7:54 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಮಾಜಿ ರಾಜ್ಯಪಾಲ ಉಡುಪಿಯ ಪಿ.ಬಿ. ಆಚಾರ್ಯ ಅಸ್ತಂಗತ: ಮುಂಬೈ ನಿವಾಸದಲ್ಲಿ ಕೊನೆಯುಸಿರೆಳೆದ ಕರಾವಳಿ ಕಣ್ಮಣಿ

11/11/2023, 11:39

ಮಂಗಳೂರು(reporterkarnataka.com): ನಾಗಾಲ್ಯಾಂಡ್ ಸೇರಿದಂತೆ ಈಶಾನ್ಯ ರಾಜ್ಯಗಳ ರಾಜ್ಯಪಾಲರಾಗಿ ದೀರ್ಘಕಾಲ ಸೇವೆ ಸಲ್ಲಿಸಿದ್ದ ಉಡುಪಿ ಮೂಲದ ಪದ್ಮನಾಭ ಬಾಲಕೃಷ್ಣ ಆಚಾರ್ಯ (ಪಿ.ಬಿ. ಆಚಾರ್ಯ) ಮುಂಬಯಿ ನಿವಾಸದಲ್ಲಿ ಶುಕ್ರವಾರ ನಿಧನರಾದರು.
ಪಿ.ಬಿ. ಆಚಾರ್ಯ ಅವರು ಮಣಿಪುರ, ನಾಗಲ್ಯಾಂಡ್, ಅರುಣಾಚಲ ಪ್ರದೇಶದ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದರು. ಅವರು ಪತ್ನಿ ಸವಿತಾ ಆಚಾರ್ಯ, ಮೂವರು ಪುತ್ರರು, ಓರ್ವ ಪುತ್ರಿಯನ್ನು ಅಗಲಿದ್ದಾರೆ.
ಉಡುಪಿಯಲ್ಲಿ ಬಾಲಕೃಷ್ಣ, ರಾಧಾ ಆಚಾರ್ಯ ದಂಪತಿ ಪುತ್ರನಾಗಿ ಪಿ.ಬಿ. ಆಚಾರ್ಯ ಅವರು 1931ರ ಅ.8ರಂದು ಜನಿಸಿದ್ದರು. ಉಡುಪಿಯ ಕ್ರಿಶ್ಚಿಯನ್ ಹೈಸ್ಕೂಲ್‌ನಲ್ಲಿ ಮೆಟ್ರಿಕ್ಯುಲೇಷನ್ ಶಿಕ್ಷಣ ಮುಗಿಸಿದ ಅವರು ಎಂಜಿಎಂ ಕಾಲೇಜಿನಲ್ಲಿ ಪದವಿ ಪಡೆದರು.
ಮುಂಬಯಿ ವಿವಿಯಲ್ಲಿ ಎಲ್‌ಎಲ್‌ಬಿ ಪದವಿ ಪಡೆದರು. ಮುಂಬಯಿ ವಿವಿಯ ಸೆನೆಟ್ ಸದಸ್ಯರಾಗಿದ್ದರು. ಅಖಿಲ ಭಾರತ ವಿದ್ಯಾರ್ಥಿ ಪರಿಷತ್ತಿನ ರಾಷ್ಟ್ರೀಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
ಸಂಘ ಪರಿವಾರದ ಸಂಘಟನೆಗಳಲ್ಲಿ ಹಲವು ವರ್ಷ ಸಕ್ರಿಯರಾಗಿದ್ದ ಅವರು ಈಶಾನ್ಯ ರಾಜ್ಯಗಳ ಅಭಿವೃದ್ಧಿ ಮತ್ತು ಶೈಕ್ಷಣಿಕ ವಿಚಾರದಲ್ಲಿ ಆಳವಾದ ಅಧ್ಯಯನ ಮಾಡಿದ್ದರು. ಉಡುಪಿಯೊಂದಿಗೆ ನಿಕಟ ಸಂಪರ್ಕ ಹೊಂದಿದ್ದ ಅವರು ಅವರು ಮಂಗಳೂರಿನ ಜತೆಯೂ ನಿಕಟ ಬಾಂಧವ್ಯ ಇಟ್ಟುಕೊಂಡಿದ್ದರು. ಮಂಗಳೂರಿನ ದೇರೆಬೈಲ್ ಕೊಂಚಾಡಿಯ ಲ್ಯಾಂಡ್ ಲಿಂಕ್ಸ್ ಟೌನ್ ಶಿಪ್ ಗೆ ಒತ್ತಿಕೊಂಡು ಅವರ ಪತ್ನಿಯ ತವರು ಮನೆ ಇದೆ. ರಾಜ್ಯಪಾಲರಾಗಿದ್ದ ವೇಳೆಯಲ್ಲೂ ಅವರು ಹಲವು ಬಾರಿ ಲ್ಯಾಂಡ್ ಲಿಂಕ್ಸ್ ಟೌನ್ ಶಿಪ್ ಗೆ ಭೇಟಿ ಕೊಟ್ಟಿದ್ದರು. ಮಾಜಿ ಆದ ಬಳಿಕವೂ ಲ್ಯಾಂಡ್ ಲಿಂಕ್ಸ್ ಟೌನ್ ಶಿಪ್ ಗೆ ಬಂದಿದ್ದರು. ರಾಜ್ಯಪಾಲರಾಗಿದ್ದಾಗ ಲ್ಯಾಂಡ್ ಲಿಂಕ್ಸ್ ಟೌನ್ ಶಿಪ್ ಮೈದಾನದಲ್ಲಿ ನಡೆದ ಸಮಾರಂಭವೊಂದರಲ್ಲಿ ಭಾಗವಹಿಸಿದ್ದರು. ಸರಳ ವ್ಯಕ್ತಿತ್ವ ಆಚಾರ್ಯ ಅವರಿಗೆ ಮಕ್ಕಳು ಅಂದ್ರೆ ಅಚ್ಚುಮೆಚ್ಚು. ಮಕ್ಕಳಿಗೋಸ್ಕರವೇ ಜೇಬಿನಲ್ಲಿ ಚಾಕಲೇಟ್ ಇಟ್ಟುಕೊಳ್ಳುತ್ತಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು