5:35 PM Wednesday19 - August 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :…

ಇತ್ತೀಚಿನ ಸುದ್ದಿ

ಮಾಣಿ: ಕರ್ನಾಟಕ ಪ್ರೌಢಶಾಲೆಯಲ್ಲಿ ರಾಜ್ಯೋತ್ಸವ ಕವಿಗೋಷ್ಠಿ

03/11/2024, 11:55

ಬಂಟ್ವಾಳ(reporterkarnataka.com): ಕರ್ನಾಟಕ ರಾಜ್ಯ ಬರಹಗಾರರ ಸಂಘ
ಹೂವಿನಹಡಗಲಿ ಜಿಲ್ಲಾ ಬರಹಗಾರರ ಸಂಘ ದಕ್ಷಿಣ ಕನ್ನಡ ಮತ್ತು ಕರ್ನಾಟಕ ಪ್ರೌಢ ಶಾಲೆ ಮಾಣಿ ಇವರ ಸಹಯೋಗದಲ್ಲಿ ಕರ್ನಾಟಕ ರಾಜ್ಯೋತ್ಸವ ಕವಿಗೋಷ್ಠಿ ನಡೆಯಿತು.


ಸರಕಾರಿ ಪ್ರೌಢಶಾಲೆ ಕಬಕದ ಶಿಕ್ಷಕಿ, ಕವಿ, ಸಾಹಿತಿ ಶಾಂತಾ ಪುತ್ತೂರು ಅಧ್ಯಕ್ಷತೆ ವಹಿಸಿದ್ದರು. ಬರಹಗಾರರ ಸಂಘದ ಜಿಲ್ಲಾಧ್ಯಕ್ಷ ಜಯಾನಂದ ಪೆರಾಜೆ ಮುಖ್ಯ ಅತಿಥಿಯಾಗಿ ಕನ್ನಡ ನಾಡು ನುಡಿ, ಸಂಸ್ಕೃತಿಯ ಉಪನ್ಯಾಸ ನೀಡಿದರು. ರಾಜ್ಯೋತ್ಸವ ಕವಿಗೋಷ್ಠಿಗೆ ಉಪನ್ಯಾಸಕಿ ಗೀತಾ ಕೊಂಕೋಡಿ ಕವನ ವಾಚಿಸಿ ಚಾಲನೆ ನೀಡಿದರು.
ಹಿರಿಯ ಕವಿಗಳಾದ ಎಂ. ಡಿ. ಮಂಚಿ, ಡಾ.ಮೈತ್ರಿ ಭಟ್ ವಿಟ್ಲ, ಆನಂದ ರೈ ಅಡ್ಕಸ್ಥಳ, ಸತೀಶ್ ಬಿಳಿಯೂರು, ಎಸ್. ಜಯಶ್ರೀ ಶೆಣೈ ಬಂಟ್ವಾಳ, ರವೀಂದ್ರ ಕುಕ್ಕಾಜೆ, ಹೇಮಂತ್ ಕುಮಾರ್ ಡಿ, ಶ್ವೇತಾ ಡಿ.ಬಡಗಬೆಳ್ಳೂರು, ವಿಸ್ಮಿತಾ ಎಂ. ಪಡುಮಲೆ, ಚೇತನ್ ಹೆಚ್.ಎಂ, ದೇವಕಿ ಜೆ.ಜಿ ಬನ್ನೂರು, ಶ್ರೀಶಾವಾಸವಿ ತುಳುನಾಡ್, ಫಿಲೋಮಿನಾ ಐಡಾ ಲೋಬೊ, ಜಯರಾಮ ಕಾಂಚನ, ಯಶೋದಾ, ಮರಿಯಮ್ಮ ಸ್ವಾಬಿರಾ, ಜಮಿಹಾ ತಮ್ಮ ಸ್ವರಚಿತ ಕವನ ವಾಚಿಸಿದರು.
ಬರಹಗಾರರು ಹೆಚ್ಚು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು.ಕೇವಲ ನವಯುಗದ ಸಾಹಿತ್ಯಗಳನ್ನಷ್ಟೇ ಅಲ್ಲ ಹಳಗನ್ನಡ, ನಡುಗನ್ನಡವನ್ನೂ ಓದುವ ಅಭ್ಯಾಸ ಮಾಡಿಕೊಳ್ಳಬೇಕು.ಸಾಹಿತ್ಯದ ವಿವಿಧ ಪ್ರಕಾರಗಳಲ್ಲಿ ಬರೆಯಲು ಅಭ್ಯಾಸ ಮಾಡಬೇಕು .ಕನ್ನಡವನ್ನು ನಿತ್ಯ ಬಳಸಬೇಕು.ಬರವಣಿಗೆಯಲ್ಲಿ ನಿರಂತರತೆ ಕಾಯ್ದುಕೊಳ್ಳಬೇಕು ಎಂದು ಅಧ್ಯಕ್ಷತೆ ನೆಲೆಯಲ್ಲಿ ಶಾಂತಾ ಪುತ್ತೂರು ಹೇಳಿದರು. ಕವನಗಳ ವಿಮರ್ಶೆ ಮಾಡಿ ಸ್ವರಚಿತ ಕವನ ವಾಚನ ಮಾಡಿದರು.
ಜಯರಾಮ ಕಾಂಚನ ಸ್ವಾಗತಿಸಿದರು.ಅಪೂರ್ವ ಕಾರಂತ್ ಕಾರ್ಯಕ್ರಮ ನಿರೂಪಿಸಿದರು. ಶ್ಯಾಮಲಾ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು