6:14 AM Friday20 - March 2026
ಬ್ರೇಕಿಂಗ್ ನ್ಯೂಸ್
Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ… ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು…

ಇತ್ತೀಚಿನ ಸುದ್ದಿ

ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಕಾಂಗ್ರೆಸ್ ಗೆ ರಾಜೀನಾಮೆ: ಬಿಜೆಪಿ ಸೇರ್ಪಡೆಗೆ ಕಮಲ ಪಡೆಯ ಗ್ರೀನ್  ಸಿಗ್ನಲ್ ನ ಕಾತರದಲ್ಲಿ ನೇತಾರ

07/05/2022, 20:36

ಉಡುಪಿ(reporterkarnataka.com):  ಕಾಂಗ್ರೆಸ್ ನಾಯಕ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರು ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.

ಅವರು ತನ್ನ ರಾಜೀನಾಮೆ ಪತ್ರವನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಸಲ್ಲಿಸಿದ್ದಾರೆ. ಉಡುಪಿ ಕಾಂಗ್ರೆಸ್ ನಲ್ಲಿ ತಾನು ಮುಂದುವರಿಯುವ ವಾತಾವರಣ ಇಲ್ಲ. ನನ್ನನ್ನು ಇತ್ತೀಚೆಗೆ ಕೆಪಿಸಿಸಿ ಉಪಾಧ್ಯಕ್ಷ ಸ್ಥಾನಕ್ಕೆ ನೇಮಿಸಿರುವುದಕ್ಕೆ ಧನ್ಯವಾದಗಳು ಎಂದು ಅವರು ತನ್ನ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.

ಇದಕ್ಕೆ ಮುನ್ನ ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್  ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪ್ರಮೋದ್ ಮಧ್ವರಾಜ್ ಅವರು ಬಿಜೆಪಿ ಸೇರ್ಪಡೆ ಕುರಿತು ರಾಜ್ಯ ನಾಯಕರು ಅಂತಿಮ ತೀರ್ಮಾನ ಕೈಗೊಳ್ಳುವರು ಎಂದು ಹೇಳಿದ್ದರು.

ಪಕ್ಷದ ಜಿಲ್ಲಾ ಘಟಕದ ಅಭಿಪ್ರಾಯವನ್ನು ರಾಜ್ಯ ನಾಯಕರಿಗೆ ತಿಳಿಸಲಾಗಿದೆ. ಕಾರ್ಯಕರ್ತ ರೊಂದಿಗೆ ಸಮಾಲೋಚಿಸಿ ನಾವು ನಮ್ಮ ಅಭಿಪ್ರಾಯವನ್ನು ತಿಳಿಸಿದ್ದೇವೆ ಎಂದು ಜಿಲ್ಲಾಧ್ಯಕ್ಷರು ನುಡಿದ್ದರು.

ರಾಜ್ಯ ನಾಯಕರು ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೂ ನಮ್ಮ ಸಂಪೂರ್ಣ ಬೆಂಬಲವಿದೆ. ಪ್ರಮೋದ್ ಅವರನ್ನು ಪಕ್ಷಕ್ಕೆ ಸೇರಿಸಬೇಕೇ ಅಥವಾ ಬೇಡವೇ ಎಂಬ ಅಂತಿಮ ತೀರ್ಮಾನವನ್ನು ರಾಜ್ಯ ನಾಯಕರು ಕೈಗೊಳ್ಳುವರು ಎಂದು ಸುರೇಶ್ ನಾಯಕ್ ತಿಳಿಸಿದ್ದರು.

ಪ್ರಮೋದ್ ಮಧ್ಯರಾಜ್ ಅವರು ಮಾಜಿ ಸಚಿವೆ ಹಾಗೂ ಮಾಜಿ ಸಂಸದೆ ಮನೋರಮಾ ಮಧ್ವರಾಜ್ ಅವರ ಪುತ್ರ. ಮನೋರಮಾ ಅವರು ಡಿ. ದೇವರಾಜ ಅರಸ್, ವೀರೇಂದ್ರ ಪಾಟೀಲ್, ಎಸ್. ಬಂಗಾರಪ್ಪ ಅವರ ಸಂಪುಟದಲ್ಲಿ ಸಚಿವರಾಗಿದ್ದರು. ಪ್ರಮೋದ್ ಮಧ್ವರಾಜ್ ಅವರು ಸಿದ್ದರಾಮಯ್ಯ ಸಂಪುಟದಲ್ಲಿ ಉಡುಪಿ ಉಸ್ತುವಾರಿ ಸಚಿವರಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು