9:18 AM Sunday15 - February 2026
ಬ್ರೇಕಿಂಗ್ ನ್ಯೂಸ್
ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,… ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ

ಇತ್ತೀಚಿನ ಸುದ್ದಿ

ಮಾಜಿ ಮುಖ್ಯಮಂತ್ರಿ ಸಿದ್ದು ಬರ್ತ್ ಡೇ ಸ್ಪೆಷಲ್ : ತರೀಕೆರೆಯಲ್ಲಿ 75 ಕೆಜಿ ತೂಕದ ಕೇಕ್ ಕಟ್!!

02/08/2022, 21:19

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹುಟ್ಟುಹಬ್ಬದ ಅಂಗವಾಗಿ ಸಿದ್ದು ಅಭಿಮಾನಿಗಳು 75 ಕೆಜಿ ತೂಕದ ಕೇಕ್ ಕತ್ತರಿಸಿ ಸಿದ್ದರಾಮಯ್ಯನವರಿಗೆ ಶುಭ ಕೋರಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಪಟ್ಟಣದಲ್ಲಿ ನಡೆದಿದೆ. 


ತರೀಕೆರೆ ಪಟ್ಟಣದ ಕಾಂಗ್ರೆಸ್ ಕಾರ್ಯಕರ್ತ ಗೋಪಿಕುಮಾರ್ ಇಂದು ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಬರುವ ತರೀಕೆರೆ ಪಟ್ಟಣದ ಗಾಂಧಿ ವೃತ್ತದಲ್ಲಿ 75 ಕೆ.ಜಿ. ತೂಕದ ಕೇಕ್ ಕತ್ತರಿಸಿ ಸಿದ್ದರಾಮಯ್ಯ ಅವರಿಗೆ ಶುಭಕೋರಿದ್ದಾರೆ. ಇದೇ ವೇಳೆ, ಸಿದ್ದು ಹುಟ್ಟುಹಬ್ಬದ ಅಂಗವಾಗಿ ತರೀಕೆರೆ ಪಟ್ಟಣದ ಪಟ್ಟಣ ಪಂಚಾಯಿತಿಯ 23 ಜನ ಸದಸ್ಯರಿಗೂ ಪಕ್ಷಾತೀತವಾಗಿ ಸನ್ಮಾನಿಸಿದ್ದಾರೆ. ಜೊತೆಗೆ ನಾಳೆ ಸಿದ್ದರಾಮಯ್ಯನವರ ಹುಟ್ಟುಹಬ್ಬದ ಅಂಗವಾಗಿ ದಾವಣಗೆರೆಯಲ್ಲಿ ನಡೆಯುವ ಸಿದ್ದರಾಮಯ್ಯ ಅಮೃತ ಮಹೋತ್ಸವಕ್ಕೂ ಗೋಪಿಕುಮಾರ್ ಸಾವಿರಕ್ಕೂ ಅಧಿಕ ಜನರನ್ನ ದಾವಣಗೆರೆಗೆ ಕರೆದೊಯ್ಯುತ್ತಿದ್ದಾರೆ. ಈಗಾಗಲೇ ಎರಡು ಬಸ್ ಹಾಗೂ ಎರಡು ಟಿಟಿ ವಾಹನಗಳಲ್ಲಿ ಸಿದ್ದು ಅಭಿಮಾನಿಗಳು ತುಂಬಿದ್ದು ಮತ್ತಷ್ಟು ಜನ ತಮ್ಮ ಸ್ವಂತ ವಾಹನದಲ್ಲಿ ದಾವಣಗೆರೆಗೆ ತೆರಳಲಿದ್ದಾರೆ. ಇದೇ ವೇಳೆ ಕಾಂಗ್ರೆಸ್ ಮುಖಂಡರಾದ ಉಮ್ಮರ್ ಫಾರುಕ್, ಮಿರ್ಜಾ ಇಸ್ಮಾಯಿಲ್, ಧರ್ಮರಾಜ್, ಪ್ರಕಾಶ್ ವರ್ಮಾ ಸೇರಿದಂತೆ 250ಕ್ಕೂ ಅಧಿಕ ಜನ ರಸ್ತೆ ಮಧ್ಯೆ ಜಮಾಯಿಸಿ ಸಿದ್ದು ಹುಟ್ಟುಹಬ್ಬ ಆಚರಿಸಿದ್ದಾರೆ. ಇದೇ ವೇಳೆ, ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯನವೇ ಎಂದು ಘೋಷಣೆ ಕೂಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು