9:58 AM Thursday5 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಮಾಣಿ: ಕರ್ನಾಟಕ ಪ್ರೌಢಶಾಲೆಯಲ್ಲಿ ರಾಜ್ಯೋತ್ಸವ ಕವಿಗೋಷ್ಠಿ

03/11/2024, 11:55

ಬಂಟ್ವಾಳ(reporterkarnataka.com): ಕರ್ನಾಟಕ ರಾಜ್ಯ ಬರಹಗಾರರ ಸಂಘ
ಹೂವಿನಹಡಗಲಿ ಜಿಲ್ಲಾ ಬರಹಗಾರರ ಸಂಘ ದಕ್ಷಿಣ ಕನ್ನಡ ಮತ್ತು ಕರ್ನಾಟಕ ಪ್ರೌಢ ಶಾಲೆ ಮಾಣಿ ಇವರ ಸಹಯೋಗದಲ್ಲಿ ಕರ್ನಾಟಕ ರಾಜ್ಯೋತ್ಸವ ಕವಿಗೋಷ್ಠಿ ನಡೆಯಿತು.


ಸರಕಾರಿ ಪ್ರೌಢಶಾಲೆ ಕಬಕದ ಶಿಕ್ಷಕಿ, ಕವಿ, ಸಾಹಿತಿ ಶಾಂತಾ ಪುತ್ತೂರು ಅಧ್ಯಕ್ಷತೆ ವಹಿಸಿದ್ದರು. ಬರಹಗಾರರ ಸಂಘದ ಜಿಲ್ಲಾಧ್ಯಕ್ಷ ಜಯಾನಂದ ಪೆರಾಜೆ ಮುಖ್ಯ ಅತಿಥಿಯಾಗಿ ಕನ್ನಡ ನಾಡು ನುಡಿ, ಸಂಸ್ಕೃತಿಯ ಉಪನ್ಯಾಸ ನೀಡಿದರು. ರಾಜ್ಯೋತ್ಸವ ಕವಿಗೋಷ್ಠಿಗೆ ಉಪನ್ಯಾಸಕಿ ಗೀತಾ ಕೊಂಕೋಡಿ ಕವನ ವಾಚಿಸಿ ಚಾಲನೆ ನೀಡಿದರು.
ಹಿರಿಯ ಕವಿಗಳಾದ ಎಂ. ಡಿ. ಮಂಚಿ, ಡಾ.ಮೈತ್ರಿ ಭಟ್ ವಿಟ್ಲ, ಆನಂದ ರೈ ಅಡ್ಕಸ್ಥಳ, ಸತೀಶ್ ಬಿಳಿಯೂರು, ಎಸ್. ಜಯಶ್ರೀ ಶೆಣೈ ಬಂಟ್ವಾಳ, ರವೀಂದ್ರ ಕುಕ್ಕಾಜೆ, ಹೇಮಂತ್ ಕುಮಾರ್ ಡಿ, ಶ್ವೇತಾ ಡಿ.ಬಡಗಬೆಳ್ಳೂರು, ವಿಸ್ಮಿತಾ ಎಂ. ಪಡುಮಲೆ, ಚೇತನ್ ಹೆಚ್.ಎಂ, ದೇವಕಿ ಜೆ.ಜಿ ಬನ್ನೂರು, ಶ್ರೀಶಾವಾಸವಿ ತುಳುನಾಡ್, ಫಿಲೋಮಿನಾ ಐಡಾ ಲೋಬೊ, ಜಯರಾಮ ಕಾಂಚನ, ಯಶೋದಾ, ಮರಿಯಮ್ಮ ಸ್ವಾಬಿರಾ, ಜಮಿಹಾ ತಮ್ಮ ಸ್ವರಚಿತ ಕವನ ವಾಚಿಸಿದರು.
ಬರಹಗಾರರು ಹೆಚ್ಚು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು.ಕೇವಲ ನವಯುಗದ ಸಾಹಿತ್ಯಗಳನ್ನಷ್ಟೇ ಅಲ್ಲ ಹಳಗನ್ನಡ, ನಡುಗನ್ನಡವನ್ನೂ ಓದುವ ಅಭ್ಯಾಸ ಮಾಡಿಕೊಳ್ಳಬೇಕು.ಸಾಹಿತ್ಯದ ವಿವಿಧ ಪ್ರಕಾರಗಳಲ್ಲಿ ಬರೆಯಲು ಅಭ್ಯಾಸ ಮಾಡಬೇಕು .ಕನ್ನಡವನ್ನು ನಿತ್ಯ ಬಳಸಬೇಕು.ಬರವಣಿಗೆಯಲ್ಲಿ ನಿರಂತರತೆ ಕಾಯ್ದುಕೊಳ್ಳಬೇಕು ಎಂದು ಅಧ್ಯಕ್ಷತೆ ನೆಲೆಯಲ್ಲಿ ಶಾಂತಾ ಪುತ್ತೂರು ಹೇಳಿದರು. ಕವನಗಳ ವಿಮರ್ಶೆ ಮಾಡಿ ಸ್ವರಚಿತ ಕವನ ವಾಚನ ಮಾಡಿದರು.
ಜಯರಾಮ ಕಾಂಚನ ಸ್ವಾಗತಿಸಿದರು.ಅಪೂರ್ವ ಕಾರಂತ್ ಕಾರ್ಯಕ್ರಮ ನಿರೂಪಿಸಿದರು. ಶ್ಯಾಮಲಾ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು