4:45 AM Wednesday2 - July 2025
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ… Kodagu | ಕುಶಾಲನಗರದ ಕೂಡಿಗೆಯಲ್ಲಿ ಚಿನ್ನದಂಗಡಿ ಮಾಲೀಕನ ಮನೆಗೆ ಕನ್ನ: 14 ಲಕ್ಷ… ಕವಿಕಾದಲ್ಲಿ 14 ಕೋಟಿ ರೂ. ವೆಚ್ಚದಲ್ಲಿ ವಿದ್ಯುತ್ ಪರಿವರ್ತಕ ದುರಸ್ತಿ ಕೇಂದ್ರ: ಇಂಧನ… Kodagu Crime | ಸುಳ್ಳು ಕೊಲೆ ಕೇಸ್ ಮೂಲಕ ಅಮಾಯಕ ಜೈಲಿಗೆ: ಇನ್ಸ್​ಪೆಕ್ಟರ್,…

ಇತ್ತೀಚಿನ ಸುದ್ದಿ

ಮಾಜಿ‌ ಮುಖ್ಯಮಂತ್ರಿ ಸಿದ್ದರಾಮಯ್ಯ ದಲಿತ ವಿರೋಧಿ ಅಲ್ಲ; ದಲಿತರ ಪರ ಅತೀ ಹೆಚ್ಚು ಕೆಲಸ ಮಾಡಿದವರು: ಕೃಷ್ಣ ಡಿ.ಚಿಗರಿ

13/11/2021, 09:16

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ 
ಅಂತರಗಂಗೆ ರಾಯಚೂರು
info.reporterkarnataka@gmail.com

ದಲಿತ ಸಮುದಾಯಕ್ಕೆ ಸೇರಿದ್ದರೂ ದಲಿತರ ನ್ಯಾಯಬದ್ಧ ಅವಕಾಶಗಳನ್ನು ಕಿತ್ತುಕೊಳ್ಳುತ್ತಿರುವ ಬಗ್ಗೆ ತುಟಿಕ್ ಪಿಟಿಕ್ ಎನ್ನದ ಗೋವಿಂದ ಕಾರಜೋಳ, ರಮೇಶ್ ಜಿಗಜಿಣಗಿ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾತನ್ನು ತಿರುಚಿ ಅಪಪ್ರಚಾರಕ್ಕೆ ಮುಂದಾಗಿರುವುದು ಹಾಸ್ಯಾಸ್ಪದ ಸಂಗತಿ ಎಂದು ಮಸ್ಕಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೃಷ್ಣಾ ಡಿ.ಚಿಗರಿ‌ ಹೇಳಿದರು.

ಅಧಿಕಾರ ಸಿಕ್ಕಾಗ ದಲಿತರ ಪರವಾಗಿ ಅತಿ ಹೆಚ್ಚಿನ ಕೆಲಸ ಮಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಬ್ಬ ನಿಜವಾದ ಅಂಬೇಡ್ಕರ್ ವಾದಿ. ದಲಿತರಿಗೆ SCP/STP ಕಾಯ್ದೆ, ಜಾರಿಗೊಳಿಸಿ, ಗುತ್ತಿಗೆ ಮೀಸಲಾತಿ ಅವಕಾಶ ಕಲ್ಪಿಸಿ, ಬಡ್ತಿ ಮೀಸಲಾತಿ ಯೋಜನೆ ರೂಪಿಸಿ, ಕಲ್ಲು ಗಣಿಗಾರಿಕೆಯಲ್ಲಿ ಮೀಸಲಾತಿ, ಕೈಗಾರಿಕೆಯಲ್ಲಿ ಮೀಸಲಾತಿಯನ್ನು ಜಾರಿಗೊಳಿಸಿದ ಸಿದ್ದರಾಮಯ್ಯ ಅವರು SCP/STP ಕಾಯ್ದೆಯಡಿ 30 ಸಾವಿರ ಕೋಟಿ ರೂಪಾಯಿಗಳ ಅನುದಾನವನ್ನು ನಿಗದಿಗೊಳಿಸಿದರು ಎಂದರು.

ಬಹುಶಃ ಈಗ ದೊಡ್ಡದಾಗಿ ಅಪಪ್ರಚಾರ ಮಾಡುತ್ತಿರುವ ಬಿಜೆಪಿಯ ಯಾವ ನಾಯಕರೂ ಕೂಡಾ ಸಿದ್ದರಾಮಯ್ಯನವರ ರೀತಿ ತಮ್ಮ ರಾಜಕೀಯ ಇತಿಹಾಸದಲ್ಲಿ ದಲಿತರ ಪರವಾದ ಕಾರ್ಯಕ್ರಮ ರೂಪಿಸುವುದಿರಲಿ, ಅವರಂತೆ ಯೋಚಿಸಲೂ ಕೂಡಾ ಸಾಧ್ಯವಿಲ್ಲ.ಅಂಬೇಡ್ಕರ್ ಸಿದ್ದಾಂತವನ್ನು ತಮ್ಮಬದುಕಲ್ಲೇ ಅಳವಡಿಸಿಕೊಂಡಿರುವ ಸಿದ್ದರಾಮಯ್ಯ ಅವರು ಎಂದಿಗೂ ದಲಿತರ ವಿರುದ್ಧವಾಗಿ ಹಗುರವಾಗಿ ಹಿಂದೆಯೂ ಮಾತನಾಡಿಲ್ಲ, ಇಂದೂ ಮಾತಾಡಿಲ್ಲ ಮುಂದೆಯೂ ಮಾತನಾಡಲ್ಲ ಎಂದು ಅವರು ನುಡಿದರು.

ದಲಿತರ ಹಿತಾಸಕ್ತಿ ಕಾಪಾಡುವ ಜಾಗದಲ್ಲಿ ದಲಿತರ ಅವಕಾಶಗಳನ್ನು ತಪ್ಪಿಸುತ್ತಿರುವ ಬಿಜೆಪಿಯ ದಲಿತ ನಾಯಕರು ತಮ್ಮ ಸುಳ್ಳು ಪ್ರಚಾರಕ್ಕೆ ಮತ್ತು ದಲಿತ ವಿರೋಧಿ ನೀತಿಗಳಿಗಾಗಿ ರಾಜ್ಯದ ಜನತೆಯ ಮುಂದೆ ಬಹಿರಂಗವಾಗಿ ಕ್ಷಮೆಯಾಚಿಸಲಿ ಎಂದು ಮಸ್ಕಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೃಷ್ಣಾ ಡಿ.ಚಿಗರಿ‌ ಈ ಮೂಲಕ ಆಗ್ರಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು