2:03 PM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಮಾಜಿ‌ ಮುಖ್ಯಮಂತ್ರಿ ಸಿದ್ದರಾಮಯ್ಯ ದಲಿತ ವಿರೋಧಿ ಅಲ್ಲ; ದಲಿತರ ಪರ ಅತೀ ಹೆಚ್ಚು ಕೆಲಸ ಮಾಡಿದವರು: ಕೃಷ್ಣ ಡಿ.ಚಿಗರಿ

13/11/2021, 09:16

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ 
ಅಂತರಗಂಗೆ ರಾಯಚೂರು
info.reporterkarnataka@gmail.com

ದಲಿತ ಸಮುದಾಯಕ್ಕೆ ಸೇರಿದ್ದರೂ ದಲಿತರ ನ್ಯಾಯಬದ್ಧ ಅವಕಾಶಗಳನ್ನು ಕಿತ್ತುಕೊಳ್ಳುತ್ತಿರುವ ಬಗ್ಗೆ ತುಟಿಕ್ ಪಿಟಿಕ್ ಎನ್ನದ ಗೋವಿಂದ ಕಾರಜೋಳ, ರಮೇಶ್ ಜಿಗಜಿಣಗಿ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾತನ್ನು ತಿರುಚಿ ಅಪಪ್ರಚಾರಕ್ಕೆ ಮುಂದಾಗಿರುವುದು ಹಾಸ್ಯಾಸ್ಪದ ಸಂಗತಿ ಎಂದು ಮಸ್ಕಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೃಷ್ಣಾ ಡಿ.ಚಿಗರಿ‌ ಹೇಳಿದರು.

ಅಧಿಕಾರ ಸಿಕ್ಕಾಗ ದಲಿತರ ಪರವಾಗಿ ಅತಿ ಹೆಚ್ಚಿನ ಕೆಲಸ ಮಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಬ್ಬ ನಿಜವಾದ ಅಂಬೇಡ್ಕರ್ ವಾದಿ. ದಲಿತರಿಗೆ SCP/STP ಕಾಯ್ದೆ, ಜಾರಿಗೊಳಿಸಿ, ಗುತ್ತಿಗೆ ಮೀಸಲಾತಿ ಅವಕಾಶ ಕಲ್ಪಿಸಿ, ಬಡ್ತಿ ಮೀಸಲಾತಿ ಯೋಜನೆ ರೂಪಿಸಿ, ಕಲ್ಲು ಗಣಿಗಾರಿಕೆಯಲ್ಲಿ ಮೀಸಲಾತಿ, ಕೈಗಾರಿಕೆಯಲ್ಲಿ ಮೀಸಲಾತಿಯನ್ನು ಜಾರಿಗೊಳಿಸಿದ ಸಿದ್ದರಾಮಯ್ಯ ಅವರು SCP/STP ಕಾಯ್ದೆಯಡಿ 30 ಸಾವಿರ ಕೋಟಿ ರೂಪಾಯಿಗಳ ಅನುದಾನವನ್ನು ನಿಗದಿಗೊಳಿಸಿದರು ಎಂದರು.

ಬಹುಶಃ ಈಗ ದೊಡ್ಡದಾಗಿ ಅಪಪ್ರಚಾರ ಮಾಡುತ್ತಿರುವ ಬಿಜೆಪಿಯ ಯಾವ ನಾಯಕರೂ ಕೂಡಾ ಸಿದ್ದರಾಮಯ್ಯನವರ ರೀತಿ ತಮ್ಮ ರಾಜಕೀಯ ಇತಿಹಾಸದಲ್ಲಿ ದಲಿತರ ಪರವಾದ ಕಾರ್ಯಕ್ರಮ ರೂಪಿಸುವುದಿರಲಿ, ಅವರಂತೆ ಯೋಚಿಸಲೂ ಕೂಡಾ ಸಾಧ್ಯವಿಲ್ಲ.ಅಂಬೇಡ್ಕರ್ ಸಿದ್ದಾಂತವನ್ನು ತಮ್ಮಬದುಕಲ್ಲೇ ಅಳವಡಿಸಿಕೊಂಡಿರುವ ಸಿದ್ದರಾಮಯ್ಯ ಅವರು ಎಂದಿಗೂ ದಲಿತರ ವಿರುದ್ಧವಾಗಿ ಹಗುರವಾಗಿ ಹಿಂದೆಯೂ ಮಾತನಾಡಿಲ್ಲ, ಇಂದೂ ಮಾತಾಡಿಲ್ಲ ಮುಂದೆಯೂ ಮಾತನಾಡಲ್ಲ ಎಂದು ಅವರು ನುಡಿದರು.

ದಲಿತರ ಹಿತಾಸಕ್ತಿ ಕಾಪಾಡುವ ಜಾಗದಲ್ಲಿ ದಲಿತರ ಅವಕಾಶಗಳನ್ನು ತಪ್ಪಿಸುತ್ತಿರುವ ಬಿಜೆಪಿಯ ದಲಿತ ನಾಯಕರು ತಮ್ಮ ಸುಳ್ಳು ಪ್ರಚಾರಕ್ಕೆ ಮತ್ತು ದಲಿತ ವಿರೋಧಿ ನೀತಿಗಳಿಗಾಗಿ ರಾಜ್ಯದ ಜನತೆಯ ಮುಂದೆ ಬಹಿರಂಗವಾಗಿ ಕ್ಷಮೆಯಾಚಿಸಲಿ ಎಂದು ಮಸ್ಕಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೃಷ್ಣಾ ಡಿ.ಚಿಗರಿ‌ ಈ ಮೂಲಕ ಆಗ್ರಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು