ್ ನಾವಿಕರ… Kerala | ಮಾಜಿ ಸಿಎಂ ಪಿಣರಾಯಿ ಮನೆ ಎದುರು ಇ.ಡಿ ವಾಹನಗಳ ಮೇಲೆ… Bangalore | ಐಪಿಎಲ್ ಬೆಟ್ಟಿಂಗ್ ವಿರುದ್ಧ ಸಿಸಿಬಿ ಭರ್ಜರಿ ಕಾರ್ಯಾಚರಣೆ: 23 ಜನ… ಕಾಂಗ್ರೆಸ್‌ ಹೈಡ್ರಾಮಾಕ್ಕೆ ವಿಜಯೇಂದ್ರ ವ್ಯಂಗ್ಯ: ಸಿದ್ದರಾಮಯ್ಯ ಬಿಟ್ಟು ಯಾರೇ ಸಿಎಂ ಆದ್ರೂ ಅದು… ಬೆಂಗಳೂರಿಗೆ ಮಹಾಮಾರಿ ಎಬೋಲಾ ಎಂಟ್ರಿ?: ಉಗಾಂಡದ ಮಹಿಳೆ ಐಸೋಲೇಷನ್‌ನಲ್ಲಿ..! ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ 30ರಂದು ಮಂಗಳೂರಿಗೆ: ಧರ್ಮಸ್ಥಳದಲ್ಲಿ ವಾಸ್ತವ್ಯ ಗಂಡನ ಸಾವಿನ ನೋವಿನಲ್ಲೂ ಮಾನವೀಯತೆ ಮೆರೆದ ಗರ್ಭಿಣಿ ಪತ್ನಿ! ಕಿಡ್ನಿ, ಹಾರ್ಟ್ ಮತ್ತು… ಕಾಫಿ ತೋಟದಲ್ಲಿ ಕಾಡಾನೆಗಳ ‘ರೌದ್ರ ನರ್ತನ: ಅರಣ್ಯ ಸಿಬ್ಬಂದಿಯನ್ನೇ ಬೆನ್ನಟ್ಟಿದ ಗಜಪಡೆ ಮೇಕೆದಾಟು ವಿವಾದ: ತಮಿಳುನಾಡು ಸಿಎಂ ವಿಜಯ್ ತುರ್ತು ಸಭೆ, ಕಾನೂನು ಹೋರಾಟ ಚುರುಕುಗೊಳಿಸಲು…

ಇತ್ತೀಚಿನ ಸುದ್ದಿ

ಮಾಜಿ ಸಿಎಂ ಸಿದ್ದರಾಮಯ್ಯ ‘ಅಮೃತ ಮಹೋತ್ಸವ’: 4 ಲಕ್ಷ ಮಂದಿಗೆ ಆಸನ, 5 ಲಕ್ಷ ಜನರಿಗೆ ಭೋಜನ!

26/07/2022, 14:45

ಬೆಂಗಳೂರು(reporterkarnataka.com):
ದಾವಣಗೆರೆಯ ಶಾಮನೂರು ಪ್ಯಾಲೇಸ್ ಮೈದಾನದಲ್ಲಿ ಆಗಸ್ಟ್‌ 3ರಂದು ನಡೆಯಲಿರುವ ಸಿದ್ದರಾಮಯ್ಯ–75 ಅಮೃತ ಮಹೋತ್ಸವಕ್ಕೆ ಭರದ ಸಿದ್ಧತೆ ನಡೆಯುತ್ತಿದ್ದು, 5 ಲಕ್ಷ ಜನರಿಗೆ ಭೋಜನ ವ್ಯವಸ್ಥೆ ಮಾಡಲಾಗಿದೆ.

ಅಮೃತ ಮಹೋತ್ಸವ ಯಶಸ್ವಿಯ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ನಿವಾಸದಲ್ಲಿ ಹಲವು ಸಭೆಗಳನ್ನು ನಡೆಸಲಾಗಿದೆ. ಅಮೃತ ಮಹೋತ್ಸವ ಸಮಿತಿ ಇವೆಲ್ಲದರ ಜವಾಬ್ದಾರಿ ವಹಿಸಿದೆ. ವಿವಿಧ ವ್ಯವಸ್ಥೆಗಳ ಹೊಣೆಯನ್ನು ಬೇರೆ, ಬೇರೆ ನಾಯಕರಿಗೆ ವಹಿಸಲಾಗಿದೆ.

ಮೈದಾನದಲ್ಲಿ ಬೃಹತ್ ವೇದಿಕೆ ನಿರ್ಮಾಣವಾಗುತ್ತಿದ್ದು, 4 ಲಕ್ಷ ಮಂದಿಗೆ ಆಸನ ವ್ಯವಸ್ಥೆ ಕಲ್ಪಿಸಲು ಅಮೃತ ಮಹೋತ್ಸವ ಸಮಿತಿ ನಿರ್ಧರಿಸಿದೆ. ರಾಹುಲ್ ಗಾಂಧಿ ಮತ್ತಿತರ ಗಣ್ಯರು ಕಾರ್ಯಕ್ರಮಕ್ಕೆ ಬರಲು ಎರಡು ಹೆಲಿಪ್ಯಾಡ್‌ಗಳು ಸಿದ್ಧವಾಗುತ್ತಿದೆ. 5 ಲಕ್ಷ ಮಂದಿಗೆ ಪಲಾವ್, ಮೊಸರನ್ನ ಮತ್ತು ಸಿಹಿ ತಿಂಡಿಯ ಭೋಜನ ವ್ಯವಸ್ಥೆ, 6 ಲಕ್ಷ ಮಂದಿಗೆ ಕುಡಿಯುವ ನೀರಿನ ವ್ಯವಸ್ಥೆ, ಮಳೆ ಬಂದರೆ ಯಾವುದೇ ಸಮಸ್ಯೆ ಆಗದಂತೆ ಪೆಂಡಾಲ್ ವ್ಯವಸ್ಥೆ ಮಾಡಲಾಗುತ್ತಿದೆ. 

ಅಮೃತ ಮಹೋತ್ಸವದಂದು ಬೆಳಿಗ್ಗೆ 10 ಗಂಟೆಗೆ ಕಾರ್ಯಕ್ರಮ ಆರಂಭವಾಗಲಿದೆ. ಮೊದಲು ಸಂಗೀತ ನಿರ್ದೇಶಕ ಹಂಸಲೇಖಾ ತಂಡದಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. 12 ಗಂಟೆಗೆ ವೇದಿಕೆ ಕಾರ್ಯಕ್ರಮ ಆರಂಭವಾಗಲಿದೆ.

ಇದು 2 ತಾಸು ನಡೆಯಲಿದೆ. ಕಾರ್ಯಕ್ರಮದ ಸ್ಥಳದಲ್ಲಿ ಸಿದ್ದರಾಮಯ್ಯ ಅವರ ಕುರಿತಾದ ಛಾಯಾಚಿತ್ರ ಪ್ರದರ್ಶನ ನಡೆಯಲಿದೆ. ಹಿಂದಿನ ದಿನ (ಆ. 2ರ ರಾತ್ರಿ)  ಲೇಸರ್ ಶೋ, ಸಾಂಸ್ಕೃತಿಕ ಕಾರ್ಯಕ್ರಮಗಳೂ ನಡೆಯಲಿದೆ ಎಂದು ಸಮಿತಿಯ ಮೂಲಗಳು ತಿಳಿಸಿವೆ.

ಇತ್ತೀಚಿನ ಸುದ್ದಿ

ಜಾಹೀರಾತು