3:01 PM Sunday22 - March 2026
ಬ್ರೇಕಿಂಗ್ ನ್ಯೂಸ್
ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ

ಇತ್ತೀಚಿನ ಸುದ್ದಿ

ಮಾಜಿ ಸ್ಪೀಕರ್ ರಮೇಶ್ ಕುಮಾರ್ ರಸ್ತೆಯಲ್ಲೇ ಧರಣಿ: ಹಣ ಕೊಟ್ಟರೆ ಮಾತ್ರ ಪೊಲೀಸರು ವಾಹನ ಬಿಡುತ್ತಾರಂತೆ! !

04/06/2021, 07:41

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ನೆರೆಯ ರಾಜ್ಯದ ವಿದ್ಯಾಂವತರು ಬೆಂಗಳೂರಿನಲ್ಲಿ ಕೆಲಸದ ನಿಮಿತ್ತ ವಾಸಗಿದ್ದು, ಕೊರೊನಾ ಮಹಾಮಾರಿಯಿಂದ ತಮ್ಮ ಸ್ವಂತ ಗ್ರಾಮಕ್ಕೆ ಹಿಂತಿರುಗುತ್ತಿದ್ದಾರೆ. ಇಂತಹ ಸಮಯದಲ್ಲಿ ಪೊಲೀಸರು ಹಣ ಕೊಟ್ಟರೆ ಗಾಡಿ ಬಿಡುತ್ತೇವೆ ಇಲ್ಲವಾದರೆ ಇಲ್ಲವೆಂದು ಮನ ಬಂದಂತೆ ನಿಂದಿಸುತ್ತಾರೆ. ಮೊದಲೇ ಮಾನಸಿಕವಾಗಿ ಹಾಗೂ ದೈಹಿಕವಾಗಿ ಶ್ರಮದಿಂದ ಬಳುಲುತ್ತಿರುವ ಪ್ರಯಾಣಿಕರಿಗೆ ಪೊಲೀಸರಿಂದ ತಪ್ಪಿಸಿಕೊಳ್ಳುವುದೇ ದೊಡ್ಡ ಪರೀಕ್ಷೆಯಾಗಿ ಇತ್ತೀಚಿನ ದಿನಗಳಲ್ಲಿ ಸೃಷ್ಟಿಯಾಗಿರುವುದು ನನ್ನ ಗಮನಕ್ಕೆ ಬಂದಿದೆ ಎಂದು ಮಾಜಿ ಸ್ಪೀಕರ್, ಶಾಸಕ ಕೆ.ಆರ್.ರಮೇಶ್‌ ಕುಮಾರ್ ಹೇಳಿದರು.

ರಾಯಲ್ಪಾಡ್‌ನ ಹಕ್ಕಿಪಿಕ್ಕಿ ಚಕ್‌ಪೋಸ್ಟ್‌ನಲ್ಲಿ ಪೊಲೀಸ್ ಇಲಾಖೆಯ ವಿರುದ್ಧ ಏಕಾಂಗಿಯಾಗಿ ಧರಣಿಗೆ ಕುಳಿತು ಮಾತನಾಡಿದರು.

ನಮಗೆ ಎಂದು ಅರಿಯದ, ನಮಗೆ ತಿಳಿಯದ ರೋಗವೊಂದು ದೇಶವ್ಯಾಪಿಯಾಗಿ ಜನರನ್ನು ಪೀಡಿಸುತ್ತಿದೆ. ರೋಗವನ್ನ ತಡೆಗಟ್ಟುವ ಸಲುವಾಗಿ ರಾಜ್ಯ ಹಾಗೂ ನೆರಯ ರಾಜ್ಯ ಸರ್ಕಾರವು ಕೆಲ ಮಾರ್ಗೋಪಾಯಗಳನ್ನು ಅನುಸರಿಸುತ್ತಿದೆ. ಇದರ ಹಿನ್ನಲೆಯಲ್ಲಿ ವಾಹನಗಳಿಗೆ ಕೆಲ ನಿರ್ಬಂಧನೆಗಳನ್ನು ಎರಡು ಸರ್ಕಾರಗಳು ವಿಧಿಸಿದೆ. ಸದುದ್ದೇಶದಿಂದ ಮಾಡಿರುವ ಮಾರ್ಗೋಪಾಯ ಮಾನವೀಯತೆ ಇಲ್ಲದೆ. ಒಂದಿಬ್ಬರು ಅಧಿಕಾರಿಗಳು ಇದೇ ಅವಕಾಶವನ್ನು ಬಳಿಸಿಕೊಂಡು ಎರಡು ರಾಜ್ಯಗಳ ರೈತ ವರ್ಗ ಹಾಗೂ ಸಾಮಾನ್ಯ ಜನತೆ ಬಳಿ ಇಲಾಖೆಯು ಅಮಾನೀಯವಾಗಿ ತೊಂದರೆ ಕೊಡುತ್ತಿದೆ ಎಂದು ಇಲಾಖೆಯ ವಿರುದ್ಧ ಗುಡುಗಿದರು. ಭ್ರಷ್ಟಾಚಾರ, ಲಂಚವನ್ನು ಸ್ವೀಕರಿಸುವವರ ವಿರುದ್ದ ಅನೇಕ ಭಾರಿ ಹೋರಾಟಗಳನ್ನು ನಡೆಸಿದ್ದೇನೆ, ಅಮಾನತುಗೊಂಡ ಅಧಿಕಾರಿಗಳು ದಿನ ಕಳೆದಂತೆ ಪುನಃ ಇಲಾಖೆಗೆ ಸೇರಡೆಯಾಗುತ್ತಾರೆ. ಆದರೆ ಇಂತಹ ಅಧಿಕಾರಿಯನ್ನ ವಜಾ ಮಾಡಿ ಇಲಾಖೆಯ ಗೌರವ ಕಾಪಾಡಿಕೊಳ್ಳುವಂತೆ ಇಲಾಖಾಧಿಕಾರಿಗಳಿಗೆ ಸೂಚಿಸಿದರು. ಇಲಾಖೆಯಲ್ಲಿ ಇಂತಹ ಘಟನೆ ಪುನಾರಾವರ್ತನೆಯಾಗದಂತೆ ಇಲಾಖೆ ಎಚ್ಚರ ವಹಿಸಬೇಕು.ಜಿಲ್ಲೆಯ ಹಿರಿಯ ಅಧಿಕಾರಿಗಳು ಧರಣಿಯ ಸ್ಥಳಕ್ಕೆ ಬರುವ ತನಕ ಸ್ಥಳದಿಂದ ನಿರ್ಗಮಿಸುವುದಿಲ್ಲ ಎಂದಾಗ, ಜಿಲ್ಲೆಯ ಹಿರಿಯ ಅಧಿಕಾರಿಗಳು ಧರಣಿ ನಿರತ ಸ್ಥಳಕ್ಕೆ ಭೇಟಿ ನೀಡಿ ಶಾಸಕರರೊಂದಿಗೆ ಚರ್ಚೆ ಮಾಡಿದರು. ನಂತರ ಠಾಣಾಧಿಕಾರಿಯವರನ್ನ ಅಮಾನತು ಮಾಡಿದ ನಂತರ ಕೆ.ಆರ್‌.ರಮೇಶ್‌ಕುಮಾರ್‌ ಅವರು ಧರಣಿ ವಾಪಸ್ಸು ಪಡೆದರು. 

ಅಡಿಸಿನಲ್ ಎಸ್ಪಿ ಬಿ.ಎಂ.ನಾರಾಯಣಸ್ವಾಮಿ, ಡಿವೈಎಸ್‌ಪಿ ಗಿರಿ, ರಾಘವೇಂದ್ರಪ್ರಕಾಶ್, ರವಿಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸಂಜಯ್‌ರೆಡ್ಡಿ, ಟಿಎಪಿಸಿಎಂಎಸ್ ತಾಲೂಕು ಅಧ್ಯಕ್ಷ ಬಗ್ಗಲಘಟ್ಟ ಶ್ರೀನಿವಾಸ್‌ರೆಡ್ಡಿ, ಮುಖಂಡರಾದ ಕೆ.ಕೆ.ಮಂಜುನಾಥರೆಡ್ಡಿ, ರಾಯಲ್ಪಾಡು ಗ್ರಾ.ಪಂ.ಅಧ್ಯಕ್ಷೆ ಅರುಣ್‌ವೆಂಕಟ್, ಸದಸ್ಯರಾದ ಆರ್.ಗಂಗಾಧರ್, ಅಶೋಕ್ ರೆಡ್ಡಿ, ನಾಗೇಶ್ , ಮುದಿಮಡುಗು ಗ್ರಾಪಂ ಅಧ್ಯಕ್ಷ ಚಿಕ್ಕನಾರಾಯಣಪ್ಪ , ಕೂರಿಗೇಪಲ್ಲಿ ಗ್ರಾ.ಪಂ.ಅಧ್ಯಕ್ಷ ವಿಶ್ವನಾಥರೆಡ್ಡಿ ಇತರರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು