2:02 PM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಮಾಳ: ಮಂಜುಶ್ರೀ ಭಜನಾ ಮಂಡಳಿಯಿಂದ ಯೋಗ ತರಗತಿಗೆ ಚಾಲನೆ

07/09/2021, 20:54

ಕಾರ್ಕಳ(reporterkarnataka.com): ಮಹಿಳೆ ಸ್ವಾವಲಂಬಿಯಾಗಿ ಬದುಕಬೇಕೆಂಬ ಉದ್ದೇಶದಿಂದ ಯೋಗವನ್ನು ಕರಗತಮಾಡಿಕೊಂಡು ಹಲವಾರು ಜನರಿಗೆ ಮಾರ್ಗದರ್ಶನ ಆಗಬೇಕೆಂಬ ಉದ್ದೇಶದಿಂದ ಹಸಿರು ತಪ್ಪಲಿನ ಮಾಳದಲ್ಲಿ ಯೋಗ ತರಗತಿಗೆ ಚಾಲನೆ ನೀಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಮೀಳಾ ಡಿ. ಶೆಟ್ಟಿ ವಹಿಸಿದ್ದರು.

ಕಾರ್ಯಕ್ರಮದ ಉದ್ಘಾಟನೆಯನ್ನು ರಮಿತಾ ಶೈಲೇಂದ್ರ ದೀಪ ಬೆಳಗಿಸಿ ನೆರವೇರಿಸಿದರು.

ಮಹಿಳೆ ನಾಲ್ಕು ಗೋಡೆಯೊಳಗೆ ಬಂಧಿಯಾಗದೆ ತನಗೆ ತಿಳಿದಿರುವ ವಿದ್ಯೆ ನಾಲ್ಕು ಜನರಿಗೆ ತಿಳಿಸುವ ಮಾತೆ ಯಾಗಬೇಕು. ನಿರಂತರ ಯೋಗದಿಂದ ಆರೋಗ್ಯವಂತರಾಗಿ ಇರಬಹುದು ಎಂದು ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು. 

ಇನ್ಫೋಸಿಸ್ ನಲ್ಲಿ ಕಾರ್ಯವನ್ನು ನಿರ್ವಹಿಸಿಕೊಂಡು ಹಲವಾರು ಯೋಗ ಅರ್ಜಿಗಳಿಗೆ ಯೋಗವನ್ನು ಕಲಿಸುವ  ಕೃಷ್ಣದಾಸ್ ಅವರು ಯೋಗದಿಂದ ಶತಾಯುಷಿ ಆಗಬಹುದು ಎಂದು ಯೋಗವನ್ನು ಹೇಳಿ ಕೊಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. 

ವೇದಿಕೆಯಲ್ಲಿ ನಲ್ಲೂರು ಪಂಚಾಯತ್ ಮಾಜಿ ಅಧ್ಯಕ್ಷೆ ಗಾಯತ್ರಿ ಪ್ರಭು, ಯೋಗ ಶಿಕ್ಷಕಿ ಜಯಂತಿ ಉಪಸ್ಥಿತರಿದ್ದರು. 

ಶೇಖರ್ ಶೆಟ್ಟಿ ಸ್ವಾಗತಿಸಿದರು. ಅವಿನಾಶ್ ಕುಲಾಲ್ ಕಾರ್ಯಕ್ರಮ ನೆರವೇರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು