4:40 AM Thursday30 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಮಾಳ: ಮಂಜುಶ್ರೀ ಭಜನಾ ಮಂಡಳಿಯಿಂದ ಯೋಗ ತರಗತಿಗೆ ಚಾಲನೆ

07/09/2021, 20:54

ಕಾರ್ಕಳ(reporterkarnataka.com): ಮಹಿಳೆ ಸ್ವಾವಲಂಬಿಯಾಗಿ ಬದುಕಬೇಕೆಂಬ ಉದ್ದೇಶದಿಂದ ಯೋಗವನ್ನು ಕರಗತಮಾಡಿಕೊಂಡು ಹಲವಾರು ಜನರಿಗೆ ಮಾರ್ಗದರ್ಶನ ಆಗಬೇಕೆಂಬ ಉದ್ದೇಶದಿಂದ ಹಸಿರು ತಪ್ಪಲಿನ ಮಾಳದಲ್ಲಿ ಯೋಗ ತರಗತಿಗೆ ಚಾಲನೆ ನೀಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಮೀಳಾ ಡಿ. ಶೆಟ್ಟಿ ವಹಿಸಿದ್ದರು.

ಕಾರ್ಯಕ್ರಮದ ಉದ್ಘಾಟನೆಯನ್ನು ರಮಿತಾ ಶೈಲೇಂದ್ರ ದೀಪ ಬೆಳಗಿಸಿ ನೆರವೇರಿಸಿದರು.

ಮಹಿಳೆ ನಾಲ್ಕು ಗೋಡೆಯೊಳಗೆ ಬಂಧಿಯಾಗದೆ ತನಗೆ ತಿಳಿದಿರುವ ವಿದ್ಯೆ ನಾಲ್ಕು ಜನರಿಗೆ ತಿಳಿಸುವ ಮಾತೆ ಯಾಗಬೇಕು. ನಿರಂತರ ಯೋಗದಿಂದ ಆರೋಗ್ಯವಂತರಾಗಿ ಇರಬಹುದು ಎಂದು ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು. 

ಇನ್ಫೋಸಿಸ್ ನಲ್ಲಿ ಕಾರ್ಯವನ್ನು ನಿರ್ವಹಿಸಿಕೊಂಡು ಹಲವಾರು ಯೋಗ ಅರ್ಜಿಗಳಿಗೆ ಯೋಗವನ್ನು ಕಲಿಸುವ  ಕೃಷ್ಣದಾಸ್ ಅವರು ಯೋಗದಿಂದ ಶತಾಯುಷಿ ಆಗಬಹುದು ಎಂದು ಯೋಗವನ್ನು ಹೇಳಿ ಕೊಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. 

ವೇದಿಕೆಯಲ್ಲಿ ನಲ್ಲೂರು ಪಂಚಾಯತ್ ಮಾಜಿ ಅಧ್ಯಕ್ಷೆ ಗಾಯತ್ರಿ ಪ್ರಭು, ಯೋಗ ಶಿಕ್ಷಕಿ ಜಯಂತಿ ಉಪಸ್ಥಿತರಿದ್ದರು. 

ಶೇಖರ್ ಶೆಟ್ಟಿ ಸ್ವಾಗತಿಸಿದರು. ಅವಿನಾಶ್ ಕುಲಾಲ್ ಕಾರ್ಯಕ್ರಮ ನೆರವೇರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು