11:52 PM Monday31 - August 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

ಮಾಜಿ ಸಚಿವ ಪ್ರಮೋದ್ ಮಧ್ವರಾಜ್  ಬಿಜೆಪಿ ಸೇರ್ಪಡೆಗೆ ನನ್ನ ವಿರೋಧವಿಲ್ಲ: ಶಾಸಕ ರಘುಪತಿ ಭಟ್

19/02/2022, 08:49

ಉಡುಪಿ(reporterkarnataka.com): ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಗೆ ಈಗ ಬಿಜೆಪಿಯ ಬಾಗಿಲು ತೆರೆದಿದೆ. ಅವರು ಪಕ್ಷಕ್ಕೆ ಬಂದರೆ ಸ್ವಾಗತ ಮಾಡುತ್ತೇನೆ ಎಂದು ಉಡುಪಿ ಬಿಜೆಪಿ ಶಾಸಕ ಕೆ. ರಘುಪತಿ‌ ಭಟ್ ಹೇಳಿದರು.

ಉಡುಪಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2018ರ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಪ್ರಮೋದ್ ಸೇರ್ಪಡೆಗೆ ನಾನು ವಿರೋಧ ವ್ಯಕ್ತಪಡಿಸಿದ್ದು ನಿಜ. ನಾನು ಉಡುಪಿ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಕಾರಣ, ನನ್ನ ಸ್ಥಾನಕ್ಕೆ ಕುತ್ತು ಬರಬಹುದೆಂಬ ನಿಟ್ಟಿನಿಂದ ಸ್ವಭಾವಿಕವಾಗಿ ವಿರೋಧ ಮಾಡಿದ್ದೇನು. ಆಗಲೂ ಪಕ್ಷಕ್ಕೆ ಸೇರ್ಪಡೆಗೆ ನನ್ನ‌ ಅಭ್ಯಂತರ ಇರಲಿಲ್ಲ‌. ಆದರೆ, ಅಭ್ಯರ್ಥಿ ಮಾಡುವುದಕ್ಕೆ ನನ್ನ ವಿರೋಧ ಇತ್ತು ಎಂದು ತಿಳಿಸಿದ್ದಾರೆ.

ಬೇರೆ ಪಕ್ಷದ ನಾಯಕನ ಆಗಮನದಿಂದ ಪಕ್ಷ ಬಲವರ್ಧನೆ ಆಗುತ್ತದೆ ಎಂದಾದರೆ ನನಗೆ ಸಂತೋಷವೇ. ಈಗ ನನ್ನ ಬುಡ ಗಟ್ಟಿಯಾಗಿದೆ‌. ಯಾವುದೇ ನಾಯಕರ ಸೇರ್ಪಡೆಗೆ ನಾನು ವಿರೋಧ ಮಾಡಲ್ಲ. ಪಕ್ಷದ ಸಿದ್ಧಾಂತ ಒಪ್ಪಿ ಬರುವುದಾರೆ ಸ್ವಾಗತ ಎಂದರು.

ಎಲ್ಲ ಶಾಸಕರು ಪಕ್ಷದ ಜೊತೆಗೆ ಅವರ ಬುಡ ಗಟ್ಟಿ ಮಾಡಲು ನೋಡುವುದು ಸಹಜ..ಅದರಲ್ಲಿ ಎರಡು ಮಾತಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು