8:22 AM Saturday4 - April 2026
ಬ್ರೇಕಿಂಗ್ ನ್ಯೂಸ್
ವಾರ್ ಎಫೆಕ್ಟ್‌‌ | ಇವಿಗೆ ಹೆಚ್ಚಿದ ಡಿಮ್ಯಾಂಡ್: ತಿಂಗಳಲ್ಲಿ 29 ಸಾವಿರಕ್ಕೂ ಅಧಿಕ… ಗೋಪಾಲಪುರದ ಸಂತ ಅಂತೋಣಿ ಚರ್ಚ್ ನಲ್ಲಿ ಗುಡ್ ಫ್ರೈಡೆಯನ್ನು ಶಿಲುಬೆಟ್ಟದಲ್ಲಿ ಶ್ರದ್ದಾ ಭಕ್ತಿಯಿಂದ… ವಿರಾಜಪೇಟೆಯಲ್ಲಿ ಸಂಭ್ರಮದ ಹನುಮ ಜಯಂತಿ ಆಚರಣೆ: ಸಹಸ್ರಾರು ಸಂಖ್ಯೆಯಲ್ಲಿ ಸಮಾಗಮ ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ

ಇತ್ತೀಚಿನ ಸುದ್ದಿ

ಮಾಟೆಗುರಿಯ 19 ಕುಟುಂಬಗಳಿಗೆ 40 ವರ್ಷದ ಬಳಿಕ ಹಕ್ಕುಪತ್ರ ಭಾಗ್ಯ: ಶಾಸಕ ಡಾ. ಭರತ್ ಶೆಟ್ಟಿ ವಿತರಣೆ

24/02/2023, 23:51

ಸುರತ್ಕಲ್(reporterkarnataka.com): ಇಲ್ಲಿನ ಮಾಟೆಗುರಿಯಲ್ಲಿ ಸರಕಾರಿ ಡಿಸಿ ಮನ್ನಾ ಜಾಗದಲ್ಲಿ ಕಳೆದ 40 ವರ್ಷಗಳಿಂದ ವಾಸವಿದ್ದು, ಒಕ್ಕಲೇಳುವ ಭೀತಿಯಲ್ಲಿದ್ದ 19 ಕುಟುಂಬಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ತಮ್ಮ ಸುರತ್ಕಲ್ ಕಚೇರಿಯಲ್ಲಿ ಗುರುವಾರ ಹಕ್ಕು ಪತ್ರ ವಿತರಿಸುವ ಮೂಲಕ ಶುಭ ಹಾರೈಸಿದರು.

ಇದರಿಂದ ಕಳೆದ 40 ವರ್ಷಗಳಿಂದ ಸದಾ ಭೀತಿಯಲ್ಲಿಯೇ ಬದುಕು ಸವೆಸುತ್ತಿದ್ದ 19 ಕುಟುಂಬಗಳು ನಿಟ್ಟುಸಿರುಬಿಟ್ಟಿವೆ. ಕಾನೂನಾತ್ಮಕವಾಗಿ ಹೋರಾಟ ನಡೆಸಿ ,ತಿದ್ದುಪಡಿ ಮಾಡುವ ಮೂಲಕ ಹಕ್ಕು ಪತ್ರ ವಿತರಣೆಗೆ ಕ್ರಮ ಕೈಗೊಂಡ ಶಾಸಕರಿಗೆ ಜನತೆ ಕೃತಜ್ಞತೆ ಸಲ್ಲಿಸಿದರು.
ಹಲವಾರು ಶಾಸಕರನ್ನು ಕಂಡಿದ್ದೇವೆ. ಈ ಕೆಲಸ ಆಗದು ಎಂದು ಕೈ ಬಿಟ್ಟವರೇ ಹೆಚ್ಚು. ಆದರೆ ಶಾಸಕರಾದ ಡಾ. ವೈ ಭರತ್ ಶೆಟ್ಟಿಯವರ ಛಲ, ಮುತುವರ್ಜಿಯಿಂದ ನಮಗೆ ಸ್ವಂತ ಸೂರು ಸಿಕ್ಕುವಂತಾಯಿತು ಎಂದು ಹರ್ಷ ವ್ಯಕ್ತಪಡಿಸಿದರು.


ಶಾಸಕರು ಮಾತನಾಡಿ, ಈ ಕುಟುಂಬಗಳಿಗೆ ಹಕ್ಕು ಪತ್ರ ಒದಗಿಸಿರುವುದು ನನ್ನ ಶ್ರೇಷ್ಟ ಕಾರ್ಯಗಳಲ್ಲಿ ಒಂದಾಗಿದೆ .ಇದರ ಹಿಂದೆ ಕೆಲಸ ಮಾಡಿದ ಸಾಮಾಜಿಕ ಕಾರ್ಯಕರ್ತರು,ಮನಪಾ ಸದಸ್ಯರನ್ನು ಶ್ಲಾಘಿಸಿದರು.
ಮನಪಾ ಸದಸ್ಯ ವರುಣ್ ಚೌಟ, ಪ್ರಮುಖರಾದ ರಮಾನಾಥ್ ಕುಲಾಲ್ , ರಮೇಶ್ ಕೋಡಿಕೆರೆ ಅಬೂಬಕರ್,ಉಪತಹಶೀಲ್ದಾರ್ ನವೀನ್ ,ಕಂದಾಯ ಆದಿಕಾರಿ ರವಿಪ್ರಸಾದ್ ಮಲ್ಯ, ಗ್ರಾಮ ಕರಣಿಕ ಉಮೇಶ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು