7:10 PM Wednesday24 - June 2026
ಬ್ರೇಕಿಂಗ್ ನ್ಯೂಸ್
ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ…

ಇತ್ತೀಚಿನ ಸುದ್ದಿ

ಮಾಳಿ-  ಮಾಲಗಾರ ಸಮಾಜದ ಅಭಿವೃದ್ಧಿಗೆ ಅನುದಾನ ಘೋಷಣೆ: ಸಿಎಂಗೆ ಮುರಿಗೆಪ್ಪ ಮಾಲಗಾರ ಅಭಿನಂದನೆ

09/03/2022, 09:11

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಮಾಳಿ-  ಮಾಲಗಾರ ಸಮಾಜ ಸೇರಿ 9 ಹಿಂದುಳಿದ ಸಮುದಾಯದ ಅಭಿವೃದ್ಧಿಗೆ 400 ಕೋಟಿ ಅನುದಾನವನ್ನು ಘೋಷಣೆ ಮಾಡಿದ ಬಡವರ ಬಂದು   ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಹಾಗೂ ಮಾಲಗಾರ ಸಮಾಜದ ಬೇಡಿಕೆ ಈಡೇರಿಸಲಿಕ್ಕೆ ಮೊದಲು ಸಹಕರಿಸಿದ   ಕೆ ಎಮ್ ಅಧ್ಯಕ್ಷ ಹಾಗೂ ಅರಬಾಂವಿ ಶಾಸಕರಾದ ಬಾಲಚಂದ್ರ ಜಾರಕಿಹೊಳಿ ಅವರಿಗೆ ಮಾಳಿ / ಮಾಲಗಾರ ಸಮಾಜ ಹಾಗೂ ಹಳ್ಳೂರ ಗ್ರಾಮದ  ಯುವ ಮುಖಂಡ ಸಮಾಜ ಸೇವಕ ಮುರಿಗೆಪ್ಪ ಮಾಲಗಾರ ಅವರು ಅಭಿನಂದನೆಗಳು ಸಲ್ಲಿಸಿದ್ದಾರೆ. 

ಸ್ವಾತಂತ್ರ್ಯದ ಅಮೃತ ಮಹೋತ್ಸವ ವರ್ಷಾಚರಣೆ ಸಂದರ್ಭದಲ್ಲಿ 2022-23ನೇ  ಸಾಲಿನ ಆಯವ್ಯಯದಲ್ಲಿ ಮುಖ್ಯಮಂತ್ರಿ  ಬಸವರಾಜ ಬೊಮ್ಮಾಯಿ ಅವರು ರಾಜ್ಯದಲ್ಲಿರುವ  25ರಿಂದ 30 ಲಕ್ಷ ಜನಸಂಖ್ಯೆ ಹೊಂದಿರುವ ರಾಜಕೀಯ, ಸಾಮಾಜಿಕವಾಗಿ ಹಿಂದುಳಿದ  ಮಾಲಗಾರ -ಮಾಳಿ ಸಮಾಜದ ಬಹುದಿನಗಳ ಬೇಡಿಕೆಯಾದ ನೀಲೂರು ನಿಂಬೆಕ್ಕಾದೇವಿ ಜನ್ಮ ಸ್ಥಳ ಅಭಿವೃದ್ಧಿ ಪಡಿಸುವುದು, ದೇಶದ ಮೊದಲ ಶಿಕ್ಷಕಿ ಸಾವಿತ್ರಿ ಬಾಯಿ ಪುಲೆಯವರ ಹೆಸರಿನಲ್ಲಿ ವಾರ್ಷಿಕ ರಾಜ್ಯ ಪ್ರಶಸ್ತಿ ನೀಡುವುದು ಹಾಗೂ ಮಾಳಿ-  ಮಾಲಗಾರ ಸಮಾಜ ಸೇರಿ 9 ಹಿಂದುಳಿದ  ಸಮುದಾಯದ ಅಭಿವೃದ್ಧಿಗೆ 400 ಕೋಟಿ ಅನುದಾನವನ್ನು ಘೋಷಣೆ ಮಾಡಿದ್ದಾರೆ.

ಮುಖ್ಯಮಂತ್ರಿಯವರಿಗೆ ಮೊದಲು ಬೇಡಿಕೆ ಈಡೇರಿಸಲು ಪತ್ರ ಕಳುಹಿಸಿದ ಕುಡಚಿ ಶಾಸಕ ಪಿ ರಾಜೀವ ಸೇರಿದಂತೆ ಸಮಾಜದ  ಬೇಡಿಕೆ ಈಡೇರಿಸಲಿಕ್ಕೆ ಸರಕಾರಕ್ಕೆ ಸಲಹೆ ನೀಡಿದ ಶಾಸಕರು, ಸಚಿವರು, ವಿಧಾನ ಪರಿಷತ್ ಸದಸ್ಯರು, ಸಮಾಜದ ಮುಖಂಡರಿಗೆ ಮಾಳಿ / ಮಾಲಗಾರ ಸಮಾಜ ಹಾಗೂ ಹಳ್ಳೂರ ಗ್ರಾಮದ  ಯುವ ಮುಖಂಡ ಸಮಾಜ ಸೇವಕ ಮುರಿಗೆಪ್ಪ ಮಾಲಗಾರ ಅವರು ಅಭಿನಂದನೆಗಳು ಸಲ್ಲಿಸಿದ್ದಾರೆ. 

ಇತ್ತೀಚಿನ ಸುದ್ದಿ

ಜಾಹೀರಾತು