4:05 AM Tuesday25 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಮಾಜಿ ಸಂಸದ ವೆಂಕಟೇಶ್ ನಾಯಕ್ ಹುಟ್ಟುಹಬ್ಬ ಪ್ರಯುಕ್ತ ಕೊರೊನಾ ವಾರಿಯರ್ಸ್ ಗೆ ಆಹಾರ ಪದಾರ್ಥ ವಿತರಣೆ

29/06/2021, 00:12

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ದೇವದುರ್ಗ ಅರಕೆರೆಯ ಹಿರಿಯ ರಾಜಕಾರಣಿ,

ಶ್ರೀದೇವಿ ಆರ್. ನಾಯಕ್ ಅವರ ತಾತ ಎ. ವೆಂಕಟೇಶ್ ನಾಯಕ್ ಅವರ ಹುಟ್ಟುಹಬ್ಬದ ಪ್ರಯುಕ್ತ ಕಾಂಗ್ರೆಸ್ ಪಕ್ಷದ ಸುಮಾರು 100 ಮಂದಿ ಕೊರೊನಾ ವಾರಿಯರ್ಸಗಳಿಗೆ 25 ಕೆಜಿ ಅಕ್ಕಿ ಹಾಗೂ ಆಹಾರ ಪದಾರ್ಥಗಳು ಮತ್ತು ತರಕಾರಿಯನ್ನು ಕೆಪಿಸಿಸಿ ರಾಜ್ಯ ಮಹಿಳಾ ಮಹಿಳಾ ಕಾರ್ಯದರ್ಶಿ ಶ್ರೀದೇವಿ ನಾಯಕ್ ವಿತರಿಸಿದರು. 

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪ್ರತಿವರ್ಷ ತಾತನವರ ಹುಟ್ಟುಹಬ್ಬದ ಕಾರ್ಯಕ್ರಮ ನಡೆಸಲಾಗುತ್ತಿದೆ. ಪ್ರತಿ ವರ್ಷ ಈ ಕಾರ್ಯಕ್ರಮದಲ್ಲಿ ಬಡವರು, ಕಷ್ಟದಲ್ಲಿರುವವರಿಗೆ ಸಹಾಯ ಮಾಡಲಾಗುತ್ತದೆ. ಅವರಿಗೆ ಒಳ್ಳೆಯದಾದರೆ ನಮಗೂ ಒಳ್ಳೆಯ ಆಗುತ್ತೆ ಎನ್ನುವ ನಿಟ್ಟಿನಲ್ಲಿ  ಕಾರ್ಯಕ್ರಮದ ಕಾರ್ಯಗಳ ನೆರವೇರಿಸುವ ಮೂಲಕ ಹಿರಿಯ ರಾಜಕಾರಣಿ ಎ. ವೆಂಕಟೇಶ್ ನಾಯಕ್ ಅವರನ್ನು ನಾವು ಸ್ಮರಿಸುತ್ತೇವೆ. ಅವರು ಹಾಕಿಕೊಟ್ಟ ಮಾರ್ಗದಲ್ಲಿ ಸಾಗುತ್ತಿದ್ದೇವೆ ಎಂದು ಹೇಳಿದರು.

ದೇವದುರ್ಗ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಅರಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಪುರಸಭೆ ಸದಸ್ಯರು, ತಾಲ್ಲೂಕು ಪಂಚಾಯಿತಿ ಸದಸ್ಯರು, ಗ್ರಾಮ ಪಂಚಾಯಿತಿ ಅಧ್ಯಕ್ಷರು,  ಕಾಂಗ್ರೇಸಿನ ಹಿರಿಯ ಮುಖಂಡರು, ಯುವ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸಾಮಾಜಿಕ ಜಾಲತಾಣದ ಅಧ್ಯಕ್ಷರುಗಳು ಹಾಗೂ ಶ್ರೀದೇವಿ ನಾಯಕ್ ಅಭಿಮಾನಿಗಳ ಬಳಗದವರು ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು