2:13 AM Thursday28 - May 2026
ಬ್ರೇಕಿಂಗ್ ನ್ಯೂಸ್
Kodagu | ಕುಶಾಲನಗರ: 15 ದಿನದೊಳಗೆ ದುಷ್ಕರ್ಮಿಗಳ ಗುಂಡೇಟಿಗೆ 2 ಕಾಡು ಕೋಣಗಳು… ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: ಭಾರತಕ್ಕೆ ಸಿಹಿಸುದ್ದಿ ಕೊಟ್ಟ ಇರಾನ್; 10 ಇಂಡಿಯನ್ ನಾವಿಕರ… Kerala | ಮಾಜಿ ಸಿಎಂ ಪಿಣರಾಯಿ ಮನೆ ಎದುರು ಇ.ಡಿ ವಾಹನಗಳ ಮೇಲೆ… Bangalore | ಐಪಿಎಲ್ ಬೆಟ್ಟಿಂಗ್ ವಿರುದ್ಧ ಸಿಸಿಬಿ ಭರ್ಜರಿ ಕಾರ್ಯಾಚರಣೆ: 23 ಜನ… ಕಾಂಗ್ರೆಸ್‌ ಹೈಡ್ರಾಮಾಕ್ಕೆ ವಿಜಯೇಂದ್ರ ವ್ಯಂಗ್ಯ: ಸಿದ್ದರಾಮಯ್ಯ ಬಿಟ್ಟು ಯಾರೇ ಸಿಎಂ ಆದ್ರೂ ಅದು… ಬೆಂಗಳೂರಿಗೆ ಮಹಾಮಾರಿ ಎಬೋಲಾ ಎಂಟ್ರಿ?: ಉಗಾಂಡದ ಮಹಿಳೆ ಐಸೋಲೇಷನ್‌ನಲ್ಲಿ..! ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ 30ರಂದು ಮಂಗಳೂರಿಗೆ: ಧರ್ಮಸ್ಥಳದಲ್ಲಿ ವಾಸ್ತವ್ಯ ಗಂಡನ ಸಾವಿನ ನೋವಿನಲ್ಲೂ ಮಾನವೀಯತೆ ಮೆರೆದ ಗರ್ಭಿಣಿ ಪತ್ನಿ! ಕಿಡ್ನಿ, ಹಾರ್ಟ್ ಮತ್ತು… ಕಾಫಿ ತೋಟದಲ್ಲಿ ಕಾಡಾನೆಗಳ ‘ರೌದ್ರ ನರ್ತನ: ಅರಣ್ಯ ಸಿಬ್ಬಂದಿಯನ್ನೇ ಬೆನ್ನಟ್ಟಿದ ಗಜಪಡೆ ಮೇಕೆದಾಟು ವಿವಾದ: ತಮಿಳುನಾಡು ಸಿಎಂ ವಿಜಯ್ ತುರ್ತು ಸಭೆ, ಕಾನೂನು ಹೋರಾಟ ಚುರುಕುಗೊಳಿಸಲು…

ಇತ್ತೀಚಿನ ಸುದ್ದಿ

ಮಾಟೆಗುರಿಯ 19 ಕುಟುಂಬಗಳಿಗೆ 40 ವರ್ಷದ ಬಳಿಕ ಹಕ್ಕುಪತ್ರ ಭಾಗ್ಯ: ಶಾಸಕ ಡಾ. ಭರತ್ ಶೆಟ್ಟಿ ವಿತರಣೆ

24/02/2023, 23:51

ಸುರತ್ಕಲ್(reporterkarnataka.com): ಇಲ್ಲಿನ ಮಾಟೆಗುರಿಯಲ್ಲಿ ಸರಕಾರಿ ಡಿಸಿ ಮನ್ನಾ ಜಾಗದಲ್ಲಿ ಕಳೆದ 40 ವರ್ಷಗಳಿಂದ ವಾಸವಿದ್ದು, ಒಕ್ಕಲೇಳುವ ಭೀತಿಯಲ್ಲಿದ್ದ 19 ಕುಟುಂಬಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ತಮ್ಮ ಸುರತ್ಕಲ್ ಕಚೇರಿಯಲ್ಲಿ ಗುರುವಾರ ಹಕ್ಕು ಪತ್ರ ವಿತರಿಸುವ ಮೂಲಕ ಶುಭ ಹಾರೈಸಿದರು.

ಇದರಿಂದ ಕಳೆದ 40 ವರ್ಷಗಳಿಂದ ಸದಾ ಭೀತಿಯಲ್ಲಿಯೇ ಬದುಕು ಸವೆಸುತ್ತಿದ್ದ 19 ಕುಟುಂಬಗಳು ನಿಟ್ಟುಸಿರುಬಿಟ್ಟಿವೆ. ಕಾನೂನಾತ್ಮಕವಾಗಿ ಹೋರಾಟ ನಡೆಸಿ ,ತಿದ್ದುಪಡಿ ಮಾಡುವ ಮೂಲಕ ಹಕ್ಕು ಪತ್ರ ವಿತರಣೆಗೆ ಕ್ರಮ ಕೈಗೊಂಡ ಶಾಸಕರಿಗೆ ಜನತೆ ಕೃತಜ್ಞತೆ ಸಲ್ಲಿಸಿದರು.
ಹಲವಾರು ಶಾಸಕರನ್ನು ಕಂಡಿದ್ದೇವೆ. ಈ ಕೆಲಸ ಆಗದು ಎಂದು ಕೈ ಬಿಟ್ಟವರೇ ಹೆಚ್ಚು. ಆದರೆ ಶಾಸಕರಾದ ಡಾ. ವೈ ಭರತ್ ಶೆಟ್ಟಿಯವರ ಛಲ, ಮುತುವರ್ಜಿಯಿಂದ ನಮಗೆ ಸ್ವಂತ ಸೂರು ಸಿಕ್ಕುವಂತಾಯಿತು ಎಂದು ಹರ್ಷ ವ್ಯಕ್ತಪಡಿಸಿದರು.


ಶಾಸಕರು ಮಾತನಾಡಿ, ಈ ಕುಟುಂಬಗಳಿಗೆ ಹಕ್ಕು ಪತ್ರ ಒದಗಿಸಿರುವುದು ನನ್ನ ಶ್ರೇಷ್ಟ ಕಾರ್ಯಗಳಲ್ಲಿ ಒಂದಾಗಿದೆ .ಇದರ ಹಿಂದೆ ಕೆಲಸ ಮಾಡಿದ ಸಾಮಾಜಿಕ ಕಾರ್ಯಕರ್ತರು,ಮನಪಾ ಸದಸ್ಯರನ್ನು ಶ್ಲಾಘಿಸಿದರು.
ಮನಪಾ ಸದಸ್ಯ ವರುಣ್ ಚೌಟ, ಪ್ರಮುಖರಾದ ರಮಾನಾಥ್ ಕುಲಾಲ್ , ರಮೇಶ್ ಕೋಡಿಕೆರೆ ಅಬೂಬಕರ್,ಉಪತಹಶೀಲ್ದಾರ್ ನವೀನ್ ,ಕಂದಾಯ ಆದಿಕಾರಿ ರವಿಪ್ರಸಾದ್ ಮಲ್ಯ, ಗ್ರಾಮ ಕರಣಿಕ ಉಮೇಶ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು