10:13 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ ಬಂಗ್ಲೆ ಲಾಕ್: ಎಸ್‌ಐಟಿ ವಶಕ್ಕೆ

05/05/2024, 18:23

ಹಾಸನ(reporterkarnataka.com):ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ ಬಂಗ್ಲೆಯನ್ನು ಎಸ್‌ಐಟಿ ವಶಕ್ಕೆ ಪಡೆದಿದೆ.
ಪ್ರಜ್ವಲ್‌ ರೇವಣ್ಣ ಅವರು ಹಾಸನದ ಇದೇ ಸರಕಾರಿ ಬಂಗ್ಲೆಯಲ್ಲಿ ಅತ್ಯಾಚಾರ ನಡೆಸಿರುವ ಬಗ್ಗೆ ದೂರು ದಾಖಲಾಗಿರುವ ಹಿನ್ನೆಲೆಯಲ್ಲಿ ಬಂಗ್ಲೆಗೆ ಬೀಗಮುದ್ರೆ ಹಾಕಲಾಗಿದೆ.
ಮಾಜಿ ಪ್ರಧಾನಿ ದೇವೇಗೌಡ ಅವರಿಗೆ ಸರಕಾರ ನೀಡಿದ್ದ ಈ ಬಂಗ್ಲೆಯನ್ನು ಪ್ರಜ್ವಲ್‌ ಬಳಸಿಕೊಳ್ಳುತ್ತಿದ್ದರು.
ಎಸ್‌ಐಟಿ ಅಧಿಕಾರಿಗಳು ಇದೀಗ ಈ ಬಂಗ್ಲೆಯನ್ನು ವಶಕ್ಕೆ ಪಡೆದಿದ್ದಾರೆ. ಸಂಸದರು ಈ ಬಂಗ್ಲೆಯ ರೂಮ್‌ನಲ್ಲಿ ಅತ್ಯಾಚಾರ ನಡೆಸಿದ್ದರು ಎಂದು ಪ್ರಜ್ವಲ್ ರೇವಣ್ಣ‌ ವಿರುದ್ಧ ಮಹಿಳೆಯೊಬ್ಬರು ದೂರು ನೀಡಿದ್ದರ. ಈ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲಾಗಿದೆ.
ಇಂದಿಗೂ ದೇವೇಗೌಡರಿಗೆ ಮೀಸಲಾಗಿರುವ ಸಂಸದರ ನಿವಾಸವನ್ನು ಸದ್ಯ ಪ್ರಜ್ವಲ್ ರೇವಣ್ಣ ಬಳಸಿಕೊಳ್ಳುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು