6:57 PM Tuesday27 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

ಮಾಳ: ಮಂಜುಶ್ರೀ ಭಜನಾ ಮಂಡಳಿಯಿಂದ ಯೋಗ ತರಗತಿಗೆ ಚಾಲನೆ

07/09/2021, 20:54

ಕಾರ್ಕಳ(reporterkarnataka.com): ಮಹಿಳೆ ಸ್ವಾವಲಂಬಿಯಾಗಿ ಬದುಕಬೇಕೆಂಬ ಉದ್ದೇಶದಿಂದ ಯೋಗವನ್ನು ಕರಗತಮಾಡಿಕೊಂಡು ಹಲವಾರು ಜನರಿಗೆ ಮಾರ್ಗದರ್ಶನ ಆಗಬೇಕೆಂಬ ಉದ್ದೇಶದಿಂದ ಹಸಿರು ತಪ್ಪಲಿನ ಮಾಳದಲ್ಲಿ ಯೋಗ ತರಗತಿಗೆ ಚಾಲನೆ ನೀಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಮೀಳಾ ಡಿ. ಶೆಟ್ಟಿ ವಹಿಸಿದ್ದರು.

ಕಾರ್ಯಕ್ರಮದ ಉದ್ಘಾಟನೆಯನ್ನು ರಮಿತಾ ಶೈಲೇಂದ್ರ ದೀಪ ಬೆಳಗಿಸಿ ನೆರವೇರಿಸಿದರು.

ಮಹಿಳೆ ನಾಲ್ಕು ಗೋಡೆಯೊಳಗೆ ಬಂಧಿಯಾಗದೆ ತನಗೆ ತಿಳಿದಿರುವ ವಿದ್ಯೆ ನಾಲ್ಕು ಜನರಿಗೆ ತಿಳಿಸುವ ಮಾತೆ ಯಾಗಬೇಕು. ನಿರಂತರ ಯೋಗದಿಂದ ಆರೋಗ್ಯವಂತರಾಗಿ ಇರಬಹುದು ಎಂದು ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು. 

ಇನ್ಫೋಸಿಸ್ ನಲ್ಲಿ ಕಾರ್ಯವನ್ನು ನಿರ್ವಹಿಸಿಕೊಂಡು ಹಲವಾರು ಯೋಗ ಅರ್ಜಿಗಳಿಗೆ ಯೋಗವನ್ನು ಕಲಿಸುವ  ಕೃಷ್ಣದಾಸ್ ಅವರು ಯೋಗದಿಂದ ಶತಾಯುಷಿ ಆಗಬಹುದು ಎಂದು ಯೋಗವನ್ನು ಹೇಳಿ ಕೊಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. 

ವೇದಿಕೆಯಲ್ಲಿ ನಲ್ಲೂರು ಪಂಚಾಯತ್ ಮಾಜಿ ಅಧ್ಯಕ್ಷೆ ಗಾಯತ್ರಿ ಪ್ರಭು, ಯೋಗ ಶಿಕ್ಷಕಿ ಜಯಂತಿ ಉಪಸ್ಥಿತರಿದ್ದರು. 

ಶೇಖರ್ ಶೆಟ್ಟಿ ಸ್ವಾಗತಿಸಿದರು. ಅವಿನಾಶ್ ಕುಲಾಲ್ ಕಾರ್ಯಕ್ರಮ ನೆರವೇರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು