5:23 PM Monday21 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಮಾಜಿ‌ ಮುಖ್ಯಮಂತ್ರಿ ಸಿದ್ದರಾಮಯ್ಯ ದಲಿತ ವಿರೋಧಿ ಅಲ್ಲ; ದಲಿತರ ಪರ ಅತೀ ಹೆಚ್ಚು ಕೆಲಸ ಮಾಡಿದವರು: ಕೃಷ್ಣ ಡಿ.ಚಿಗರಿ

13/11/2021, 09:16

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ 
ಅಂತರಗಂಗೆ ರಾಯಚೂರು
info.reporterkarnataka@gmail.com

ದಲಿತ ಸಮುದಾಯಕ್ಕೆ ಸೇರಿದ್ದರೂ ದಲಿತರ ನ್ಯಾಯಬದ್ಧ ಅವಕಾಶಗಳನ್ನು ಕಿತ್ತುಕೊಳ್ಳುತ್ತಿರುವ ಬಗ್ಗೆ ತುಟಿಕ್ ಪಿಟಿಕ್ ಎನ್ನದ ಗೋವಿಂದ ಕಾರಜೋಳ, ರಮೇಶ್ ಜಿಗಜಿಣಗಿ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾತನ್ನು ತಿರುಚಿ ಅಪಪ್ರಚಾರಕ್ಕೆ ಮುಂದಾಗಿರುವುದು ಹಾಸ್ಯಾಸ್ಪದ ಸಂಗತಿ ಎಂದು ಮಸ್ಕಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೃಷ್ಣಾ ಡಿ.ಚಿಗರಿ‌ ಹೇಳಿದರು.

ಅಧಿಕಾರ ಸಿಕ್ಕಾಗ ದಲಿತರ ಪರವಾಗಿ ಅತಿ ಹೆಚ್ಚಿನ ಕೆಲಸ ಮಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಬ್ಬ ನಿಜವಾದ ಅಂಬೇಡ್ಕರ್ ವಾದಿ. ದಲಿತರಿಗೆ SCP/STP ಕಾಯ್ದೆ, ಜಾರಿಗೊಳಿಸಿ, ಗುತ್ತಿಗೆ ಮೀಸಲಾತಿ ಅವಕಾಶ ಕಲ್ಪಿಸಿ, ಬಡ್ತಿ ಮೀಸಲಾತಿ ಯೋಜನೆ ರೂಪಿಸಿ, ಕಲ್ಲು ಗಣಿಗಾರಿಕೆಯಲ್ಲಿ ಮೀಸಲಾತಿ, ಕೈಗಾರಿಕೆಯಲ್ಲಿ ಮೀಸಲಾತಿಯನ್ನು ಜಾರಿಗೊಳಿಸಿದ ಸಿದ್ದರಾಮಯ್ಯ ಅವರು SCP/STP ಕಾಯ್ದೆಯಡಿ 30 ಸಾವಿರ ಕೋಟಿ ರೂಪಾಯಿಗಳ ಅನುದಾನವನ್ನು ನಿಗದಿಗೊಳಿಸಿದರು ಎಂದರು.

ಬಹುಶಃ ಈಗ ದೊಡ್ಡದಾಗಿ ಅಪಪ್ರಚಾರ ಮಾಡುತ್ತಿರುವ ಬಿಜೆಪಿಯ ಯಾವ ನಾಯಕರೂ ಕೂಡಾ ಸಿದ್ದರಾಮಯ್ಯನವರ ರೀತಿ ತಮ್ಮ ರಾಜಕೀಯ ಇತಿಹಾಸದಲ್ಲಿ ದಲಿತರ ಪರವಾದ ಕಾರ್ಯಕ್ರಮ ರೂಪಿಸುವುದಿರಲಿ, ಅವರಂತೆ ಯೋಚಿಸಲೂ ಕೂಡಾ ಸಾಧ್ಯವಿಲ್ಲ.ಅಂಬೇಡ್ಕರ್ ಸಿದ್ದಾಂತವನ್ನು ತಮ್ಮಬದುಕಲ್ಲೇ ಅಳವಡಿಸಿಕೊಂಡಿರುವ ಸಿದ್ದರಾಮಯ್ಯ ಅವರು ಎಂದಿಗೂ ದಲಿತರ ವಿರುದ್ಧವಾಗಿ ಹಗುರವಾಗಿ ಹಿಂದೆಯೂ ಮಾತನಾಡಿಲ್ಲ, ಇಂದೂ ಮಾತಾಡಿಲ್ಲ ಮುಂದೆಯೂ ಮಾತನಾಡಲ್ಲ ಎಂದು ಅವರು ನುಡಿದರು.

ದಲಿತರ ಹಿತಾಸಕ್ತಿ ಕಾಪಾಡುವ ಜಾಗದಲ್ಲಿ ದಲಿತರ ಅವಕಾಶಗಳನ್ನು ತಪ್ಪಿಸುತ್ತಿರುವ ಬಿಜೆಪಿಯ ದಲಿತ ನಾಯಕರು ತಮ್ಮ ಸುಳ್ಳು ಪ್ರಚಾರಕ್ಕೆ ಮತ್ತು ದಲಿತ ವಿರೋಧಿ ನೀತಿಗಳಿಗಾಗಿ ರಾಜ್ಯದ ಜನತೆಯ ಮುಂದೆ ಬಹಿರಂಗವಾಗಿ ಕ್ಷಮೆಯಾಚಿಸಲಿ ಎಂದು ಮಸ್ಕಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೃಷ್ಣಾ ಡಿ.ಚಿಗರಿ‌ ಈ ಮೂಲಕ ಆಗ್ರಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು