9:53 PM Friday11 - April 2025
ಬ್ರೇಕಿಂಗ್ ನ್ಯೂಸ್
Karnataka BJP | ದಲಿತರ ತುಳಿದವರೇ ಕಾಂಗ್ರೆಸಿಗರು: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಜನ ಬೇಸತ್ತಿರುವುದಕ್ಕೆ ಜನಾಕ್ರೋಶ ಯಾತ್ರೆಗೆ ಸಿಗುತ್ತಿರುವ ಬೆಂಬಲವೇ ಸಾಕ್ಷಿ : ಪ್ರತಿಪಕ್ಷದ ನಾಯಕ… ಅತ್ಯಾಧುನಿಕ ಮಾಲಿನ್ಯ ನಿಯಂತ್ರಣ ತಂತ್ರಜ್ಞಾನದ ಬಾಲ್ಡೋಟಾ ಇಂಟಿಗ್ರೇಟೆಡ್ ಸ್ಟೀಲ್ ಪ್ರಾಜೆಕ್ಟ್ ಎಂಬೆಸ್ಸಿ ಗಾಲ್ಫ್ ಲಿಂಕ್ ನ ಸಿಎಸ್ಆರ್ ನಿಧಿಯಿಂದ ಮರಿಯ ನಿಕೇತನ ಶಿಕ್ಷಣ ಸಂಸ್ಥೆಗೆ… Home Minister | ಡಿಸಿಆರ್ ಇ ಪೊಲೀಸ್ ಠಾಣೆಗಳಿಗೆ ನೂತನ ವಾಹನ ಹಸ್ತಾಂತರ:… ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ವಿರುದ್ಧ ಧ್ವನಿ ಎತ್ತಲಾಗದ ಪ್ರತಿಪಕ್ಷ: ಬಿಜೆಪಿ ವಿರುದ್ದ… UGCET- 25 | 3.30 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಅರ್ಹತೆ: ಕ್ಯೂಆರ್ ಕೋಡ್,… Bangalore | ರಾಜ್ಯದ ಕಟ್ಟ ಕಡೆಯ ಮನುಷ್ಯನಿಗೂ ನ್ಯಾಯ, ನೆಮ್ಮದಿ ಕೊಡಿಸಲು ಜನ… ಕುತ್ಲುರು ಸರಕಾರಿ ಶಾಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ 2 ಕಂಪ್ಯೂಟರ್ ಹಾಗೂ ಪ್ರೊಜೆಕ್ಟರ್… ವಿರಳಾತಿ ವಿರಳ ಕಾಯಿಲೆಗೆ ತುತ್ತಾದ ಚಿಣ್ಣರ ಚಿಕಿತ್ಸೆಗೆ ಕಾರ್ಪೊರೇಟ್‌ ಕಂಪನಿಗಳು ನೆರವು ನೀಡಲಿ:…

ಇತ್ತೀಚಿನ ಸುದ್ದಿ

ಮಾಳ: ಮಂಜುಶ್ರೀ ಭಜನಾ ಮಂಡಳಿಯಿಂದ ಯೋಗ ತರಗತಿಗೆ ಚಾಲನೆ

07/09/2021, 20:54

ಕಾರ್ಕಳ(reporterkarnataka.com): ಮಹಿಳೆ ಸ್ವಾವಲಂಬಿಯಾಗಿ ಬದುಕಬೇಕೆಂಬ ಉದ್ದೇಶದಿಂದ ಯೋಗವನ್ನು ಕರಗತಮಾಡಿಕೊಂಡು ಹಲವಾರು ಜನರಿಗೆ ಮಾರ್ಗದರ್ಶನ ಆಗಬೇಕೆಂಬ ಉದ್ದೇಶದಿಂದ ಹಸಿರು ತಪ್ಪಲಿನ ಮಾಳದಲ್ಲಿ ಯೋಗ ತರಗತಿಗೆ ಚಾಲನೆ ನೀಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಮೀಳಾ ಡಿ. ಶೆಟ್ಟಿ ವಹಿಸಿದ್ದರು.

ಕಾರ್ಯಕ್ರಮದ ಉದ್ಘಾಟನೆಯನ್ನು ರಮಿತಾ ಶೈಲೇಂದ್ರ ದೀಪ ಬೆಳಗಿಸಿ ನೆರವೇರಿಸಿದರು.

ಮಹಿಳೆ ನಾಲ್ಕು ಗೋಡೆಯೊಳಗೆ ಬಂಧಿಯಾಗದೆ ತನಗೆ ತಿಳಿದಿರುವ ವಿದ್ಯೆ ನಾಲ್ಕು ಜನರಿಗೆ ತಿಳಿಸುವ ಮಾತೆ ಯಾಗಬೇಕು. ನಿರಂತರ ಯೋಗದಿಂದ ಆರೋಗ್ಯವಂತರಾಗಿ ಇರಬಹುದು ಎಂದು ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು. 

ಇನ್ಫೋಸಿಸ್ ನಲ್ಲಿ ಕಾರ್ಯವನ್ನು ನಿರ್ವಹಿಸಿಕೊಂಡು ಹಲವಾರು ಯೋಗ ಅರ್ಜಿಗಳಿಗೆ ಯೋಗವನ್ನು ಕಲಿಸುವ  ಕೃಷ್ಣದಾಸ್ ಅವರು ಯೋಗದಿಂದ ಶತಾಯುಷಿ ಆಗಬಹುದು ಎಂದು ಯೋಗವನ್ನು ಹೇಳಿ ಕೊಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. 

ವೇದಿಕೆಯಲ್ಲಿ ನಲ್ಲೂರು ಪಂಚಾಯತ್ ಮಾಜಿ ಅಧ್ಯಕ್ಷೆ ಗಾಯತ್ರಿ ಪ್ರಭು, ಯೋಗ ಶಿಕ್ಷಕಿ ಜಯಂತಿ ಉಪಸ್ಥಿತರಿದ್ದರು. 

ಶೇಖರ್ ಶೆಟ್ಟಿ ಸ್ವಾಗತಿಸಿದರು. ಅವಿನಾಶ್ ಕುಲಾಲ್ ಕಾರ್ಯಕ್ರಮ ನೆರವೇರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು