2:52 PM Wednesday4 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಮಾಜಿ ಶಾಸಕ ಜೆ.ಆರ್. ಲೋಬೊ ಅವರಿಂದ ಫುಡ್ ಕಿಟ್ ವಿತರಣೆ: ಎಲ್ಲ ಓಕೆ, ಆದರೆ ಸಾಮಾಜಿಕ ಅಂತರ ಇಲ್ಲ ಯಾಕೆ?; ಇದು ಪ್ರಜ್ಞಾವಂತರ ಪ್ರಶ್ನೆ

16/06/2021, 15:42

ಮಂಗಳೂರು(reporterkarnatakanews) ಕೊರೊನಾ ಲಾಕ್ ಡೌನ್ ನ ಕಷ್ಟಕಾಲದಲ್ಲಿ ಮಂಗಳೂರು ಮಹಾ ನಗರಪಾಲಿಕೆ ವ್ಯಾಪ್ತಿಯಲ್ಲಿ ಕಾಂಗ್ರೆಸ್ ವಿತರಿಸುತ್ತಿರುವ ಆಹಾರ ಕಿಟ್ ಗೆ ಎಲ್ಲೆಡೆ ನೂಕುನುಗ್ಗಲು ಉಂಟಾಗುತ್ತಿದೆ. ಜನರು ಆಹಾರವಿಲ್ಲದೆ ಎಷ್ಟು ಕಂಗೆಟ್ಟಿದ್ದರು ಎನ್ನುವುದಕ್ಕೆ ಇದು ಸಾಕ್ಷಿಯಾಗಿದೆ. ಕಾಂಗ್ರೆಸ್ ಇರಲಿ, ಬಿಜೆಪಿ ಇರಲಿ ಅಥವಾ ಯಾವುದೇ ಪಕ್ಷದವರಿರಲಿ ಕಷ್ಟಕಾಲದಲ್ಲಿ ಜನರ ನೆರವಿಗೆ ಧಾವಿಸುವುದು ಶ್ಲಾಘನೀಯ ವಿಷಯವಾಗಿದೆ. ಆದರೆ ಕಾಂಗ್ರೆಸ್ ಫುಡ್ ಕಿಟ್ ವಿತರಣೆ ಸಂದರ್ಭದಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳುತ್ತಿಲ್ಲ ಎಂಬ ಆರೋಪ ಸಾರ್ವಜನಿಕರಿಂದ ಕೇಳಿ ಬರುತ್ತಿದೆ.

ಮೇಲಿನ ಚಿತ್ರಗಳನ್ನು ಅವಲೋಕಿಸಿದಾಗ ಸಾರ್ವಜನಿಕರ ಆರೋಪ ಕೂಡ ನಿಜವಾದದ್ದು ಎನ್ನುವುದು ಸ್ಪಷ್ಟವಾಗುತ್ತದೆ.

ಕಾರ್ಪೊರೇಟರ್ ಪ್ರವೀಣ್ ಚಂದ್ರ ಆಳ್ವ ಅವರ ಕಂಕನಾಡಿ ಬಿ ವಾರ್ಡ್ ನಲ್ಲಿ ಮಾಜಿ ಶಾಸಕ ಜೆ.ಆರ್. ಲೋಬೊ ಅವರು ತನ್ನ ವೈಯಕ್ತಿಕ ದೇಣಿಗೆಯಿಂದ ಫುಡ್ ಕಿಟ್ ಪೂರೈಸುತ್ತಿದ್ದಾರೆ. ಇದು ಕಳೆದ ಕೆಲವು ದಿನಗಳಿಂದ ನಡೆಯುತ್ತಿದೆ. ಬಡವರಿಗೆ, ನಿರ್ಗತಿಕರಿಗೆ, ಕೂಲಿ ಕಾರ್ಮಿಕರಿಗೆ, ಆಟೋ ಡ್ರೈವರ್ ಗಳಿಂದ ಇದರಿಂದ ಬಹಳಷ್ಟು ಪ್ರಯೋಜನವಾಗಿದೆ. ಕೆಲವು ಕಡೆ ಕೊರೊನಾ ಸೋಂಕಿನಿಂದಲ್ಲ, ಹಸಿವಿನಿಂದ ಸಾಯುವ ಪರಿಸ್ಥಿತಿ ಏರ್ಪಟ್ಟಿತು. ಇಂತಹ ಸಂದರ್ಭದಲ್ಲಿ ಜೆ.ಆರ್. ಲೋಬೊ ಅವರ ಜನಸೇವೆ ಮೆಚ್ಚುವಂತದ್ದೇ ಎಂದು ಜನರು ಪಕ್ಷಬೇಧ ಮರೆತು ಸಂತೋಷ ವ್ಯಕ್ತಪಡಿಸುತ್ತಾರೆ. ಆದರೆ ‘ಎಲ್ಲ ಬಣ್ಣವನ್ನು ಮಸಿ ನುಂಗಿತು: ಎನ್ನುವ ಹಾಗೆ, ಸಾಮಾಜಿಕ ಅಂತರವಿಲ್ಲದೆ ಹಸಿದವರು ನೆರೆದ ಬಗ್ಗೆ ಕೆಲವರು ತಕರಾರು ವ್ಯಕ್ತಪಡಿಸಿದ್ದಾರೆ. ಪ್ರಸಕ್ತ ಸನ್ನಿವೇಶದಲ್ಲಿ ಈ ಆರೋಪಕ್ಕೆ ಬೆಲೆಯೂ ಇದೆ. ನಾವು ಸ್ವಲ್ಪ ನಿರ್ಲಕ್ಷ್ಯ ವಹಿಸಿದರೂ ದೊಡ್ಡ ಪರಿಣಾಮವನ್ನು ಎದುರಿಸಬೇಕಾಗುತ್ತದೆ.



ಹಾಗೆ ಕೆಪಿಟಿಯಲ್ಲಿ ಇತ್ತೀಚೆಗೆ ಯುವ ಕಾಂಗ್ರೆಸ್ ನಾಯಕ ಮೆರಿಲ್ ರೇಗೊ ನೇತೃತ್ವದಲ್ಲಿ ಭೋಜನ ವ್ಯವಸ್ಥೆ ಮಾಡಲಾಗಿತ್ತು. ಇದಲ್ಲದೆ ಯುವ ಕಾಂಗ್ರೆಸ್ ನಿಂದ ಲಸಿಕೆ ಆನ್ ಲೈನ್ ಬುಕ್ಕಿಂಗ್ ಬಗ್ಗೆ ಜಾಗೃತಿ ಅಭಿಯಾನ ನಡೆಯುತ್ತಿದೆ. ಈ ಎಲ್ಲ ಸಂದರ್ಭಗಳಲ್ಲಿ ಸಾಮಾಜಿಕ ಅಂತರದ ಕೊರತೆ ಎದ್ದು ಕಾಣುತ್ತಿದೆ ಎಂಬ ಆರೋಪವಿದೆ.  ಕಾಂಗ್ರೆಸ್ ಇನ್ನಾದರು ತಮ್ಮ ಸ್ವಯಂಸೇವಕರನ್ನು ಬಳಸಿಕೊಂಡು ಸಾಮಾಜಿಕ ಅಂತರಕ್ಕೆ ಪ್ರಾಧಾನ್ಯತೆ ಕೊಡಬೇಕು.

ಇತ್ತೀಚಿನ ಸುದ್ದಿ

ಜಾಹೀರಾತು