4:41 AM Thursday30 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಮಾಜಿ‌ ಮುಖ್ಯಮಂತ್ರಿ ಸಿದ್ದರಾಮಯ್ಯ ದಲಿತ ವಿರೋಧಿ ಅಲ್ಲ; ದಲಿತರ ಪರ ಅತೀ ಹೆಚ್ಚು ಕೆಲಸ ಮಾಡಿದವರು: ಕೃಷ್ಣ ಡಿ.ಚಿಗರಿ

13/11/2021, 09:16

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ 
ಅಂತರಗಂಗೆ ರಾಯಚೂರು
info.reporterkarnataka@gmail.com

ದಲಿತ ಸಮುದಾಯಕ್ಕೆ ಸೇರಿದ್ದರೂ ದಲಿತರ ನ್ಯಾಯಬದ್ಧ ಅವಕಾಶಗಳನ್ನು ಕಿತ್ತುಕೊಳ್ಳುತ್ತಿರುವ ಬಗ್ಗೆ ತುಟಿಕ್ ಪಿಟಿಕ್ ಎನ್ನದ ಗೋವಿಂದ ಕಾರಜೋಳ, ರಮೇಶ್ ಜಿಗಜಿಣಗಿ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾತನ್ನು ತಿರುಚಿ ಅಪಪ್ರಚಾರಕ್ಕೆ ಮುಂದಾಗಿರುವುದು ಹಾಸ್ಯಾಸ್ಪದ ಸಂಗತಿ ಎಂದು ಮಸ್ಕಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೃಷ್ಣಾ ಡಿ.ಚಿಗರಿ‌ ಹೇಳಿದರು.

ಅಧಿಕಾರ ಸಿಕ್ಕಾಗ ದಲಿತರ ಪರವಾಗಿ ಅತಿ ಹೆಚ್ಚಿನ ಕೆಲಸ ಮಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಬ್ಬ ನಿಜವಾದ ಅಂಬೇಡ್ಕರ್ ವಾದಿ. ದಲಿತರಿಗೆ SCP/STP ಕಾಯ್ದೆ, ಜಾರಿಗೊಳಿಸಿ, ಗುತ್ತಿಗೆ ಮೀಸಲಾತಿ ಅವಕಾಶ ಕಲ್ಪಿಸಿ, ಬಡ್ತಿ ಮೀಸಲಾತಿ ಯೋಜನೆ ರೂಪಿಸಿ, ಕಲ್ಲು ಗಣಿಗಾರಿಕೆಯಲ್ಲಿ ಮೀಸಲಾತಿ, ಕೈಗಾರಿಕೆಯಲ್ಲಿ ಮೀಸಲಾತಿಯನ್ನು ಜಾರಿಗೊಳಿಸಿದ ಸಿದ್ದರಾಮಯ್ಯ ಅವರು SCP/STP ಕಾಯ್ದೆಯಡಿ 30 ಸಾವಿರ ಕೋಟಿ ರೂಪಾಯಿಗಳ ಅನುದಾನವನ್ನು ನಿಗದಿಗೊಳಿಸಿದರು ಎಂದರು.

ಬಹುಶಃ ಈಗ ದೊಡ್ಡದಾಗಿ ಅಪಪ್ರಚಾರ ಮಾಡುತ್ತಿರುವ ಬಿಜೆಪಿಯ ಯಾವ ನಾಯಕರೂ ಕೂಡಾ ಸಿದ್ದರಾಮಯ್ಯನವರ ರೀತಿ ತಮ್ಮ ರಾಜಕೀಯ ಇತಿಹಾಸದಲ್ಲಿ ದಲಿತರ ಪರವಾದ ಕಾರ್ಯಕ್ರಮ ರೂಪಿಸುವುದಿರಲಿ, ಅವರಂತೆ ಯೋಚಿಸಲೂ ಕೂಡಾ ಸಾಧ್ಯವಿಲ್ಲ.ಅಂಬೇಡ್ಕರ್ ಸಿದ್ದಾಂತವನ್ನು ತಮ್ಮಬದುಕಲ್ಲೇ ಅಳವಡಿಸಿಕೊಂಡಿರುವ ಸಿದ್ದರಾಮಯ್ಯ ಅವರು ಎಂದಿಗೂ ದಲಿತರ ವಿರುದ್ಧವಾಗಿ ಹಗುರವಾಗಿ ಹಿಂದೆಯೂ ಮಾತನಾಡಿಲ್ಲ, ಇಂದೂ ಮಾತಾಡಿಲ್ಲ ಮುಂದೆಯೂ ಮಾತನಾಡಲ್ಲ ಎಂದು ಅವರು ನುಡಿದರು.

ದಲಿತರ ಹಿತಾಸಕ್ತಿ ಕಾಪಾಡುವ ಜಾಗದಲ್ಲಿ ದಲಿತರ ಅವಕಾಶಗಳನ್ನು ತಪ್ಪಿಸುತ್ತಿರುವ ಬಿಜೆಪಿಯ ದಲಿತ ನಾಯಕರು ತಮ್ಮ ಸುಳ್ಳು ಪ್ರಚಾರಕ್ಕೆ ಮತ್ತು ದಲಿತ ವಿರೋಧಿ ನೀತಿಗಳಿಗಾಗಿ ರಾಜ್ಯದ ಜನತೆಯ ಮುಂದೆ ಬಹಿರಂಗವಾಗಿ ಕ್ಷಮೆಯಾಚಿಸಲಿ ಎಂದು ಮಸ್ಕಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೃಷ್ಣಾ ಡಿ.ಚಿಗರಿ‌ ಈ ಮೂಲಕ ಆಗ್ರಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು