5:07 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಮಾಜಿ ಶಾಸಕ ಜೆ.ಆರ್. ಲೋಬೊ ಅವರಿಂದ ಫುಡ್ ಕಿಟ್ ವಿತರಣೆ: ಎಲ್ಲ ಓಕೆ, ಆದರೆ ಸಾಮಾಜಿಕ ಅಂತರ ಇಲ್ಲ ಯಾಕೆ?; ಇದು ಪ್ರಜ್ಞಾವಂತರ ಪ್ರಶ್ನೆ

16/06/2021, 15:42

ಮಂಗಳೂರು(reporterkarnatakanews) ಕೊರೊನಾ ಲಾಕ್ ಡೌನ್ ನ ಕಷ್ಟಕಾಲದಲ್ಲಿ ಮಂಗಳೂರು ಮಹಾ ನಗರಪಾಲಿಕೆ ವ್ಯಾಪ್ತಿಯಲ್ಲಿ ಕಾಂಗ್ರೆಸ್ ವಿತರಿಸುತ್ತಿರುವ ಆಹಾರ ಕಿಟ್ ಗೆ ಎಲ್ಲೆಡೆ ನೂಕುನುಗ್ಗಲು ಉಂಟಾಗುತ್ತಿದೆ. ಜನರು ಆಹಾರವಿಲ್ಲದೆ ಎಷ್ಟು ಕಂಗೆಟ್ಟಿದ್ದರು ಎನ್ನುವುದಕ್ಕೆ ಇದು ಸಾಕ್ಷಿಯಾಗಿದೆ. ಕಾಂಗ್ರೆಸ್ ಇರಲಿ, ಬಿಜೆಪಿ ಇರಲಿ ಅಥವಾ ಯಾವುದೇ ಪಕ್ಷದವರಿರಲಿ ಕಷ್ಟಕಾಲದಲ್ಲಿ ಜನರ ನೆರವಿಗೆ ಧಾವಿಸುವುದು ಶ್ಲಾಘನೀಯ ವಿಷಯವಾಗಿದೆ. ಆದರೆ ಕಾಂಗ್ರೆಸ್ ಫುಡ್ ಕಿಟ್ ವಿತರಣೆ ಸಂದರ್ಭದಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳುತ್ತಿಲ್ಲ ಎಂಬ ಆರೋಪ ಸಾರ್ವಜನಿಕರಿಂದ ಕೇಳಿ ಬರುತ್ತಿದೆ.

ಮೇಲಿನ ಚಿತ್ರಗಳನ್ನು ಅವಲೋಕಿಸಿದಾಗ ಸಾರ್ವಜನಿಕರ ಆರೋಪ ಕೂಡ ನಿಜವಾದದ್ದು ಎನ್ನುವುದು ಸ್ಪಷ್ಟವಾಗುತ್ತದೆ.

ಕಾರ್ಪೊರೇಟರ್ ಪ್ರವೀಣ್ ಚಂದ್ರ ಆಳ್ವ ಅವರ ಕಂಕನಾಡಿ ಬಿ ವಾರ್ಡ್ ನಲ್ಲಿ ಮಾಜಿ ಶಾಸಕ ಜೆ.ಆರ್. ಲೋಬೊ ಅವರು ತನ್ನ ವೈಯಕ್ತಿಕ ದೇಣಿಗೆಯಿಂದ ಫುಡ್ ಕಿಟ್ ಪೂರೈಸುತ್ತಿದ್ದಾರೆ. ಇದು ಕಳೆದ ಕೆಲವು ದಿನಗಳಿಂದ ನಡೆಯುತ್ತಿದೆ. ಬಡವರಿಗೆ, ನಿರ್ಗತಿಕರಿಗೆ, ಕೂಲಿ ಕಾರ್ಮಿಕರಿಗೆ, ಆಟೋ ಡ್ರೈವರ್ ಗಳಿಂದ ಇದರಿಂದ ಬಹಳಷ್ಟು ಪ್ರಯೋಜನವಾಗಿದೆ. ಕೆಲವು ಕಡೆ ಕೊರೊನಾ ಸೋಂಕಿನಿಂದಲ್ಲ, ಹಸಿವಿನಿಂದ ಸಾಯುವ ಪರಿಸ್ಥಿತಿ ಏರ್ಪಟ್ಟಿತು. ಇಂತಹ ಸಂದರ್ಭದಲ್ಲಿ ಜೆ.ಆರ್. ಲೋಬೊ ಅವರ ಜನಸೇವೆ ಮೆಚ್ಚುವಂತದ್ದೇ ಎಂದು ಜನರು ಪಕ್ಷಬೇಧ ಮರೆತು ಸಂತೋಷ ವ್ಯಕ್ತಪಡಿಸುತ್ತಾರೆ. ಆದರೆ ‘ಎಲ್ಲ ಬಣ್ಣವನ್ನು ಮಸಿ ನುಂಗಿತು: ಎನ್ನುವ ಹಾಗೆ, ಸಾಮಾಜಿಕ ಅಂತರವಿಲ್ಲದೆ ಹಸಿದವರು ನೆರೆದ ಬಗ್ಗೆ ಕೆಲವರು ತಕರಾರು ವ್ಯಕ್ತಪಡಿಸಿದ್ದಾರೆ. ಪ್ರಸಕ್ತ ಸನ್ನಿವೇಶದಲ್ಲಿ ಈ ಆರೋಪಕ್ಕೆ ಬೆಲೆಯೂ ಇದೆ. ನಾವು ಸ್ವಲ್ಪ ನಿರ್ಲಕ್ಷ್ಯ ವಹಿಸಿದರೂ ದೊಡ್ಡ ಪರಿಣಾಮವನ್ನು ಎದುರಿಸಬೇಕಾಗುತ್ತದೆ.



ಹಾಗೆ ಕೆಪಿಟಿಯಲ್ಲಿ ಇತ್ತೀಚೆಗೆ ಯುವ ಕಾಂಗ್ರೆಸ್ ನಾಯಕ ಮೆರಿಲ್ ರೇಗೊ ನೇತೃತ್ವದಲ್ಲಿ ಭೋಜನ ವ್ಯವಸ್ಥೆ ಮಾಡಲಾಗಿತ್ತು. ಇದಲ್ಲದೆ ಯುವ ಕಾಂಗ್ರೆಸ್ ನಿಂದ ಲಸಿಕೆ ಆನ್ ಲೈನ್ ಬುಕ್ಕಿಂಗ್ ಬಗ್ಗೆ ಜಾಗೃತಿ ಅಭಿಯಾನ ನಡೆಯುತ್ತಿದೆ. ಈ ಎಲ್ಲ ಸಂದರ್ಭಗಳಲ್ಲಿ ಸಾಮಾಜಿಕ ಅಂತರದ ಕೊರತೆ ಎದ್ದು ಕಾಣುತ್ತಿದೆ ಎಂಬ ಆರೋಪವಿದೆ.  ಕಾಂಗ್ರೆಸ್ ಇನ್ನಾದರು ತಮ್ಮ ಸ್ವಯಂಸೇವಕರನ್ನು ಬಳಸಿಕೊಂಡು ಸಾಮಾಜಿಕ ಅಂತರಕ್ಕೆ ಪ್ರಾಧಾನ್ಯತೆ ಕೊಡಬೇಕು.

ಇತ್ತೀಚಿನ ಸುದ್ದಿ

ಜಾಹೀರಾತು