4:51 PM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಮಾವು ಬೆಳೆಗಾರರ ನೆರವಿಗೆ ಬರಲು ಸಿಎಂ , ಸಚಿವರಿಗೆ ಮನವಿ: ಟನ್ ಮಾವಿಗೆ 10 ಸಾವಿರ ಬೆಂಬಲ ಬೆಲೆ ನೀಡಲು ಆಗ್ರಹ

22/06/2021, 09:07

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಬೆಲೆ ಕುಸಿತದಿಂದ ಸಂಕಷ್ಟಕ್ಕೊಳಗಾಗಿರುವ ಮಾವು ಬೆಳೆಗಾರರ ನೆರವಿಗೆ ಕೂಡಲೇ ರಾಜ್ಯ ಸರ್ಕಾರ ಧಾವಿಸಬೇಕು ಮತ್ತು ಪ್ರತಿ ಟನ್ ಮಾವಿಗೆ ೧೦ ಸಾವಿರ ರೂ ಬೆಂಬಲ ಬೆಲೆ ನೀಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಡಾ.ವೈ.ಎ.ನಾರಾಯಣಸ್ವಾಮಿ ಮುಖ್ಯಮಂತ್ರಿಗಳು ಹಾಗೂ ತೋಟಗಾರಿಕಾ ಸಚಿವರಿಗೆ ಮನವಿ ಸಲ್ಲಿಸಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ತೋಟಗಾರಿಕಾ , ರೇಷ್ಮೆ ಸಚಿವ ಆರ್. ಶಂಕರ್ ಅವರಿಗೆ ಪತ್ರ ಬರೆದು ಮನವಿ ಮಾಡಿರುವ ಅವರು , ಕೋಲಾರ , ಚಿಕ್ಕಬಳ್ಳಾಪುರ , ಬೆಂಗಳೂರು ಗ್ರಾಮಾಂತರ , ರಾಮನಗರ ಜಿಲ್ಲೆಗಳಲ್ಲಿ ಅತಿ ಹೆಚ್ಚು ರೈತರು ಮಾವು ಬೆಳೆಯುತ್ತಾರೆ , ರಾಜ್ಯದಲ್ಲಿ ಉತ್ಪತ್ತಿಯಾಗುವ ಶೇ .೭೦ ರಷ್ಟು ಮಾವು ಈ ಪ್ರದೇಶಗಳಲ್ಲೇ ಬೆಳೆಯುತ್ತಾರೆ ಎಂದು ಗಮನಕ್ಕೆ ತಂದಿದ್ದಾರೆ .

ದೇಶ ವಿದೇಶಗಳಿಗೂ ರಫ್ತಾಗುತ್ತಿದ್ದ ಮಾವಿಗೆ ಈ ಬಾರಿ ಮಾರುಕಟ್ಟೆಯಲ್ಲಿ ಬೆಲೆ ಸಿಗುತ್ತಿಲ್ಲ , ವ್ಯಾಪಾರಿಗಳು , ದಲ್ಲಾಳಿಗಳ ಹಾವಳಿಯಿಂದಾಗಿ ಪ್ರತಿ ಟನ್ ಮಾವಿಗೆ ೩ ಸಾವಿರದಿಂದ ೫ ಸಾವಿರದವರಗೂ ಬೆಲೆ ನಿಗದಿ ಮಾಡಿ ರೈತರಿಗೆ ಮೋಸ ಮಾಡುತ್ತಿದ್ದಾರೆ ಎಂದು ತಿಳಿಸಿದ್ದಾರೆ . ಒಂದು ಎಕರೆ ಮಾವು ಬೆಳೆಯಲು ರೈತನಿಗೆ ೧೫ ರಿಂದ ೨೦ ಸಾವಿರ ರೂ ಖರ್ಚಾಗುತ್ತದೆ . ಇದರಿಂದ ರೈತರು ಬಹಳ ನಷ್ಟಕ್ಕೆ ಒಳಗಾಗಿದ್ದಾರೆ . ತಾನು ಬೆಳೆದ ಬೆಳೆಗೆ ಬೆಲೆ ಸಿಗದೇ ಆತ್ಮಹತ್ಯೆಗೆ ಶರಣಾಗುವ ಸ್ಥಿತಿಗೆ ರೈತ ತಲುಪಿದ್ದಾನೆ ಎಂದು ಗಮನಕ್ಕೆ ತಂದಿದ್ದಾರೆ .

ಇಂತಹ ಕಷ್ಟದ ಪರಿಸ್ಥಿತಿಯಲ್ಲಿ ಸರ್ಕಾರ ರೈತರ ರಕ್ಷಣೆಗೆ ಬರಬೇಕು , ತಕ್ಷಣವೇ ಮಧ್ಯೆ ಪ್ರವೇಶಿಸಿ ಪ್ರತಿ ಟನ್ ಮಾವಿಗೆ ೧೦ ಸಾವಿರ ರೂಗಳ ಬೆಂಬಲ ಬೆಲೆ ಅಥವಾ ಒಂದು ಎಕರೆ ಮಾವಿನ ಬೆಳೆಗೆ ೨೫ ಸಾವಿರ ರೂಗಳ ವಿಶೇಷ ಪರಿಹಾರವನ್ನು ಘೋಷಿಸುವ ಮೂಲಕ ಮಾವು ಬೆಳೆಗಾರರ ಹಿತ ಕಾಯಬೇಕು ಎಂದು ಮನವಿ ಮಾಡಿದ್ದಾರೆ .

ಇತ್ತೀಚಿನ ಸುದ್ದಿ

ಜಾಹೀರಾತು