10:32 AM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಮಾಜಿ ಶಾಸಕ, ಶೋಷಿತರ ಪರ ಗಟ್ಟಿಧ್ವನಿ ವಸಂತ ಬಂಗೇರ ಇನ್ನಿಲ್ಲ: ಪಾರ್ಥಿವ ಶರೀರ ನಾಳೆ ಬೆಳ್ತಂಗಡಿಗೆ

08/05/2024, 19:51

ಮಂಗಳೂರು(reporterkarnataka.com): ಬೆಳ್ತಂಗಡಿ ಮಾಜಿ ಶಾಸಕ, ಕಾಂಗ್ರೆಸ್ ಹಿರಿಯ ನಾಯಕ ಕೆ. ವಸಂತ ಬಂಗೇರ(79) ಅನಾರೋಗ್ಯದಿಂದ ಬುಧವಾರ ನಿಧನರಾದರು‌.
ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಬುಧವಾರ ಸಂಜೆ 4 ಗಂಟೆಗೆ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದರು.
1983ರ ವಿಧಾನ ಸಭೆ ಚುನಾವಣೆಯಲ್ಲಿ ಅವರು ಬಿಜೆಪಿ ಪಕ್ಷದಿಂದ ಸ್ಪರ್ಧಿಸಿ, ಮೊದಲ ಬಾರಿಗೆ ವಿಧಾನಸಭೆ ಪ್ರವೇಶಿಸಿದ್ದರು. 1985ರಲ್ಲಿ ವಿಧಾನಸಭೆಗೆ ನಡೆದ ಮಧ್ಯಂತರ ಚುನಾವಣೆಯಲ್ಲಿ ಅವರು ಮತ್ತೆ ಬಿಜೆಪಿಯಿಂದ ಆಯ್ಕೆಗೊಂಡಿದ್ದರು. ಹೀಗೆ ಒಟ್ಟು 5 ಬಾರಿ ಶಾಸಕರಾಗಿದ್ದರು. 2013ರಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಗೆದ್ದಿದ್ದರು. 2018ರ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಮತ್ತೆ ಸ್ಪರ್ಧಿ ಸಿದರೂ ಬಿಜೆಪಿ ಅಭ್ಯರ್ಥಿ ಎದುರು ಸೋಲು ಅನುಭವಿಸಿದರು.
ಹಿಂದುಳಿದ ವರ್ಗದ, ಬಡವರ, ಶೋಷಿತರ ಪರ ಅವರು ಗಟ್ಟಿ ಧ್ವನಿಯಾಗಿದ್ದರು. ಸೌಜನ್ಯ ಪರ ಹೋರಾಟದಲ್ಲಿಯೂ ಸಕ್ರೀಯರಾಗಿದ್ದರು. ನೇರ ನಡೆ ನುಡಿಯ ಅವರು ನಿಷ್ಠುರವಾದಿಯಾಗಿದ್ದರು.
ವಸಂತ ಬಂಗೇರ ಅವರ ಪಾರ್ಥಿವ ಶರೀರ ಗುರುವಾರ ಬೆಳಗ್ಗೆ ಬೆಳ್ತಂಗಡಿಗೆ ತರಲಾಗುವುದು. ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು