12:25 AM Friday4 - July 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ… ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ದಿನ ದೂರವಿಲ್ಲ: ಬೀದರ್ ನಲ್ಲಿ ಸಚಿವೆ ಲಕ್ಷ್ಮೀ… ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ

ಇತ್ತೀಚಿನ ಸುದ್ದಿ

ಮಾತಾ ಅಮೃತಾನಂದಮಯಿ ಮಠದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ: ಬಾಲಲೀಲೆ ಕ್ರೀಡೋತ್ಸವ

08/09/2023, 17:36

ಮಂಗಳೂರು(reporterkarnataka.com): ಮಂಗಳೂರಿನ ಮಾತಾ ಅಮೃತಾನಂದಮಯಿ ಮಠದಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿಯನ್ನು ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.
ಮಧ್ಯಾಹ್ನ ಶ್ರೀ ಕೃಷ್ಣನ ಬಾಲಲೀಲೆಗಳನ್ನು ನೆನಪಿಸುವ ಕ್ರೀಡೋತ್ಸವ, ಮುದ್ದು ಬಾಲಕೃಷ್ಣ, ಮೊಸರು ಕುಡಿಕೆ ಮುಂತಾದ ಕಾರ್ಯಕ್ರಮಗಳು ನೆರೆದಿದ್ದ ಜನಸ್ತೋಮವನ್ನು ರಂಜಿಸಿತು.
ಸಂಜೆ ಸಾಂಸ್ಕೃತಿಕ ಕಲಾ ಪ್ರದರ್ಶನ ಹಾಗೂ ಸ್ಪರ್ಧಾ ಕಾರ್ಯಕ್ರಮವನ್ನು ಗಣ್ಯ ಅತಿಥಿಗಳಾಗಿ ಆಗಮಿಸಿದ ವಿಧಾನ ಪರಿಷತ್ ಸದಸ್ಯರಾದ ತಿಪ್ಪಣಪ್ಪ ಕಮಕನೂರು ಇವರು ಸಂಪೂಜ್ಯ ಸ್ವಾಮಿನಿ ಮಂಗಳಾಮೃತ ಪ್ರಾಣ ಇವರ ದಿವ್ಯ ಉಪಸ್ಥಿತಿಯಲ್ಲಿ ಜ್ಯೋತಿ ಬೆಳಗಿಸಿ ಚಾಲನೆ ನೀಡಿದರು. ಅವರು ಈ ಸಂದರ್ಭದಲ್ಲಿ ಮಾತನಾಡಿ ಸದ್ಗುರು ಶ್ರೀ ಮಾತಾ ಅಮೃತಾನಂದಮಯಿ ದೇವಿಯವರು ಮನುಕುಲದ ಉದ್ಧಾರಕ್ಕಾಗಿ ಶ್ರಮಿಸುತ್ತಿದ್ದಾರೆ.ಆಧ್ಯಾತ್ಮಿಕ, ಶೈಕ್ಷಣಿಕ, ವೈದ್ಯಕೀಯ ಹಾಗೂ ಸಾಮಾಜಿಕ ಸೇವೆಗಳ ಮೂಲಕ ವಿಶ್ವದಾದ್ಯಂತ ನೆಲೆಸಿರುವ ಅವರ ಶಾಖಾಮಠಗಳು ಸೇವೆ ನೀಡುತ್ತಿದೆ.ಅಮ್ಮನವರೂ ಕೇಂದ್ರ ಸರಕಾರದ ವಿವಿಧ ಸಮಾಜಮುಖಿ ಕಾರ್ಯಕ್ರಮಗಳಿಗೆ ಕೋಟ್ಯಾಂತರ ರೂಪಾಯಿಗಳ ಆರ್ಥಿಕ ನೆರವನ್ನೂ ನೀಡಿರುತ್ತಾರೆ.
ಮಂಗಳೂರಿನ ಈ ಮಠದ ಪರಿಸರ,ಇಲ್ಲಿನ ಶ್ರೀ ಬ್ರಹ್ಮಸ್ಥಾನ ಕ್ಷೇತ್ರ, ಅಮೃತ ವಿದ್ಯಾಲಯಂ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಅಮ್ಮನ ನಿಸ್ವಾರ್ಥ ಸೇವೆಯಲ್ಲಿ ತಾನೂ ಕಾಣಿಕೆ ನೀಡುವ ಅಭಿಲಾಷೆ ವ್ಯಕ್ತಪಡಿಸಿದರು.
ವೇದಿಕೆಯಲ್ಲಿ ಬಿ.ಕೆ.ಮೋಹನ್ ಕುಮಾರ್ (ಅಧ್ಯಕ್ಷರು ,ಅಖಿಲ ಕರ್ನಾಟಕ ಕೋಲಿ- ಗಂಗಾಮತ ಸಂಘ ,ಬೆಂಗಳೂರು),
ಡಾ.ದೇವಿಪ್ರಸಾದ್ ಹೆಜಮಾಡಿ, ಚೇತನ್ ಬೆಂಗ್ರೆ,ಡಾ.ಕೆ.ಇ.ಪ್ರಕಾಶ್, ಪ್ರೊ. ಡಾ.ಚಾಂದಿನಿ ಎಸ್, ಸೇವಾ ಸಮಿತಿ ಅಧ್ಯಕ್ಷ ಡಾ. ವಸಂತ ಕುಮಾರ ಪೆರ್ಲ, ಉಪಾಧ್ಯಕ್ಷ ಸುರೇಶ್ ಅಮಿನ್, ಯತೀಶ್ ಬೈಕಂಪಾಡಿ, ಜಗದೀಶ್ ಬಂಗೇರ ಬೋಳೂರು ಉಪಸ್ಥಿತರಿದ್ದರು.
ಸಾಂಸ್ಕೃತಿಕ ಕಲಾ ಸ್ಪರ್ಧೆಯಲ್ಲಿ ಮಠದ ಪುರುಷರ ಸೇವಾ ವಿಭಾಗ ಅಮೃತ ಸೇವಕ್ ಪ್ರಥಮ ಬಹುಮಾನ ಪಡೆದರು. ಅಯುಧ್ ಯುವತಿಯರು ದ್ವಿತೀಯ ಹಾಗೂ ಅಯುಧ್ ಯುವಕರು ತೃತೀಯ ಬಹುಮಾನ ಪಡೆದರು.
ಮಧ್ಯರಾತ್ರಿಯ ತನಕ ಭಜನೆ,ಬಾಲಗೋಪಾಲ ಪೂಜೆ, ಆರತಿ ಕಾರ್ಯಕ್ರಮಗಳು ಜರುಗಿದವು.

In the Service of Amma,
Shaila Shetty

ಇತ್ತೀಚಿನ ಸುದ್ದಿ

ಜಾಹೀರಾತು