7:57 PM Wednesday12 - November 2025
ಬ್ರೇಕಿಂಗ್ ನ್ಯೂಸ್
ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ… ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ… ಕೇಂದ್ರ ಸರ್ಕಾರದ ಸಾಲ ಕೊಡಿಸುವುದಾಗಿ ಮಹಿಳೆಯರಿಗೆ ಲಕ್ಷಕ್ಕೂ ಅಧಿಕ ವಂಚನೆ: ಮಡಿಕೇರಿ ನಿವಾಸಿ… Sports | ಖೇಲೋ ಇಂಡಿಯಾ ಮಹಿಳಾ ಹಾಕಿ ಟೂರ್ನಿ: ಕುಶಾಲನಗರದ ದಿಶಾ ನಿಡ್ಯಮಲೆ… ಸದ್ಯದಲ್ಲಿ ಸರ್ಕಾರಿ ಶಾಲೆಗಳಿಗೆ ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ ಕಬ್ಬು ಬೆಳೆಗಾರರ ಕಿವಿಗೆ ಹೂವು ಇಟ್ಟ ರಾಜ್ಯ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ಜವಾಬ್ದಾರಿಯಿಂದ ನುಣುಚಿಕೊಳ್ಳಲು ಪ್ರಧಾನಿಗೆ ಸಿಎಂ ಪತ್ರ: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ ಯುವಕನ ಅನುಮಾನಾಸ್ಪದ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ

ಇತ್ತೀಚಿನ ಸುದ್ದಿ

ಮಾನಹಾನಿ ಪ್ರಕರಣ ಆರೋಪಿಗಳನ್ನು ಬಂಧಿಸುವಲ್ಲಿ ಯಾಕೆ ಪೊಲೀಸ್ ಇಲಾಖೆ ವಿಫಲ?

26/10/2022, 22:04

ಹೆಣ್ಣುಮಕ್ಕಳನ್ನು ಭಾರತದಲ್ಲಿ ಪೂಜನೀಯ ಭಾವನೆಯಲ್ಲಿ ನೋಡುತ್ತೇವೆ. ಆದರೆ ಇತ್ತೀಚೆಗೆ ಸಾಮಾಜಿಕ ಕಾರ್ಯಕರ್ತೆ ಪ್ರತಿಭಾ ಕುಳಾಯಿ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗವಾಗಿ ಮಾನಹಾನಿಕಾರವಾಗಿ ಬರೆದಿರುವ ಆರೋಪಿಗಳನ್ನು ಇನ್ನೂ ಬಂಧಿಸಿಲ್ಲ. ಈ ಪ್ರಕರಣದ ಬಗ್ಗೆ ಸೂಕ್ತ ತನಿಖೆ ನಡಸುವಂತೆ ಮಂಗಳೂರು ಪೊಲೀಸ್ ಕಮೀಷನರ್‌ಗೆ ಖುದ್ದಾಗಿ ದೂರನ್ನೂ ನೀಡಲಾಗಿದೆ. ಹಲವಾರು ಸಂಘಟನೆಗಳಿಂದ ಆಗ್ರಹಗಳೂ ಕೇಳಿ ಬಂದಿವೆ. ಇಷ್ಟಿದ್ದರೂ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸ್ ಇಲಾಖೆ ದುರ್ಬಲ ಆಗಿದೆಯೇ? ಆರೋಪಿಯನ್ನು ಬಂಧಿಸಲು ಯಾಕೆ ಮೀನಮೇಷ ಎನಿಸುತ್ತಾರೆ? ಈ ಪ್ರಕರಣವನ್ನು ಇಡೀ ಸಮಾಜ ಗಮನಿಸುತ್ತಿದೆ. ಈ ಪ್ರಕರಣ ಹೆಣ್ಣು ಕುಲಕ್ಕೆ ಅವಮಾನ ಮಾಡಿದಂತಿದೆ. ಪ್ರತಿಭಾ ಕುಳಾಯಿ ಮಾತ್ರವಲ್ಲ ಯಾವುದೇ ಹೆಣ್ಣುಮಕ್ಕಳಿಗೆ ಈ ರೀತಿಯ ದೌರ್ಜನ್ಯವಾದರೆ, ಸೂಕ್ತ ಕ್ರಮ‌ಕೈಗೊಳ್ಳುವುದು ಸರ್ಕಾರದ ಕರ್ತವ್ಯ. ಈ ಬಗ್ಗೆ ಯಾಕೆ ಸರ್ಕಾರ ಮೌನ ವಹಿಸಿದೆ?. ಸಣ್ಣಪುಟ್ಟ ಘಟನೆಗಳ ಬಗ್ಗೆ ನಿರ್ಧಾರ ಕೈಗೊಳ್ಳುವ ಪೊಲೀಸ್ ಇಲಾಖೆ ಈ ಪ್ರಕರಣದ ಬಗ್ಗೆ ಯಾಕೆ ಮೌನವಹಿಸಿದೆ?

-ಪದ್ಮರಾಜ್ ಆರ್.
ವಕೀಲರು ಮತ್ತು ಸಾಮಾಜಿಕ ಚಿಂತಕರು ಮಂಗಳೂರು

ಇತ್ತೀಚಿನ ಸುದ್ದಿ

ಜಾಹೀರಾತು