5:11 AM Tuesday28 - April 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು…

ಇತ್ತೀಚಿನ ಸುದ್ದಿ

ಮಾಣಿ: ಕರ್ನಾಟಕ ಪ್ರೌಢಶಾಲೆಯಲ್ಲಿ ರಾಜ್ಯೋತ್ಸವ ಕವಿಗೋಷ್ಠಿ

03/11/2024, 11:55

ಬಂಟ್ವಾಳ(reporterkarnataka.com): ಕರ್ನಾಟಕ ರಾಜ್ಯ ಬರಹಗಾರರ ಸಂಘ
ಹೂವಿನಹಡಗಲಿ ಜಿಲ್ಲಾ ಬರಹಗಾರರ ಸಂಘ ದಕ್ಷಿಣ ಕನ್ನಡ ಮತ್ತು ಕರ್ನಾಟಕ ಪ್ರೌಢ ಶಾಲೆ ಮಾಣಿ ಇವರ ಸಹಯೋಗದಲ್ಲಿ ಕರ್ನಾಟಕ ರಾಜ್ಯೋತ್ಸವ ಕವಿಗೋಷ್ಠಿ ನಡೆಯಿತು.


ಸರಕಾರಿ ಪ್ರೌಢಶಾಲೆ ಕಬಕದ ಶಿಕ್ಷಕಿ, ಕವಿ, ಸಾಹಿತಿ ಶಾಂತಾ ಪುತ್ತೂರು ಅಧ್ಯಕ್ಷತೆ ವಹಿಸಿದ್ದರು. ಬರಹಗಾರರ ಸಂಘದ ಜಿಲ್ಲಾಧ್ಯಕ್ಷ ಜಯಾನಂದ ಪೆರಾಜೆ ಮುಖ್ಯ ಅತಿಥಿಯಾಗಿ ಕನ್ನಡ ನಾಡು ನುಡಿ, ಸಂಸ್ಕೃತಿಯ ಉಪನ್ಯಾಸ ನೀಡಿದರು. ರಾಜ್ಯೋತ್ಸವ ಕವಿಗೋಷ್ಠಿಗೆ ಉಪನ್ಯಾಸಕಿ ಗೀತಾ ಕೊಂಕೋಡಿ ಕವನ ವಾಚಿಸಿ ಚಾಲನೆ ನೀಡಿದರು.
ಹಿರಿಯ ಕವಿಗಳಾದ ಎಂ. ಡಿ. ಮಂಚಿ, ಡಾ.ಮೈತ್ರಿ ಭಟ್ ವಿಟ್ಲ, ಆನಂದ ರೈ ಅಡ್ಕಸ್ಥಳ, ಸತೀಶ್ ಬಿಳಿಯೂರು, ಎಸ್. ಜಯಶ್ರೀ ಶೆಣೈ ಬಂಟ್ವಾಳ, ರವೀಂದ್ರ ಕುಕ್ಕಾಜೆ, ಹೇಮಂತ್ ಕುಮಾರ್ ಡಿ, ಶ್ವೇತಾ ಡಿ.ಬಡಗಬೆಳ್ಳೂರು, ವಿಸ್ಮಿತಾ ಎಂ. ಪಡುಮಲೆ, ಚೇತನ್ ಹೆಚ್.ಎಂ, ದೇವಕಿ ಜೆ.ಜಿ ಬನ್ನೂರು, ಶ್ರೀಶಾವಾಸವಿ ತುಳುನಾಡ್, ಫಿಲೋಮಿನಾ ಐಡಾ ಲೋಬೊ, ಜಯರಾಮ ಕಾಂಚನ, ಯಶೋದಾ, ಮರಿಯಮ್ಮ ಸ್ವಾಬಿರಾ, ಜಮಿಹಾ ತಮ್ಮ ಸ್ವರಚಿತ ಕವನ ವಾಚಿಸಿದರು.
ಬರಹಗಾರರು ಹೆಚ್ಚು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು.ಕೇವಲ ನವಯುಗದ ಸಾಹಿತ್ಯಗಳನ್ನಷ್ಟೇ ಅಲ್ಲ ಹಳಗನ್ನಡ, ನಡುಗನ್ನಡವನ್ನೂ ಓದುವ ಅಭ್ಯಾಸ ಮಾಡಿಕೊಳ್ಳಬೇಕು.ಸಾಹಿತ್ಯದ ವಿವಿಧ ಪ್ರಕಾರಗಳಲ್ಲಿ ಬರೆಯಲು ಅಭ್ಯಾಸ ಮಾಡಬೇಕು .ಕನ್ನಡವನ್ನು ನಿತ್ಯ ಬಳಸಬೇಕು.ಬರವಣಿಗೆಯಲ್ಲಿ ನಿರಂತರತೆ ಕಾಯ್ದುಕೊಳ್ಳಬೇಕು ಎಂದು ಅಧ್ಯಕ್ಷತೆ ನೆಲೆಯಲ್ಲಿ ಶಾಂತಾ ಪುತ್ತೂರು ಹೇಳಿದರು. ಕವನಗಳ ವಿಮರ್ಶೆ ಮಾಡಿ ಸ್ವರಚಿತ ಕವನ ವಾಚನ ಮಾಡಿದರು.
ಜಯರಾಮ ಕಾಂಚನ ಸ್ವಾಗತಿಸಿದರು.ಅಪೂರ್ವ ಕಾರಂತ್ ಕಾರ್ಯಕ್ರಮ ನಿರೂಪಿಸಿದರು. ಶ್ಯಾಮಲಾ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು