7:16 AM Thursday25 - June 2026
ಬ್ರೇಕಿಂಗ್ ನ್ಯೂಸ್
ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ…

ಇತ್ತೀಚಿನ ಸುದ್ದಿ

ಮಾಜಿ ಮುಖ್ಯಮಂತ್ರಿ ಸಿದ್ದು ಬರ್ತ್ ಡೇ ಸ್ಪೆಷಲ್ : ತರೀಕೆರೆಯಲ್ಲಿ 75 ಕೆಜಿ ತೂಕದ ಕೇಕ್ ಕಟ್!!

02/08/2022, 21:19

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹುಟ್ಟುಹಬ್ಬದ ಅಂಗವಾಗಿ ಸಿದ್ದು ಅಭಿಮಾನಿಗಳು 75 ಕೆಜಿ ತೂಕದ ಕೇಕ್ ಕತ್ತರಿಸಿ ಸಿದ್ದರಾಮಯ್ಯನವರಿಗೆ ಶುಭ ಕೋರಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಪಟ್ಟಣದಲ್ಲಿ ನಡೆದಿದೆ. 


ತರೀಕೆರೆ ಪಟ್ಟಣದ ಕಾಂಗ್ರೆಸ್ ಕಾರ್ಯಕರ್ತ ಗೋಪಿಕುಮಾರ್ ಇಂದು ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಬರುವ ತರೀಕೆರೆ ಪಟ್ಟಣದ ಗಾಂಧಿ ವೃತ್ತದಲ್ಲಿ 75 ಕೆ.ಜಿ. ತೂಕದ ಕೇಕ್ ಕತ್ತರಿಸಿ ಸಿದ್ದರಾಮಯ್ಯ ಅವರಿಗೆ ಶುಭಕೋರಿದ್ದಾರೆ. ಇದೇ ವೇಳೆ, ಸಿದ್ದು ಹುಟ್ಟುಹಬ್ಬದ ಅಂಗವಾಗಿ ತರೀಕೆರೆ ಪಟ್ಟಣದ ಪಟ್ಟಣ ಪಂಚಾಯಿತಿಯ 23 ಜನ ಸದಸ್ಯರಿಗೂ ಪಕ್ಷಾತೀತವಾಗಿ ಸನ್ಮಾನಿಸಿದ್ದಾರೆ. ಜೊತೆಗೆ ನಾಳೆ ಸಿದ್ದರಾಮಯ್ಯನವರ ಹುಟ್ಟುಹಬ್ಬದ ಅಂಗವಾಗಿ ದಾವಣಗೆರೆಯಲ್ಲಿ ನಡೆಯುವ ಸಿದ್ದರಾಮಯ್ಯ ಅಮೃತ ಮಹೋತ್ಸವಕ್ಕೂ ಗೋಪಿಕುಮಾರ್ ಸಾವಿರಕ್ಕೂ ಅಧಿಕ ಜನರನ್ನ ದಾವಣಗೆರೆಗೆ ಕರೆದೊಯ್ಯುತ್ತಿದ್ದಾರೆ. ಈಗಾಗಲೇ ಎರಡು ಬಸ್ ಹಾಗೂ ಎರಡು ಟಿಟಿ ವಾಹನಗಳಲ್ಲಿ ಸಿದ್ದು ಅಭಿಮಾನಿಗಳು ತುಂಬಿದ್ದು ಮತ್ತಷ್ಟು ಜನ ತಮ್ಮ ಸ್ವಂತ ವಾಹನದಲ್ಲಿ ದಾವಣಗೆರೆಗೆ ತೆರಳಲಿದ್ದಾರೆ. ಇದೇ ವೇಳೆ ಕಾಂಗ್ರೆಸ್ ಮುಖಂಡರಾದ ಉಮ್ಮರ್ ಫಾರುಕ್, ಮಿರ್ಜಾ ಇಸ್ಮಾಯಿಲ್, ಧರ್ಮರಾಜ್, ಪ್ರಕಾಶ್ ವರ್ಮಾ ಸೇರಿದಂತೆ 250ಕ್ಕೂ ಅಧಿಕ ಜನ ರಸ್ತೆ ಮಧ್ಯೆ ಜಮಾಯಿಸಿ ಸಿದ್ದು ಹುಟ್ಟುಹಬ್ಬ ಆಚರಿಸಿದ್ದಾರೆ. ಇದೇ ವೇಳೆ, ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯನವೇ ಎಂದು ಘೋಷಣೆ ಕೂಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು