7:40 AM Sunday29 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ಮಾಜಿ ರಾಜ್ಯಪಾಲ ಉಡುಪಿಯ ಪಿ.ಬಿ. ಆಚಾರ್ಯ ಅಸ್ತಂಗತ: ಮುಂಬೈ ನಿವಾಸದಲ್ಲಿ ಕೊನೆಯುಸಿರೆಳೆದ ಕರಾವಳಿ ಕಣ್ಮಣಿ

11/11/2023, 11:39

ಮಂಗಳೂರು(reporterkarnataka.com): ನಾಗಾಲ್ಯಾಂಡ್ ಸೇರಿದಂತೆ ಈಶಾನ್ಯ ರಾಜ್ಯಗಳ ರಾಜ್ಯಪಾಲರಾಗಿ ದೀರ್ಘಕಾಲ ಸೇವೆ ಸಲ್ಲಿಸಿದ್ದ ಉಡುಪಿ ಮೂಲದ ಪದ್ಮನಾಭ ಬಾಲಕೃಷ್ಣ ಆಚಾರ್ಯ (ಪಿ.ಬಿ. ಆಚಾರ್ಯ) ಮುಂಬಯಿ ನಿವಾಸದಲ್ಲಿ ಶುಕ್ರವಾರ ನಿಧನರಾದರು.
ಪಿ.ಬಿ. ಆಚಾರ್ಯ ಅವರು ಮಣಿಪುರ, ನಾಗಲ್ಯಾಂಡ್, ಅರುಣಾಚಲ ಪ್ರದೇಶದ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದರು. ಅವರು ಪತ್ನಿ ಸವಿತಾ ಆಚಾರ್ಯ, ಮೂವರು ಪುತ್ರರು, ಓರ್ವ ಪುತ್ರಿಯನ್ನು ಅಗಲಿದ್ದಾರೆ.
ಉಡುಪಿಯಲ್ಲಿ ಬಾಲಕೃಷ್ಣ, ರಾಧಾ ಆಚಾರ್ಯ ದಂಪತಿ ಪುತ್ರನಾಗಿ ಪಿ.ಬಿ. ಆಚಾರ್ಯ ಅವರು 1931ರ ಅ.8ರಂದು ಜನಿಸಿದ್ದರು. ಉಡುಪಿಯ ಕ್ರಿಶ್ಚಿಯನ್ ಹೈಸ್ಕೂಲ್‌ನಲ್ಲಿ ಮೆಟ್ರಿಕ್ಯುಲೇಷನ್ ಶಿಕ್ಷಣ ಮುಗಿಸಿದ ಅವರು ಎಂಜಿಎಂ ಕಾಲೇಜಿನಲ್ಲಿ ಪದವಿ ಪಡೆದರು.
ಮುಂಬಯಿ ವಿವಿಯಲ್ಲಿ ಎಲ್‌ಎಲ್‌ಬಿ ಪದವಿ ಪಡೆದರು. ಮುಂಬಯಿ ವಿವಿಯ ಸೆನೆಟ್ ಸದಸ್ಯರಾಗಿದ್ದರು. ಅಖಿಲ ಭಾರತ ವಿದ್ಯಾರ್ಥಿ ಪರಿಷತ್ತಿನ ರಾಷ್ಟ್ರೀಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
ಸಂಘ ಪರಿವಾರದ ಸಂಘಟನೆಗಳಲ್ಲಿ ಹಲವು ವರ್ಷ ಸಕ್ರಿಯರಾಗಿದ್ದ ಅವರು ಈಶಾನ್ಯ ರಾಜ್ಯಗಳ ಅಭಿವೃದ್ಧಿ ಮತ್ತು ಶೈಕ್ಷಣಿಕ ವಿಚಾರದಲ್ಲಿ ಆಳವಾದ ಅಧ್ಯಯನ ಮಾಡಿದ್ದರು. ಉಡುಪಿಯೊಂದಿಗೆ ನಿಕಟ ಸಂಪರ್ಕ ಹೊಂದಿದ್ದ ಅವರು ಅವರು ಮಂಗಳೂರಿನ ಜತೆಯೂ ನಿಕಟ ಬಾಂಧವ್ಯ ಇಟ್ಟುಕೊಂಡಿದ್ದರು. ಮಂಗಳೂರಿನ ದೇರೆಬೈಲ್ ಕೊಂಚಾಡಿಯ ಲ್ಯಾಂಡ್ ಲಿಂಕ್ಸ್ ಟೌನ್ ಶಿಪ್ ಗೆ ಒತ್ತಿಕೊಂಡು ಅವರ ಪತ್ನಿಯ ತವರು ಮನೆ ಇದೆ. ರಾಜ್ಯಪಾಲರಾಗಿದ್ದ ವೇಳೆಯಲ್ಲೂ ಅವರು ಹಲವು ಬಾರಿ ಲ್ಯಾಂಡ್ ಲಿಂಕ್ಸ್ ಟೌನ್ ಶಿಪ್ ಗೆ ಭೇಟಿ ಕೊಟ್ಟಿದ್ದರು. ಮಾಜಿ ಆದ ಬಳಿಕವೂ ಲ್ಯಾಂಡ್ ಲಿಂಕ್ಸ್ ಟೌನ್ ಶಿಪ್ ಗೆ ಬಂದಿದ್ದರು. ರಾಜ್ಯಪಾಲರಾಗಿದ್ದಾಗ ಲ್ಯಾಂಡ್ ಲಿಂಕ್ಸ್ ಟೌನ್ ಶಿಪ್ ಮೈದಾನದಲ್ಲಿ ನಡೆದ ಸಮಾರಂಭವೊಂದರಲ್ಲಿ ಭಾಗವಹಿಸಿದ್ದರು. ಸರಳ ವ್ಯಕ್ತಿತ್ವ ಆಚಾರ್ಯ ಅವರಿಗೆ ಮಕ್ಕಳು ಅಂದ್ರೆ ಅಚ್ಚುಮೆಚ್ಚು. ಮಕ್ಕಳಿಗೋಸ್ಕರವೇ ಜೇಬಿನಲ್ಲಿ ಚಾಕಲೇಟ್ ಇಟ್ಟುಕೊಳ್ಳುತ್ತಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು